Connect with us

ದೇಶ

ಮಾರುಕಟ್ಟೆಗೆ ಲಗ್ಗೆಯಿಟ್ಟ ಐಫೋನ್​ 16 ಸರಣಿಯ ಸ್ಮಾರ್ಟ್‌ಫೋನ್‌​, ವಾಚ್​, ಏರ್​ಪೋಡ್ಸ್​: ಬೆಲೆ, ವೈಶಿಷ್ಟ್ಯಗಳು ಹೀಗಿವೆ! – iPhone 16 Launched

Published

on

iPhone 16 Series Launched: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಟೆಕ್ ದೈತ್ಯ ಆ್ಯಪಲ್ ಸಂಸ್ಥೆ ಹಲವು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿತು. ‘ಇಟ್ಸ್ ಗ್ಲೋಟೈಮ್’ ಹೆಸರಿನಲ್ಲಿ ಆಯೋಜಿಸಲಾದ ಈ ಸಮಾರಂಭದಲ್ಲಿ Apple iPhone 16 ಸರಣಿಯ ಸ್ಮಾರ್ಟ್‌ಫೋನ್‌ಗಳು, Apple Watch ಸರಣಿ 10 ಮತ್ತು AirPods 4 ಅನ್ನು ಬಿಡುಗಡೆಗೊಳಿಸಿದೆ.

ಪ್ರಪಂಚದಾದ್ಯಂತ ಟೆಕ್ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಲೈವ್ ಆಗಿ ವೀಕ್ಷಿಸಿದರು. ಕ್ಯಾಲಿಫೋರ್ನಿಯಾದ ಆ್ಯಪಲ್ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಿತು. ಕಂಪನಿಯ ಸಿಇಒ ಟಿಮ್ ಕುಕ್ ಹೊಸ ಉತ್ಪನ್ನಗಳ ಬಗ್ಗೆ ವಿವರ ಹಂಚಿಕೊಂಡರು.

ಟಚ್ ಸೆನ್ಸಿಟಿವ್ ಕ್ಯಾಮೆರಾ, ಆ್ಯಕ್ಷನ್ ಬಟನ್: iPhone 16 ಸರಣಿಯ ಫೋನ್‌ಗಳು ಅನೇಕ ಹೊಸ ಆವಿಷ್ಕಾರಗಳೊಂದಿಗೆ ಬರುತ್ತಿವೆ. ಆ್ಯಪಲ್ ಈ ಹೊಸ ಮಾದರಿಗಳಲ್ಲಿ ಇಂಟಲಿಜೆನ್ಸ್​ ಅನ್ನು ಪ್ರಮುಖ ಆಕರ್ಷಣೆಯನ್ನಾಗಿ ಮಾಡಿದೆ. ಹೊಸ ಟಚ್ ಸೆನ್ಸಿಟಿವ್ ಕ್ಯಾಮೆರಾ ಜೊತೆಗೆ ಆ್ಯಕ್ಷನ್ ಬಟನ್ ನೀಡಲಾಗಿದೆ.

ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳು A18 ಚಿಪ್‌ನೊಂದಿಗೆ ಸಜ್ಜುಗೊಂಡಿವೆ. ನ್ಯೂರಲ್ ಎಂಜಿನ್ ಹೊಂದಿರುವ ಈ ಚಿಪ್ ಎರಡು ಪಟ್ಟು ವೇಗವಾಗಿ ಕೆಲಸ ಮಾಡುತ್ತವೆ. ಆ್ಯಪಲ್ ಶೇ 17ರಷ್ಟು ಹೆಚ್ಚಿನ ಬ್ಯಾಂಡ್‌ವಿಡ್ತ್‌ನೊಂದಿಗೆ ಅಪ್​ಗ್ರೇಡೆಡ್​ ಮೆಮೊರಿ ಸಬ್​ಸಿಸ್ಟಮ್​ ಹೊಂದಿದೆ ಎಂದು ಕಂಪನಿ ಹೇಳಿದೆ.

