Connect with us

ಅಪರಾಧ

ದರ್ಶನ್ ಎ1 ಮಾಡುವುದು ತನಿಖಾಧಿಕಾರಿಗಳಿಗೆ ಬಿಟ್ಟಿದ್ದು; ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ’ – Renukaswamy Murder Case

ಬೆಂಗಳೂರು: ದರ್ಶನ್​​​​​ರನ್ನು ಎ1 ಮಾಡ್ತಾರೋ ಎ2 ಮಾಡ್ತಾರೋ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು. ಆದರೆ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ದರ್ಶನ್ ಮತ್ತು ಆರೋಪಿಗಳ ಚಾರ್ಜ್‌ಶೀಟ್ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸ್ತಾರೆ. 90 ದಿನಗಳ ಒಳಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಬೇಕು, ಮಾಡ್ತಾರೆ. ಈ ಪ್ರಕರಣದಲ್ಲಿ ರೇಣುಕಾಸ್ವಾಮಿ ಕುಟುಂಬದವರು ನ್ಯಾಯದ ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಕೋರ್ಟ್​ನಲ್ಲಿ ಹೋರಾಟ ನಡೆಯುತ್ತದೆ ಎಂದರು.

ರಾಜ್ಯಪಾಲರಿಂದ ಕೆಐಎಡಿಬಿ ಸಿ.ಎ ಸೈಟು ಪ್ರಕರಣ ಸಂಬಂಧ ವಿವರಣೆ ಕೋರಿ ಪತ್ರ ವಿಚಾರವಾಗಿ ಮಾತನಾಡಿ, ಸಚಿವ ಎಂ.ಬಿ.ಪಾಟೀಲರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಕಾನೂನುಬಾಹಿರ ಕೆಲಸ ಮಾಡಿಲ್ಲ, ನ್ಯಾಯಯುತವಾಗಿ ಅವರು ಅರ್ಹರಿದ್ರು, ಅದಕ್ಕೆ ಸೈಟ್ ಕೊಟ್ಟಿರೋದಾಗಿ ಹೇಳಿದ್ದಾರೆ. ಅಲ್ಲಿಗೆ ಅದು ಮುಗೀತು, ಮತ್ತೆ ಅದನ್ನು ಪದೇ ಪದೇ ಹೇಳೋದು ಬೇಡ. ಇದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ. ಎಂ‌.ಬಿ‌.ಪಾಟೀಲರು ಕಾನೂನು ಪ್ರಕಾರ ಮಾಡಿದ್ದಾರೋ‌ ಇಲ್ಲವೋ ಅಂತ ಪರಿಶೀಲನೆ ಮಾಡಲಿ. ಅದರ ಬದಲು ಅನಾವಶ್ಯಕವಾಗಿ ಆಪಾದನೆ ಮಾಡೋದು ಸರಿಯಲ್ಲ. ರಾಜ್ಯಪಾಲರು ವಿವರಣೆ ಕೇಳಿದ್ದಾರೆ, ಅವರೇ ಪರಿಶೀಲನೆ ಮಾಡಲಿ. ಸಾವಿರಾರು ಜನ ದೂರು ಕೊಡ್ತಾರೆ, ಎಲ್ಲವೂ ಪರಿಶೀಲನೆ ಮಾಡಿದಾಗಲೇ ಸತ್ಯ ಗೊತ್ತಾಗೋದು.‌ ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ ಅಂತ ನಾವು ಮೊದಲಿಂದಲೂ ಹೇಳ್ತಿದ್ದೀವಿ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನೆಲ್ಲ ಮಾಡ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ಹಗರಣದ ಮಧ್ಯಂತರ ವರದಿ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನ್ಯಾ.ಕುನ್ಹಾ ಅವರ ಆಯೋಗಕ್ಕೆ ಇನ್ನೊಂದು ಆರು ತಿಂಗಳು ಕಾಲಾವಕಾಶ ಕೊಡಲಾಗಿದೆ. ಬಿಟ್‌ಕಾಯಿನ್ ಪ್ರಕರಣ, ಕೋವಿಡ್ ಪ್ರಕರಣ, ವಾಲ್ಮೀಕಿ ಪ್ರಕರಣ ಸೇರಿ ಎಲ್ಲ ಪ್ರಕರಣಗಳನ್ನೂ ರಿವೀವ್ ಮಾಡುತ್ತಿದ್ದೇವೆ. ಯಾವೆಲ್ಲ ತನಿಖೆ ಹಂತದಲ್ಲಿ ಇವೆಯೋ ಎಲ್ಲ ಪ್ರಕರಣಗಳ ರಿವ್ಯೂ ಮಾಡ್ತೇವೆ. ಇದಕ್ಕೆ ಮುಂದಿನ ದಿನಗಳಲ್ಲಿ ಒಂದು ಸಮಿತಿ ರಚನೆ ಮಾಡ್ತೇವೆ ಎಂದರು.

ಸತೀಶ್ ಜಾರಕಿಹೊಳಿ-ಪರಮೇಶ್ವರ್ ದೆಹಲಿ ವರಿಷ್ಠರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಿಎಂ ರೇಸ್ ಏನೂ ಇಲ್ಲ. ನಾನೇ‌ನಕ್ಕೋ ಭೇಟಿ ಮಾಡ್ತೇ‌ನೆ, ಅವರೇನಕ್ಕೋ ಭೇಟಿ ಮಾಡ್ತಾರೆ. ದೆಹಲಿಗೆ ಹೋದ್ರೆ ಹೈಕಮಾಂಡ್ ಭೇಟಿ ಮಾಡೋದು ಸಂಪ್ರದಾಯ. ಹಾಗಾಗಿ ಅವರು ಹೋಗಿ ಭೇಟಿ ಮಾಡಿರ್ತಾರೆ.‌ ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕೋದು ಬೇಡ. ಕೆಲವೊಂದು ವಿಚಾರಗಳನ್ನು ಹೈಕಮಾಂಡ್ ಹೇಳಿರ್ತಾರೆ ನಮಗೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಎಐಸಿಸಿ ಮೇಲೆ, ರಾಷ್ಟ್ರೀಯ ನಾಯಕರ ಮೇಲೆ ಏನೇನೋ ನೆಗೆಟಿವ್ ಪೋಸ್ಟಿಂಗ್ ಹಾಕ್ತಾರೆ. ಅದನ್ನೆಲ್ಲ ನಿಯಂತ್ರಣ ಮಾಡಿ ಅಂತ ನನಗೆ ಹೇಳಿದ್ದಾರೆ. ಇದನ್ನೇ ಬೇರೆ ಥರ ಹೇಳೋದು ಬೇಡ ಎಂದು ಇದೇ ವೇಳೆ ಹೇಳಿದರು.

ಎತ್ತಿನ ಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ವಿಚಾರವಾಗಿ ಮಾತನಾಡಿ, ಇದು ನಮ್ಮ‌ ಮಹತ್ವಾಕಾಂಕ್ಷೆಯ ಯೋಜನೆ. ಗೌರಿ-ಹಬ್ಬದ ಒಳ್ಳೆಯದ ದಿನ ಅಂತ ಚಾಲನೆ ಕೊಡಲಾಗ್ತಿದೆ. 1500 ಕ್ಯೂಸೆಕ್​​ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯಲಿದೆ. ಮುಂದಿನ‌ ಮಳೆ ಬರುವ ಹೊತ್ತಿಗೆ ತುಮಕೂರಿಗೂ ನೀರು ತರುತ್ತೇವೆ. ನಂತರ ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ತರುತ್ತೇವೆ. ನಮಗೆ 69 ಕೆರೆ ತುಂಬಿಸಲು ಹಣ ಮಂಜೂರು ಮಾಡಲಾಗಿದೆ. ಇದರ ಕೆಲಸಗಳು ನಡೀತಿವೆ ಎಂದು ತಿಳಿಸಿದರು.

ಗೃಹ ಸಚಿವ ನಿವಾಸದ ಮುಂದೆ ಪೊಲೀಸರ ದಬ್ಬಾಳಿಕೆ: ಗೃಹ ಸಚಿವರಿಗೆ ಮನವಿ ಕೊಡಲು ಬಂದಿದ್ದ ಪಿಎಸ್ಐ ಅಭ್ಯರ್ಥಿ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಆಕಾಂಕ್ಷಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಕೋರಿ ಬಂದಿದ್ದ ಹತ್ತಾರು ಆಕಾಂಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದರು.

ಶಾಂತಿಯುತವಾಗಿ ಗೃಹ ಸಚಿವರ ಮನೆ ಮುಂದೆ ಮನವಿ ಸಲ್ಲಿಸಲು ಪೊಲೀಸ್ ಕಾನ್ಸ್‌ಟೇಬಲ್ ಆಕಾಂಕ್ಷಿಗಳು ನಿಂತಿದ್ದರು. ಈ ವೇಳೆ ಏಕಾಏಕಿ ಪೊಲೀಸರು ಆಕಾಂಕ್ಷಿಗಳನ್ನು ಗೃಹ ಸಚಿವರ ನಿವಾಸದಿಂದ ಬಲವಂತವಾಗಿ ಕರೆದೊಯ್ದು ಪೊಲೀಸ್ ವಾಹನಕ್ಕೆ ತುಂಬಿಸಲಾಯಿತು. ಇದೇ ವೇಳೆ ಪಿಎಸ್‌ಐ ಪರೀಕ್ಷೆ ಮುಂದಕ್ಕೆ ಹಾಕುವಂತೆ ಮನವಿ ಮಾಡಲು ಬಂದ ಅಭ್ಯರ್ಥಿಯೊಬ್ಬರನ್ನು ಬಲವಂತವಾಗಿ ವಶಕ್ಕೆ ಪಡೆದರು. ಅಭ್ಯರ್ಥಿ ಕಾಂತಕುಮಾರ್ ಗೃಹ ಸಚಿವರಿಗೆ ಮನವಿ ಕೊಡಲು ಬಂದಾಗ, ಇನ್ಸ್​ಪೆಕ್ಟರ್​ ಒಬ್ಬರು ಪಿಎಸ್ಐ ಅಭ್ಯರ್ಥಿಯ ಕೊರಳಪಟ್ಟಿ ಹಿಡಿದು ಜೀಪಿನೊಳಗೆ ತಳ್ಳಿ ಕರೆದೊಯ್ದರು.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸುತ್ತಾ, ಯಾರೇ ಅರ್ಜಿ ಕೊಟ್ಟರೂ ನಾನೇ ಖುದ್ದಾಗಿ ತಗೋತೀನಿ. ಅದಕ್ಕೆ ಸಂಬಂಧಪಟ್ಟವರಿಗೆ ಅರ್ಜಿಗಳನ್ನು ಕಳಿಸ್ತೇವೆ. ಸಮಯ ಇದ್ರೆ ಇಲ್ಲೇ ಬರೆದು ಕಳಿಸ್ತೇನೆ. ದೌರ್ಜನ್ಯ ಸರಿ ಅಲ್ಲ. ಆ ರೀತಿ ದೌರ್ಜನ್ಯ ಮಾಡಬಾರದು ಅಂತ ಸೂಚನೆ ಕೊಡ್ತೇನೆ. ಮನವಿ ಕೊಡೋಕ್ಕೆ ಬಂದವರ ಜತೆ ಹಾಗೆ ನಡೆದುಕೊಳ್ಳಬಾರದು. ಅಹವಾಲು ಕೊಡಲು ಜನ ನಮ್ಮ ಬಳಿ ಬರ್ತಾರೆ, ಅದಕ್ಕೆ ಅವಕಾಶ ಕೊಡ್ತೇವೆ. ವಶಕ್ಕೆ ಪಡೆದವರನ್ನ ಬಿಡಲು ಹೇಳ್ತೇನೆ ಎಂದರು.

ಬಳಿಕ ಅಹವಾಲು ಕೊಡಲು ಬಂದ ಆಕಾಂಕ್ಷಿಗಳ ಮೇಲೆ ದಬ್ಬಾಳಿಕೆ ಮೆರೆದ ಇನ್ಸ್​ಪೆಕ್ಟರ್ ಅವರನ್ನು​ ಕರೆದು ಬುದ್ಧಿ ಹೇಳಿದ ಪರಮೇಶ್ವರ್, ಹಾಗೆಲ್ಲ ಮಾಡಬೇಡಿ. ಅರ್ಜಿ ಕೊಡಲು ಬಂದವರಿಗೆ ತಡೆಯಬೇಡಿ, ಸುಮ್ನಿರಿ, ಬಿಟ್ಬಿಡಿ ಅವರನ್ನು ಎಂದು ಸೂಚಿಸಿದರು.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಅಪರಾಧ

ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್‌ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.

Continue Reading

Trending