Connect with us

ದೇಶ

Horoscope Today 06 September 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ….

Published

on

ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುವ ನೆಂಟರಂತೆ.

ಆದರೆ, ನಾವು ಮಾಡುವ ಪಾಪ- ಕರ್ಮಗಳು. ತಂದೆ- ತಂದೆ ಮೂಲಕ ನಮಗೆ ಬರುವ ರಕ್ತದ ಗುಣದಂತೆ. ಒಳ್ಳೆ ಕರ್ಮಕ್ಕೆ ಉತ್ತಮ ಫಲ- ಆರೋಗ್ಯ. ಕೆಟ್ಟ ಕರ್ಮಕ್ಕೆ- ಕೆಟ್ಟ ಫಲ, ಸಮಸ್ಯೆ. ಆದರೆ ಅದನ್ನು ಕೂಡ ನಾವು ಹೇಗೆ ವೈದ್ಯರಲ್ಲಿಗೆ ಹೋಗಿ, ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುತ್ತೀವೋ ಹಾಗೇ ಜೋಪಾನ ಮಾಡಬಹುದು.

ಮೇಷ

ವೈಯಕ್ತಿಕ ವಿಚಾರಗಳ ಬಗ್ಗೆ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಭಾವನೆ ನಿಮ್ಮನ್ನು ಬಹಳ ಕಾಡಲಿದೆ. ಸ್ವಂತ ನಿರ್ಧಾರವನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಸೃಷ್ಟಿಯಾಗಲಿದೆ. ಆರ್ಥಿಕ ಒತ್ತಡದ ಕಾರಣಕ್ಕೆ ಇತರರ ಬಳಿ ಸಾಲ ಮಾಡಬೇಕಾದ ಸೃಷ್ಟಿ ನಿರ್ಮಾಣವಾಗಲಿದೆ.

ವೃಷಭ

ಎಣ್ಣೆಯಲ್ಲಿ ಕರಿದ ಅಥವಾ ಮಸಾಲೆ ಪದಾರ್ಥಗಳ ಸೇವನೆಯಿಂದ ಸಾಧ್ಯವಾದಷ್ಟೂ ದೂರ ಇರಿ. ಇತರರಿಗೆ ಮಾದರಿ ಎನಿಸುವಂತೆ ಇರುವುದಕ್ಕೆ ಪ್ರಯತ್ನಿಸಿ. ಕಾನೂನು ಮುರಿಯಲು ಹೋಗಬೇಡಿ. ತುರ್ತು ಕೆಲಸಗಳು ಬರಬಹುದು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಟ್ಟುಕೊಂಡಿರಿ.

ಮಿಥುನ

ಇಡೀ ದಿನ ಬಿಡುವಿಲ್ಲದಂಥ ಕೆಲಸ ಇರಲಿದೆ. ಈ ಹಿಂದೆ ನೀವು ಮಾಡಿದ್ದ ಕೆಲವು ಕೆಲಸಗಳನ್ನು ಮೆಚ್ಚಿ, ಹೊಸ ಜವಾಬ್ದಾರಿಗಳನ್ನು ವಹಿಸಲಾಗುತ್ತದೆ. ಪ್ರಾಣಿ- ಪಕ್ಷಿಗಳ ಸಲುವಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿಯ ಕಡೆ ಸಂಬಂಧಿಕರಿಗೆ ನಿಮ್ಮ ನೆರವು ಬೇಕಾಗಬಹುದು.

ಕರ್ಕಾಟಕ

ಸಣ್ಣ ಸಮಸ್ಯೆಗಳನ್ನು ನೀವೇ ಮನಸಿಗೆ ತೆಗೆದುಕೊಂಡು, ದೊಡ್ಡದು ಮಾಡಲು ಹೋಗದಿರಿ. ಸಂಗಾತಿಯ ಬಗ್ಗೆ ಅಸಮಾಧಾನಗಳು ಇದ್ದಲ್ಲಿ ಕೂತು, ಮಾತನಾಡಿ ಬಗೆಹರಿಸಿಕೊಳ್ಳಿ. ಎಲ್ಲರನ್ನೂ ಅನುಮಾನದಿಂದ ನೋಡಿದರೆ ನಿಮ್ಮ ಸಹಾಯಕ್ಕೆ ಯಾರೂ ಇಲ್ಲದಂತೆ ಆಗುತ್ತದೆ. ತಾಳ್ಮೆಯಿಂದ ಇರುವುದನ್ನು ರೂಢಿ ಮಾಡಿಕೊಳ್ಳಿ.