ಆ್ಯಪಲ್‌ನ ಕೃತಕ ಬುದ್ಧಿಮತ್ತೆಯ ಸಹಾಯದಿಂದ, ಫೋನ್‌ನಲ್ಲಿರುವ ಅಪ್ಲಿಕೇಶನ್‌ಗಳನ್ನು ಬಹಳ ಸುಲಭವಾಗಿ ಬಳಸಬಹುದು. ಮತ್ತು ನೂರಾರು ಹೊಸ ಕ್ರಮಗಳನ್ನೂ ತೆಗೆದುಕೊಳ್ಳಬಹುದು. ಆ್ಯಪಲ್ ಇಂಟೆಲಿಜೆನ್ಸ್ ಬೀಟಾ ಆವೃತ್ತಿ ಮುಂದಿನ ತಿಂಗಳು ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಲಿದೆ. ನಂತರ ಚೈನೀಸ್, ಫ್ರೆಂಚ್, ಜಪಾನೀಸ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಭಾರತೀಯ ಭಾಷೆಗಳ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

ಹೊಸ ಸರಣಿಯ ಫೋನ್‌ಗಳು ಹೆಚ್ಚಿನ ಬ್ಯಾಟರಿ ಸಾಮರ್ಥ್ಯ ಹೊಂದಿರುತ್ತದೆ ಎಂದು ಆ್ಯಪಲ್ ಹೇಳಿಕೊಂಡರೂ, ವಿವರಗಳನ್ನು ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್ 13ರಿಂದ ಮುಂಗಡ ಬುಕಿಂಗ್ ಪ್ರಾರಂಭವಾಗುತ್ತದೆ. ಸೆಪ್ಟೆಂಬರ್ 20ರಿಂದ ಮಾರುಕಟ್ಟೆಯಲ್ಲಿ ಲಭ್ಯ. ಈ ಹೊಸ ಮಾದರಿಗಳಲ್ಲಿ Apple MagSafe ಚಾರ್ಜಿಂಗ್ ವೇಗವನ್ನು 15 ವ್ಯಾಟ್‌ಗಳಿಂದ 25 ವ್ಯಾಟ್‌ಗಳಿಗೆ ಹೆಚ್ಚಿಸಿದೆ. ಭಾರತದಲ್ಲಿ iPhone 15 ಮಾದರಿಗಳಿಗೆ ಹೋಲಿಸಿದರೆ iPhone 16 ಮಾದರಿಗಳು ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ.

iPhone 16, 16 Plus ಬೆಲೆ, ವೈಶಿಷ್ಟ್ಯಗಳು ಒಂದೇ:

  • Apple iPhone 16 ಸರಣಿಯಲ್ಲಿ ಹಲವು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಾಗಿದೆ. ಹೊಸ ಸರಣಿಯ ಫೋನ್‌ಗಳು ಏರೋಸ್ಪೇಸ್ ದರ್ಜೆಯ ಅಲ್ಯೂಮಿನಿಯಂನಿಂದ ಮಾಡಲ್ಪಟ್ಟಿವೆ. ಇದು ಗ್ಲಾಸ್ ಬ್ಯಾಕ್ ಫೋನ್‌ಗಳಿಗಿಂತ ಎರಡು ಪಟ್ಟು ಹೆಚ್ಚು ಬಾಳಿಕೆ ಬರುತ್ತವೆ ಎಂದು ಆ್ಯಪಲ್ ತಿಳಿಸಿದೆ.
  • ಐಫೋನ್ 16 ಡಿಸ್​ಪ್ಲೇ 6.1 ಇಂಚುಗಳಷ್ಟು ಉದ್ದವಿದೆ. ಇದನ್ನು ವೆನಿಲ್ಲಾ ರೂಪಾಂತರದೊಂದಿಗೆ ವಿನ್ಯಾಸಗೊಳಿಸಲಾಗಿದೆ. iOS 18ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಬ್ರೈಟ್​ನೆಸ್​ ಅನ್ನು 2000 ನಿಟ್‌ಗಳವರೆಗೆ ಹೆಚ್ಚಿಸಬಹುದು.
  • ಐಫೋನ್ 16 ಪ್ಲಸ್ ಡಿಸ್​ಪ್ಲೇ 6.7 ಇಂಚು ಉದ್ದವಾಗಿದೆ. ಸೂಪರ್ ರೆಟಿನಾ XDR OLED ಡಿಸ್​ಪ್ಲೇ ಹೊಂದಿದೆ. ಹಿಂಭಾಗದಲ್ಲಿ 48 MP ವೈಡ್-ಆ್ಯಂಗಲ್ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಹೊಂದಿದೆ. ಸೆಲ್ಫಿಗಾಗಿ ಮುಂಭಾಗ 12 MP ಕ್ಯಾಮೆರಾ ಅಳವಡಿಸಲಾಗಿದೆ. ಕ್ಯಾಮೆರಾ ನಿಯಂತ್ರಣ ಬಟನ್‌ನೊಂದಿಗೆ ಫೋಟೋಗಳು ಮತ್ತು ವಿಡಿಯೋಗಳನ್ನು ಬಹಳ ಸುಲಭವಾಗಿ ತೆಗೆಯಲು ಸುಧಾರಿತ ವೈಶಿಷ್ಟ್ಯವಿದೆ.
  • ಬೆಲೆಗಳ ವಿವರ: 128 ಜಿಬಿ ಸ್ಟೋರೇಜ್ ಹೊಂದಿರುವ iPhone 16 ಮೂಲ ಮಾದರಿಯ ಬೆಲೆ 79,900 ರೂ. ($799) ಮತ್ತು ಐಫೋನ್ 16 ಪ್ಲಸ್ ರೂ 89,900 ($899)ನಿಂದ ಪ್ರಾರಂಭವಾಗುತ್ತದೆ. ಐಫೋನ್ 16ನಲ್ಲಿ ‘AAA ಗೇಮ್ಸ್’ ಆಡುವ ಅವಕಾಶ ಒದಗಿಸಲಾಗಿದೆ. ಮೊದಲು ಈ ವೈಶಿಷ್ಟ್ಯ ಪ್ರೊ ಮಾದರಿಗಳಲ್ಲಿ ಮಾತ್ರ ಸಿಗುತ್ತಿತ್ತು.

iPhone 16 Pro, 16 Pro Max ಬೆಲೆ, ವೈಶಿಷ್ಟ್ಯಗಳು:

  • ಐಫೋನ್ 16 ಪ್ರೊ 6.3 ಇಂಚಿನ ಡಿಸ್​ಪ್ಲೇ ಹೊಂದಿದ್ದರೆ, 16 ಪ್ರೊ ಮ್ಯಾಕ್ಸ್ 6.9 ಇಂಚಿನ ಡಿಸ್​ಪ್ಲೇ ಹೊಂದಿದೆ. ಎರಡೂ ಮಾದರಿಗಳು ಸುಧಾರಿತ ಕೂಲಿಂಗ್ ಚೇಂಬರ್ ಫೀಚರ್​ ಹೊಂದಿವೆ. ಆ್ಯಪಲ್‌ನ ಇಂಟಲಿಜೆನ್ಸ್​ ಬಳಸುವಾಗ ಸಾಧನಗಳು ಬಿಸಿಯಾಗುವುದನ್ನು ತಡೆಯಲು ಈ ವೈಶಿಷ್ಟ್ಯ ಸಹಾಯ ಮಾಡುತ್ತದೆ ಎಂದು ಕಂಪನಿ ಘೋಷಿಸಿದೆ.
  • A18 Pro ಚಿಪ್ ಅನ್ನು Pro ಮತ್ತು Pro Max ಮಾದರಿಗಳಲ್ಲಿ ಬಳಸಲಾಗಿದೆ. ಚಿಪ್ ಪ್ರೊ ರೆಸ್ ವಿಡಿಯೋ ರೆಕಾರ್ಡಿಂಗ್‌ನಲ್ಲಿ ಸುಧಾರಿತ ಮಾಧ್ಯಮ ಸಾಮರ್ಥ್ಯಗಳನ್ನು ಹೊಂದಿದೆ ಮತ್ತು ವೇಗವಾದ USB 3 ವರ್ಗಾವಣೆ ವೇಗ ಹೊಂದಿದೆ ಎಂದು ಕಂಪನಿ ಹೇಳಿದೆ.
  • ಕ್ಯಾಮೆರಾ: ಹಿಂಭಾಗದಲ್ಲಿ ಎರಡು 48 ಮೆಗಾಪಿಕ್ಸೆಲ್ ಕ್ಯಾಮೆರಾಗಳನ್ನು ಬಳಸಲಾಗಿದೆ. ಒಂದು 48 MP ಫ್ಯೂಷನ್ ಕ್ಯಾಮೆರಾ ಮತ್ತು ಇನ್ನೊಂದು ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ. 12 MP 5X ಟೆಲಿಫೋಟೋ ಮೂಲಕ ಫೋಟೋಗಳನ್ನು ತೆಗೆದುಕೊಳ್ಳಬಹುದು.
  • ಪ್ರೊ ಮಾದರಿಗಳು 4K120 ಗುಣಮಟ್ಟದೊಂದಿಗೆ ವಿಡಿಯೋ ರೆಕಾರ್ಡ್ ಮಾಡಬಹುದು. HDR ರೆಕಾರ್ಡಿಂಗ್ ಅನ್ನು ಕ್ಯಾಮೆರಾ ನಿಯಂತ್ರಣ ವೈಶಿಷ್ಟ್ಯದೊಂದಿಗೆ ಒದಗಿಸಲಾಗಿದೆ.
  • ಬೆಲೆ ವಿವರ: 128 GB ಸ್ಟೋರೇಜ್ ಹೊಂದಿರುವ ಮೂಲ ಮಾದರಿ 16 Pro ಬೆಲೆ ರೂ. 1,19,900 ($999), 256GB ಆಂತರಿಕ ಸ್ಟೋರೇಜ್​ ಹೊಂದಿರುವ Pro 16 Max ಬೆಲೆ ರೂ.1,44,900 ($1199) ಪ್ರಾರಂಭವಾಗುತ್ತವೆ.

Apple Watch Series 10, AirPods 4, AirPods ಮ್ಯಾಕ್ಸ್ ಬೆಲೆ, ವೈಶಿಷ್ಟ್ಯಗಳು:

  • ಆ್ಯಪಲ್ ತನ್ನ ಈವೆಂಟ್‌ನಲ್ಲಿ ವಾಚ್ ಸರಣಿ 10 ಅನ್ನು ಮೊದಲು ಬಿಡುಗಡೆ ಮಾಡಿತು. ಈ ವಾಚ್ ಸರಣಿಯಲ್ಲಿ ಹಲವು ಸುಧಾರಿತ ವೈಶಿಷ್ಟ್ಯಗಳಿವೆ. ಹಿಂದಿನ ವಾಚ್‌ಗಳಿಗೆ ಹೋಲಿಸಿದರೆ ಈ ವಾಚ್‌ಗಳ ಡಿಸ್​ಪ್ಲೇಗಳು ತುಂಬಾ ದೊಡ್ಡದಾಗಿವೆ ಎಂದು ಆ್ಯಪಲ್ ಹೇಳಿದೆ.
  • ಮೊದಲ ಬಾರಿಗೆ ವೈಡ್ ಆ್ಯಂಗಲ್ OLED ಡಿಸ್​ಪ್ಲೇ ನೀಡಲಾಗಿದೆ. ಸರಣಿ 9ಕ್ಕೆ ಹೋಲಿಸಿದರೆ, ಹೊಸ ಮಾದರಿಗಳ ಡಿಸ್​ಪ್ಲೇ ಹೆಚ್ಚು ದೊಡ್ಡದಾಗಿದೆ ಮತ್ತು ತೆಳುವಾಗಿರುತ್ತದೆ ಎಂದು ಕಂಪನಿ ತಿಳಿಸಿದೆ.
  • ಪಾಲಿಶ್ ಮಾಡಿದ ಟೈಟಾನಿಯಂ ಫಿನಿಶ್‌ನೊಂದಿಗೆ ಅಲ್ಯೂಮಿನಿಯಂನಿಂದ ಹೊಸ ಸರಣಿಯ ಸ್ಮಾರ್ಟ್​ವಾಚ್​ಗಳನ್ನು ಸಿದ್ಧಪಡಿಸಲಾಗಿದೆ.
  • ಇವು S10 ಚಿಪ್‌ನೊಂದಿಗೆ ಕಾರ್ಯನಿರ್ವಹಿಸುತ್ತವೆ. ಮೊಟ್ಟಮೊದಲ ಬಾರಿಗೆ ಸ್ಲೀಪ್ ಅಪ್ನಿಯಾ ಪತ್ತೆ ಮಾಡುವ ತಂತ್ರಜ್ಞಾನವನ್ನು ಇದರಲ್ಲಿ ಬಳಸಲಾಗಿದೆ. ನಿದ್ರೆಯ ಸಮಯದಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ತೊಂದರೆಗಳನ್ನು ಗುರುತಿಸುವ ಉದ್ದೇಶದಿಂದ ಆ್ಯಪಲ್ ಈ ವೈಶಿಷ್ಟ್ಯವನ್ನು ತಂದಿದೆ.
  • ಈ ವಾಚ್​ಗಳು ವೇಗವಾಗಿ ಚಾರ್ಜಿಂಗ್ ಸಾಮರ್ಥ್ಯ ಹೊಂದಿವೆ. ಶೇ 80ರಷ್ಟು ಚಾರ್ಜಿಂಗ್ ಕೇವಲ 30 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ಕಂಪನಿ ವಿವರಿಸಿದೆ.
  • ಬೆಲೆಗಳ ವಿವರ: GPSನ ಬೆಲೆ 399 ಡಾಲರ್, GPS + ಸೆಲ್ಯುಲಾರ್ 499 ಡಾಲರ್ ಮತ್ತು Ultra 2ನ ಬೆಲೆ 799 ಡಾಲರ್‌ ಇದೆ.
  • ಏರ್‌ಪ್ಯಾಡ್‌: ಏರ್‌ಪ್ಯಾಡ್ 4ನಲ್ಲಿ ‘ಸಿರಿ’ ವೈಶಿಷ್ಟ್ಯವನ್ನು ನೀಡಲಾಗಿದೆ. ಹೊಸ ಏರ್‌ಪ್ಯಾಡ್ 30 ಗಂಟೆಗಳ ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಟೈಪ್ ಸಿ ಚಾರ್ಜಿಂಗ್ ಒದಗಿಸಲಾಗಿದೆ.
  • ಈ ವಾಚ್​ಗಳು ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್​ ಹೊಂದಿದೆ. ಆ್ಯಪಲ್ ವಾಚ್ ಚಾರ್ಜರ್‌ಗಳು ಮತ್ತು ಇತರ Qi ವೈರ್‌ಲೆಸ್ ಚಾರ್ಜರ್‌ಗಳನ್ನೂ ಸಹ ಬಳಸಬಹುದು.
  • ಬೆಲೆಗಳ ವಿವರ: AirPods 4 ಅನ್ನು $129 ನಿಗದಿಪಡಿಸಲಾಗಿದೆ. ಆದರೆ ಆ್ಯಕ್ಟಿವ್​ ನಾಯ್ಸ್​ ಕ್ಯಾನ್ಸಲೇಷನ್​ ಮಾದರಿಯು $179 ಬೆಲೆಗೆ ಮಾರಾಟಕ್ಕಿದೆ.
  • AirPods Max ಅನ್ನು ಐದು ಹೊಸ ಬಣ್ಣಗಳಲ್ಲಿ ತರಲಾಗಿದೆ. ಈ ಹೆಡ್‌ಫೋನ್‌ಗಳು ಯುಎಸ್‌ಬಿಸಿ ಪ್ರಕಾರದ ಚಾರ್ಜರ್ ಅನ್ನು ಬೆಂಬಲಿಸುತ್ತವೆ.
  • AirPods Max ವಾಚ್​ಗಳು iOS 18ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರ ಬೆಲೆ 599 ಡಾಲರ್ ಇದೆ.

ಕ್ರೀಡೆ

ವಾಂಖೆಡೆನಲ್ಲಿ RCB ದಬ್ಬಾಳಿಕೆ: ಚಿನ್ನಸ್ವಾಮಿ ಕಾದಿದೆ!

Published

on

By

ಮುಂಬೈ: Indian Premier League 2026ರ ಪಂದ್ಯದಲ್ಲಿ Royal Challengers Bengaluru ತಂಡವು Mumbai Indians ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ RCB ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ Phil Salt 36 ಎಸೆತಗಳಲ್ಲಿ 78 ರನ್ ಸಿಡಿಸಿ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಪಡೆದರು. ನಾಯಕ Rajat Patidar ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಬಲವಾದ ವೇದಿಕೆ ಒದಗಿಸಿದರು. ಪಾಟಿದಾರ್ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟೂರ್ನಿಯ ಇತಿಹಾಸದಲ್ಲೇ ವೇಗವಾದ ಫಿಫ್ಟಿ ