Connect with us

ರಾಜಕೀಯ

ಶಾಲೆಗಾಗಿ ಪಡೆದ ಸಿಎ ನಿವೇಶನದಲ್ಲಿ ‘ಧಮ್ ಬಿರಿಯಾನಿ ಹೋಟೆಲ್‌’: ಛಲವಾದಿ ನಾರಾಯಣಸ್ವಾಮಿ ವಿರುದ್ಧ ‘ಕೈ’ ಪಡೆ ದೂರು, ಸದಸ್ಯತ್ವ ಅನರ್ಹತೆಗೆ ಆಗ್ರಹ

ಬೆಂಗಳೂರು: ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್‌‍ ನಾಯಕರು ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ವಿಧಾನಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ನೇತೃತ್ವದಲ್ಲಿ ಕಾಂಗ್ರೆಸ್‌‍ನ ಹಲವು ಸದಸ್ಯರು, ನಾಯಕರು ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ಸಲ್ಲಿಸಿದರು. ಇದೇ ವೇಳೆ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ.

2002 ರ ನವೆಂಬರ್‌ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂ ಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್‌ ಆ್ಯಂಡ್ ಎಜುಕೇಷನ್‌ ಟ್ರಸ್ಟ್‌ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ.

ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್‌ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣಸ್ವಾಮಿಯವರ ವಿಧಾನಪರಿಷತ್‌ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರಾದ ಎಂ.ಆರ್‌.ಸೀತಾರಾಂ, ಮಂಜುನಾಥ್‌ ಭಂಡಾರಿ, ಎಸ್‌.ರವಿ ವಸಂತಕುಮಾರ್‌, ಅನಿಲ್‌ಕುಮಾರ್‌, ದಿನೇಶ್‌ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು.

ಈ ಬಗ್ಗೆ ಮಾತನಾಡಿದ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಅವರು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು. ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿದ್ದಾಗ ಸಿಎ ಸೈಟ್ ಪಡೆದುಕೊಂಡಿದ್ದರು. ಆದರ್ಶ ಸ್ಕೂಲ್ ಎಜುಕೇಶನ್​​ ಗ್ರೂಪ್​​ನ ಚೇರಮನ್ ಆಗಿದ್ದರು ಛಲವಾದಿ. ಇದೀಗ ಸಿಎ ಸೈಟ್ ಪಡೆದ ಜಾಗದಲ್ಲಿ ಆನಂದ್ ಧಂ ಬಿರಿಯಾನಿ ನಡೆಯುತ್ತಿದೆ. ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್​ನಲ್ಲಿ ಬಿರಿಯಾನಿ ಹೋಟೆಲ್​ ನಡೆಸುತ್ತಿದ್ದಾರೆ. ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ ಎಂದರು.

ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕನ ಸ್ಥಾನದ ಗಾಂಭೀರ್ಯತೆಗೆ ಧಕ್ಕೆ ತಂದಿದ್ದಾರೆ. ಕಳಂಕಿತರು ಆ ಸ್ಥಾನದಲ್ಲಿ ಇರಬಾರದು. 2002-2005ರ ವರೆಗೆ ಕರ್ನಾಟಕ ಹೌಸಿಂಗ್ ಬೋರ್ಡ್ ನಿರ್ದೇಶಕ ಆಗಿರ್ತಾರೆ. ಅವರ ಸ್ಥಾನ ದುರುಪಯೋಗ ಮಾಡಿಕೊಂಡು ಹೌಸಿಂಗ್ ಬೋರ್ಡ್​​ಗೆ ಭೂಸ್ವಾಧೀನ ಆಗಿದ್ದ ಲ್ಯಾಂಡ್ ಅನ್ನು ತಾವು ಪಡೆಯುತ್ತಾರೆ. ಸ್ಟ್ರೇ ಸೈಟ್ ಬಿಡುಗಡೆ ಮಾಡಿ ಅಂತ ಮೂಲ ಜಮೀನು ಮಾಲೀಕರು ಹೌಸಿಂಗ್ ಬೋರ್ಡ್​ಗೆ ಅರ್ಜಿ ಹಾಕ್ತಾರೆ. ಆಗ ಬೋರ್ಡ್ ನಿರ್ದೇಶಕರಾಗಿದ್ದ ಛಲವಾದಿ ನಾರಾಯಣಸ್ವಾಮಿ 2004 ರಲ್ಲಿ ತಮಗೇ ಆ ಸಿಎ ಸೈಟ್ ನೀಡಿ ಎಂದು ಅರ್ಜಿ ಹಾಕಿಕೊಳ್ತಾರೆ. ತಾವೇ ನಿರ್ದೇಶಕರಾಗಿದ್ದರೂ ಕೂಡ ಕಾನೂನು ಬಾಹಿರವಾಗಿ ಇದನ್ನು ಪಡೆಯುತ್ತಾರೆ. ಆದರ್ಶ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾಗಿದ್ದುಕೊಂಡು ಸಿಎ ಸೈಟ್ ಪಡೆಯುತ್ತಾರೆ ಎಂದು ಹೇಳಿದರು.