ಸಿಂಹ

ಅಂದುಕೊಂಡಿದ್ದಕ್ಕಿಂತ ವೇಗವಾಗಿ ಕೆಲಸ- ಕಾರ್ಯಗಳು ಮುಗಿಯುತ್ತವೆ. ಸೇವಾ ಮನೋಭಾವ ಹೆಚ್ಚಾಗುತ್ತದೆ. ಇಷ್ಟು ಸಮಯ ನಿಮ್ಮನ್ನು ಕಾಡುತ್ತಿದ್ದ ಆತಂಕ ನಿವಾರಣೆ ಆಗುವ ದಾರಿ ಗೋಚರಿಸಲಿದೆ. ಯಾರನ್ನೋ ನಂಬಿ, ಹೂಡಿಕೆ ಮಾಡುವುದು ನಷ್ಟಕ್ಕೆ ಕಾರಣ ಆಗಬಹುದು. ಆ ಬಗ್ಗೆ ಎ‌ಚ್ಚರ ಇರಲಿ.

ಕನ್ಯಾ

ದೇವತಾರಾಧನೆ, ಅಧ್ಯಾತ್ಮ ಚಿಂತನೆಗೆ ಹೆಚ್ಚು ಸಮಯ ಮೀಸಲಿಡಲಿದ್ದೀರಿ. ಊಟ- ತಿಂಡಿ ರುಚಿಕಟ್ಟಾಗಿ ಇರಲಿದೆ. ಒಪ್ಪಿಕೊಂಡ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸುವುದು ಕಷ್ಟವಾಗುತ್ತದೆ. ಯಾರ ನೆರವನ್ನು ಬಯಸಿದ್ದರೋ ಅವರಿಗೇ ಸಮಸ್ಯೆ ಎದುರಾಗಲಿದೆ. ಅತಿಯಾದ ನಿರೀಕ್ಷೆ ಬೇಡ.

ತುಲಾ

ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ನಿಮ್ಮ ನಿರ್ಧಾರಗಳು ಕೆಲಸ ಮಾಡುತ್ತವೆ. ಸಹೋದ್ಯೋಗಿಗಳು ನಿಮ್ಮನ್ನು ಮೆಚ್ಚುಗೆಯಿಂದ ನೋಡುತ್ತಾರೆ. ತಂದೆ- ತಾಯಿ ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವ ದಿನ ಇದು. ಸಂಗಾತಿ- ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.

ವೃಶ್ಚಿಕ

ಈ ದಿನ ಹೊತ್ತು ಕಳೆಯುವುದೇ ಕಷ್ಟ ಎಂಬಷ್ಟು ಬೇಸರ ಉಂಟಾಗುತ್ತದೆ. ಏಕಾಗ್ರತೆಯಿಂದ ಕೆಲಸ ಮಾಡುವುದು ಅಸಾಧ್ಯ ಎಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಯಾರದೋ ಅಪ್ಪಣೆಗಾಗಿ ಕಾದು ಕೂರುವಂಥ ಸ್ಥಿತಿ ನಿರ್ಮಾಣವಾಗುತ್ತದೆ. ಆಪ್ತರಿಗೆ ನಿಮ್ಮ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮೂಡುವಂತೆ ಆಗುತ್ತದೆ.

ಧನು

ಹಳೆಯ ಗೆಳೆಯ- ಗೆಳತಿಯರು, ಸಂಬಂಧಿಗಳು ನಿಮ್ಮ ಜತೆಗೆ ಮಾತು ಕತೆ ನಡೆಸಲಿದ್ದೀರಿ. ಹಳೆಯ ನೆನಪುಗಳು ನಿಮ್ಮನ್ನು ಕಾಡಲಿದೆ. ಮಕ್ಕಳ ಸಲುವಾಗಿಯೇ ಹೆಚ್ಚಿನ ಸಮಯ ಹೋಗುತ್ತದೆ. ಮನರಂಜನೆಗಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿ ಮನೆ ಕಡೆಯವರ ಪ್ರೀತಿ ದೊರೆಯಲಿದೆ.

ಮಕರ

ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಬೆಳವಣಿಗೆಗಳು ನಡೆಯಲಿವೆ. ವಹಿಸಿದ ಕೆಲಸವನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡುವುದು ಅಸಾಧ್ಯ ಎಂಬಂತಾಗುತ್ತದೆ. ವಿವಿಧ ಬಗೆಯ ಸ್ನೇಹಿತರಿಂದ ಬರುವ ಸಲಹೆ- ಸೂಚನೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಿ. ಯಾರ ಮೇಲೂ ಸಿಟ್ಟಾಗಬೇಡಿ.

ಕುಂಭ

ವಿಚಿತ್ರವಾದ ಕೋರಿಕೆಗಳು ನಿಮ್ಮನ್ನು ಬೆನ್ನಟ್ಟಲಿವೆ. ಎಲ್ಲವನ್ನೂ ಈಡೇರಿಸಿಕೊಳ್ಳಬೇಕು ಅಂತ ಹೊರಡಬೇಡಿ. ಖರ್ಚಿನ ಮೇಲೆ ಗಮನ ಇರಲಿ. ಇತರರಿಗೆ ನೆರವಾಗಬೇಕು ಎಂಬ ಆಲೋಚನೆಯೇನೋ ಸರಿ. ಆದರೆ ನಿಮಗೂ ಇಲ್ಲದಂತೆ ಮಾಡಿಕೊಂಡು, ಸಹಾಯ ಮಾಡುವುದು ಒಳ್ಳೆ ವಿಚಾರ ಅಲ್ಲ.

ಮೀನ

ಹೊಸ ವ್ಯಾಪಾರದ ಆಲೋಚನೆಗಳು ಬರುವ ದಿನ ಇದು. ಮುಮ್ದೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸರಿಯಾದ ಯೋಜನೆಯನ್ನು ಮಾಡಿಟ್ಟುಕೊಳ್ಳಿ. ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಇತರರ ನೆರವು ಬೇಕಾಗಲಿದೆ. ನಿಮ್ಮ ಯೋಜನೆಗಳಿಗೆ ತಂದೆ- ತಾಯಿ ಅಥವಾ ಸಂಗಾತಿಯ ಸಹಾಯ ದೊರೆಯಬಹುದು.

ಕ್ರೀಡೆ

ಕೃಣಾಲ್ ಪಾಂಡ್ಯ ಬೌಲಿಂಗ್‌ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್‌

Published

on

ಹೈದರಾಬಾದ್: Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಹಾಗೂ Royal Challengers Bengaluru ನಡುವಿನ ಹೈವೋಲ್ಟೇಜ್ ಪಂದ್ಯ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಆರ್‌ಸಿಬಿ ಸ್ಪಿನ್ನರ್ Krunal Pandya ಎಸೆದ ಬೌನ್ಸರ್‌ಗಳಿಗೆ ಸನ್‌ರೈಸರ್ಸ್‌ ತಂಡದ ಸಿಇಒ ಹಾಗೂ ಮಾಲಕಿ Kavya Maran ಆಕ್ಷೇಪ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಸತತವಾಗಿ ವೇಗದ ಬೌನ್ಸರ್‌ಗಳನ್ನು ಎಸೆದರು. ಸ್ಪಿನ್ನರ್ ಆಗಿದ್ದರೂ ಗಂಟೆಗೆ 120-130 ಕಿ.ಮೀ ವೇಗದಲ್ಲಿ ಚೆಂಡು ಎಸೆಯುತ್ತಿರುವುದರ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಎತ್ತಿದ್ದರು. Ravichandran Ashwin ಸೇರಿ ಕೆಲ ದಿಗ್ಗಜರು ಅವರ ಬೌಲಿಂಗ್ ಶೈಲಿಯನ್ನು ಪರಿಶೀಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.

ಪಂದ್ಯದ ವೇಳೆ ಕೃಣಾಲ್‌ ಎಸೆದ ಬೌನ್ಸರ್ ಕಂಡು ಗ್ಯಾಲರಿಯಲ್ಲಿ ಕುಳಿತಿದ್ದ ಕಾವ್ಯ ಮಾರನ್ ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. “ಅವರು ಸರಿಯಾಗಿ ಬೌಲಿಂಗ್ ಮಾಡುತ್ತಿಲ್ಲ, ಚೆಂಡನ್ನು ಎಸೆಯುತ್ತಿದ್ದಾರೆ” ಎಂಬ ಅರ್ಥ ಬರುವ ರೀತಿಯಲ್ಲಿ ಸಹ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿರುವ ವಿಡಿಯೊ ಈಗ ಭಾರೀ ವೈರಲ್ ಆಗಿದೆ. ಕೆಲ ಅಭಿಮಾನಿಗಳು ಕಾವ್ಯ ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ಇದು ಕ್ರಿಕೆಟ್‌ನ ಭಾಗವೇ ಎಂದು ಪ್ರತಿಕ್ರಿಯಿಸಿದ್ದಾರೆ.

ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 55 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. Abhishek Sharma (56), Ishan Kishan (79) ಮತ್ತು Heinrich Klaasen (51) ಅರ್ಧಶತಕದ ನೆರವಿನಿಂದ ಎಸ್‌ಆರ್‌ಎಚ್ 255 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಗುರಿ ಬೆನ್ನಟ್ಟಿದ ಆರ್‌ಸಿಬಿಗೆ Venkatesh Iyer ವೇಗದ ಆರಂಭ ನೀಡಿದರೂ, Virat Kohli ಮತ್ತು Devdutt Padikkal ಬೇಗ ಔಟಾದರು. ನಾಯಕ Rajat Patidar ಹಾಗೂ ಕೃಣಾಲ್ ಪಾಂಡ್ಯ ಹೋರಾಟ ನಡೆಸಿದರೂ ತಂಡ 200 ರನ್‌ಗಳಿಗೆ ಸೀಮಿತವಾಯಿತು.

Continue Reading

ದೇಶ

Cockroach Janata Party ಗೆ ಬೆಂಗಳೂರು ಪೊಲೀಸರ ಶಾಕ್! ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ

Published

on

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಇದೀಗ Bengaluru City Police ದೊಡ್ಡ ಶಾಕ್ ನೀಡಿದೆ. ಮೇ 24ರಂದು ಟೌನ್ ಹಾಲ್ ಬಳಿ ಆಯೋಜಿಸಲು ಯೋಜಿಸಲಾಗಿದ್ದ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಪೋಸ್ಟ್‌ಗಳಲ್ಲಿ, ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಮಾನವ ಸರಪಳಿ ನಿರ್ಮಿಸಲು ಕರೆ ನೀಡಲಾಗಿತ್ತು. ಆದರೆ ಈ ಸಂಬಂಧ ಯಾವುದೇ ಅಧಿಕೃತ ಮನವಿ ಪೊಲೀಸ್ ಇಲಾಖೆಗೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಅರ್ಜಿ ಸಲ್ಲಿಸಿದರೂ ಟೌನ್ ಹಾಲ್ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

Town Hall Bengaluru ಬಳಿ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂಬ High Court of Karnataka ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ Freedom Park ಹೊರತುಪಡಿಸಿ ನಗರದ ಬೇರೆ ಭಾಗಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು Abhijeet Dipke ಸ್ಥಾಪಿಸಿದ್ದು, ಕೆಲವೇ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಗಳಿಸಿತ್ತು. ಪಕ್ಷದ ಎಕ್ಸ್ ಖಾತೆ ಒಂದೇ ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಪಡೆದಿತ್ತು. ನಂತರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಸೂಚನೆಯ ಮೇರೆಗೆ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ Surya Kant ಯುವಕರನ್ನು ‘ಜಿರಳೆ’ಗಳಿಗೆ ಹೋಲಿಸಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಮೀಮ್ಸ್ ಮತ್ತು ಟ್ರೋಲಿಂಗ್‌ಗಳ ನಡುವೆ ‘ಕಾಕ್ರೋಚ್ ಜನತಾ ಪಾರ್ಟಿ’ ಟ್ರೆಂಡ್ ಆಗಿತ್ತು.

ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಗೆ 5 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಸೇರಿದ್ದು, ವೆಬ್‌ಸೈಟ್‌ನಲ್ಲಿ ಲಕ್ಷಾಂತರ ಮಂದಿ ನೋಂದಾಯಿಸಿಕೊಂಡಿದ್ದರು. ಇದೀಗ ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಮೋದಿ ಸರ್ಕಾರದ 2025 ರಿಪೋರ್ಟ್ ಕಾರ್ಡ್ ಬಿಡುಗಡೆ! ಯಾವ ಸಚಿವಾಲಯ ಟಾಪ್‌, ಯಾವುದು ಹಿಂದುಳಿತು?

Published

on

ನವದೆಹಲಿ: Government of India ತನ್ನ ವಿವಿಧ ಸಚಿವಾಲಯಗಳು ಮತ್ತು ಕೇಂದ್ರ ಯೋಜನೆಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ 2025ರ ಅಧಿಕೃತ “ರಿಪೋರ್ಟ್ ಕಾರ್ಡ್” ಬಿಡುಗಡೆ ಮಾಡಿದೆ. ಪ್ರಧಾನಿ Narendra Modi ನೇತೃತ್ವದಲ್ಲಿ ನಡೆದ ಮಹತ್ವದ ಮಂತ್ರಿಮಂಡಲ ಸಭೆಯಲ್ಲಿ ಈ ಮೌಲ್ಯಮಾಪನ ವರದಿ ಪ್ರಕಟವಾಗಿದ್ದು, ಹಲವು ಸಚಿವಾಲಯಗಳ ಸಾಧನೆಗೆ ಶ್ಲಾಘನೆ ವ್ಯಕ್ತವಾಗಿದೆ.

ಕ್ಯಾಬಿನೆಟ್ ಕಾರ್ಯದರ್ಶಿ T. V. Somanathan ಸಚಿವಾಲಯಗಳ ಕಾರ್ಯಕ್ಷಮತೆ ವರದಿ ಬಿಡುಗಡೆ ಮಾಡಿದರು. ವರದಿ ಪ್ರಕಾರ ಗ್ರಾಹಕ ವ್ಯವಹಾರಗಳು, ಕಲ್ಲಿದ್ದಲು, ವಿದ್ಯುತ್ ಹಾಗೂ ಆರೋಗ್ಯ ಸಚಿವಾಲಯಗಳು ಅತ್ಯುತ್ತಮ ಸಾಧನೆ ತೋರಿದ ಇಲಾಖೆಗಳಾಗಿ ಹೊರಹೊಮ್ಮಿವೆ. ವಿಶೇಷವಾಗಿ ಗ್ರಾಹಕ ವ್ಯವಹಾರಗಳ ಸಚಿವಾಲಯವು ಕುಂದುಕೊರತೆ ಪರಿಹಾರ ಮತ್ತು ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ನಿರ್ವಹಣೆಯಲ್ಲಿ ಮೆಚ್ಚುಗೆ ಪಡೆದಿದೆ.

ಫೈಲ್ ವಿಲೇವಾರಿ ಮತ್ತು ಆಡಳಿತ ನಿರ್ವಹಣೆಯಲ್ಲಿ ಕಲ್ಲಿದ್ದಲು ಸಚಿವಾಲಯ ಅತ್ಯಧಿಕ ಅಂಕ ಗಳಿಸಿದ್ದು, ವಿದ್ಯುತ್ ಮತ್ತು ಆರೋಗ್ಯ ಸಚಿವಾಲಯಗಳ ಕಾರ್ಯಕ್ಷಮತೆಯೂ ಗಮನಸೆಳೆದಿದೆ. ಕೆಲವು ಇಲಾಖೆಗಳನ್ನು ಕಳಪೆ ಸಾಧನೆ ತೋರಿದ ಸಚಿವಾಲಯಗಳ ಪಟ್ಟಿಯಲ್ಲೂ ಸೇರಿಸಲಾಗಿದೆ ಎನ್ನಲಾಗಿದೆ.

ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರು ಮತ್ತು ಅಧಿಕಾರಿಗಳಿಗೆ ವೆಚ್ಚ ನಿಯಂತ್ರಣದ ಕುರಿತು ವಿಶೇಷ ಸೂಚನೆ ನೀಡಿದ್ದಾರೆ. ದೇಶದ ಹಿತಾಸಕ್ತಿಗೆ ಅಗತ್ಯವಿಲ್ಲದ ವಿದೇಶಿ ಪ್ರವಾಸಗಳನ್ನು ತಪ್ಪಿಸಲು ಸೂಚಿಸಿದ್ದು, ದೊಡ್ಡ ಬೆಂಗಾವಲು ಪಡೆಗಳ ಬಳಕೆ ಕಡಿಮೆ ಮಾಡುವಂತೆ ಸಲಹೆ ನೀಡಿದ್ದಾರೆ. ಜೊತೆಗೆ ಹಲವು ಅಂತರರಾಷ್ಟ್ರೀಯ ಶೃಂಗಸಭೆಗಳನ್ನು ರದ್ದುಗೊಳಿಸುವ ವಿಚಾರವನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ.

ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಹಾಗೂ ಜಾಗತಿಕ ಇಂಧನ ಪೂರೈಕೆಯ ಅಡಚಣೆ ಹಿನ್ನೆಲೆಯಲ್ಲಿ ಜೈವಿಕ ಅನಿಲ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ.

ಜೂನ್ 9ರಂದು ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ವರ್ಷದ ಸಂಭ್ರಮಕ್ಕೆ ಮುನ್ನ ನಡೆದ ಈ ಸಭೆ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು.

Continue Reading

Trending