ಐದು ವರ್ಷದಲ್ಲಿ ಶಾಲೆಯ ಕಟ್ಟಡ ಕಟ್ಟಬೇಕು ಎಂಬ ಕಂಡೀಷನ್ ಮೇಲೆ ಹೌಸಿಂಗ್ ಬೋರ್ಡ್ ನಿವೇಶನ ನೀಡ್ತಾರೆ. ಇದೇ ನಿವೇಶನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಶಾಲೆ ಕಟ್ಟುವ ಬದಲು ಟೆಲಿ ಕಮ್ಯುನಿಕೇಷನ್ ಆ್ಯಂಡ್ ಪಬ್ಲಿಕ್ ಸರ್ವೀಸ್ ಕಂಪನಿ ಹೆಸರಿಗೆ ಈ ಜಾಗವನ್ನು ಮಾರ್ಪಾಡು ಮಾಡ್ತಾರೆ. ಸೇಲ್ ಡೀಡ್ ಆಗುವ ಮೊದಲೇ ಈ ರೀತಿ ಮಾರ್ಪಾಡು ಮಾಡಿರುತ್ತಾರೆ. ಯಾವಾಗ ಟೆಲಿ ಕಮ್ಯುನಿಕೇಷನ್​​ನಲ್ಲಿ ಛಲವಾದಿ ನಾರಾಯಣಸ್ವಾಮಿ ಎಕ್ಸ್​ಪರ್ಟ್ ಆದರೋ ಅವರೇ ಹೇಳಬೇಕು ಎಂದು ಲೇವಡಿ ಮಾಡಿದರು

ಚುನಾವಣೆ

ತಮಿಳುನಾಡು ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರಿಗೆ ₹5,000 ಜಮೆ: ಡಿಎಂಕೆ ಸರ್ಕಾರದ ಘೋಷಣೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ Dravida Munnetra Kazhagam (DMK) ಸರ್ಕಾರ ಮಹಿಳಾ ಫಲಾನುಭವಿಗಳಿಗೆ ₹5,000 ಹಣ ಜಮೆ ಮಾಡಿದೆ.

Kalaignar Magalir Urimai Thogai Scheme ಯೋಜನೆಯಡಿ ರಾಜ್ಯದ 1.31 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹5,000 ಜಮೆಯಾಗಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣದ ಜೊತೆಗೆ ಬೇಸಿಗೆ ಸಮಯದ ನೆರವಿಗಾಗಿ ಹೆಚ್ಚುವರಿಯಾಗಿ ₹2,000 ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

‘ದ್ರಾವಿಡ 2.0’ ಭರವಸೆ

ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ‘ದ್ರಾವಿಡ 2.0’ ಸರ್ಕಾರದ ಅಡಿಯಲ್ಲಿ ತಿಂಗಳಿಗೆ ನೀಡುವ ಮೊತ್ತವನ್ನು ₹2,000ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ M. K. Stalin ಭರವಸೆ ನೀಡಿದ್ದಾರೆ.

ಯೋಜನೆಯ ಹಿನ್ನೆಲೆ

ಈ ಯೋಜನೆಯನ್ನು ಸೆಪ್ಟೆಂಬರ್ 2023ರಲ್ಲಿ ಆರಂಭಿಸಲಾಗಿತ್ತು. ಆರಂಭದಲ್ಲಿ 1.13 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ₹1,000 ನೀಡಲಾಗುತ್ತಿತ್ತು. ಈಗ ಫಲಾನುಭವಿಗಳ ಸಂಖ್ಯೆಯನ್ನು 1.31 ಕೋಟಿಗೆ ವಿಸ್ತರಿಸಲಾಗಿದೆ.

ಎಐಎಡಿಎಂಕೆ ಪ್ರತಿಕ್ರಿಯೆ

ಇದೇ ರೀತಿಯ ಭರವಸೆಯನ್ನು ಕಳೆದ ತಿಂಗಳು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ All India Anna Dravida Munnetra Kazhagam ಪ್ರಧಾನ ಕಾರ್ಯದರ್ಶಿ Edappadi K. Palaniswami ನೀಡಿದ್ದರು.

ರಾಜಕೀಯ ವಲಯದಲ್ಲಿ ಈ ಘೋಷಣೆ ಚುನಾವಣಾ ಪೂರ್ವ ತಂತ್ರವೆಂದು ಚರ್ಚೆ ನಡೆಯುತ್ತಿದೆ.

Continue Reading

ದೇಶ

ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನಿರೀಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಡಿಸಿಎಂ D. K. Shivakumar ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಹಕಾರ ಸಿಗುವ ಭರವಸೆ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ

Mekedatu ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಯೋಜನೆ ಪರವಾಗಿದೆ. ಕೇಂದ್ರ ಅನುಮತಿ ದೊರೆತ ಕೂಡಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ – ರೈತರಿಗೆ ಪರಿಹಾರ

Krishna River ಮೇಲ್ದಂಡೆ ಯೋಜನೆ ವಿಚಾರದಲ್ಲಿ 2013ರ ಕಾಯ್ದೆಯಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಣೆಕಟ್ಟು ಸುರಕ್ಷತೆ ರಾಷ್ಟ್ರದ ಆದ್ಯತೆ

ಅಣೆಕಟ್ಟುಗಳು ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕವಾಗಿದ್ದು, ಭಾರತದಲ್ಲಿ ಸುಮಾರು 6,500 ಅಣೆಕಟ್ಟುಗಳಿವೆ. ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 232 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಬಹುಪಾಲು 25 ವರ್ಷಕ್ಕಿಂತ ಹಳೆಯದಾಗಿದೆ.

ಕೇಂದ್ರ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಜಾರಿಗೊಳಿಸಿರುವ Dam Rehabilitation and Improvement Project (DRIP) ಯೋಜನೆಯಡಿ ರಾಜ್ಯದಲ್ಲಿ 58 ಅಣೆಕಟ್ಟುಗಳ ದುರಸ್ತಿಗೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಮನವಿ

ಅಣೆಕಟ್ಟುಗಳ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

“ಜಲವೇ ಸಂಪತ್ತು, ಜಲವೇ ಇಂಧನ, ಜಲವೇ ಜೀವನ” ಎಂದು ಹೇಳಿದ ಅವರು, ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬದ್ಧತೆ ವ್ಯಕ್ತಪಡಿಸಿದರು.

Continue Reading

ದೇಶ

karnataka ಅಧಿಕಾರದಿಂದ ಬಂಧನದವರೆಗೆ: ಜೈಲು ಸೇರಿದ್ದ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ Bairathi Basavaraj ಬಂಧನಕ್ಕೊಳಗಾಗಿದ್ದಾರೆ. ಸಿಐಡಿ ತಂಡ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದೆ. ವಿಧಾನಸಭೆಯಲ್ಲಿ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಕಾನೂನು ಉಲ್ಲಂಘನೆ ಆರೋಪದಲ್ಲಿ ಜೈಲು ಸೇರಿದ ಹಲವು ಉದಾಹರಣೆಗಳು ಕರ್ನಾಟಕ ರಾಜಕೀಯದಲ್ಲಿ ಕಂಡುಬಂದಿವೆ.


ವಿನಯ್ ಕುಲಕರ್ಣಿಗೂ ಜೈಲು ಅನುಭವ

ಹುಬ್ಬಳ್ಳಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಬಂಧನಕ್ಕೊಳಗಾಗಿದ್ದರು. 2020ರಲ್ಲಿ Central Bureau of Investigation (CBI) ಅವರು ಅವರನ್ನು ಬಂಧಿಸಿತ್ತು. ಸುಪ್ರೀಂ ಕೋರ್ಟ್ 2021ರಲ್ಲಿ ಜಾಮೀನು ನೀಡಿದರೂ, ಸಾಕ್ಷಿಗಳಿಗೆ ಬೆದರಿಕೆ ಆರೋಪ ಹಿನ್ನೆಲೆ 2025ರಲ್ಲಿ ಜಾಮೀನು ರದ್ದುಗೊಂಡಿತ್ತು.


ವೀರೇಂದ್ರ ಪಪ್ಪಿ ವಿರುದ್ಧ ಬೆಟ್ಟಿಂಗ್ ಆರೋಪ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ Veerendra Pappi ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದರು. ಪ್ರಕರಣವನ್ನು ಪ್ರಶ್ನಿಸಿ Enforcement Directorate (ED) ಹೈಕೋರ್ಟ್ ಮೆಟ್ಟಿಲೇರಿದೆ.


ಮುನಿರತ್ನ ವಿರುದ್ಧ ಗಂಭೀರ ಆರೋಪ

ಬಿಜೆಪಿ ಶಾಸಕ Munirathna ಬೆದರಿಕೆ ಹಾಗೂ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.


ಗಣಿ ಹಗರಣದಲ್ಲಿ ಜನಾರ್ದನ ರೆಡ್ಡಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ Gali Janardhana Reddy ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದೆ.


ಸತೀಶ್ ಸೈಲ್‌ಗೆ ಶಿಕ್ಷೆ

ಬೇಲೆಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Satish Sail ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಹೈಕೋರ್ಟ್ ತೀರ್ಪು ಅಮಾನತುಗೊಳಿಸಿದೆ.


ಜೀವಾವಧಿ ಶಿಕ್ಷೆ ಪಡೆದ ಪ್ರಜ್ವಲ್ ರೇವಣ್ಣ

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಪ್ರಕರಣದಲ್ಲಿ H. D. Revanna ಹಾಗೂ Suraj Revanna ಹೆಸರುಗಳು ಕೂಡ ಕೇಳಿಬಂದಿವೆ.

Continue Reading

Trending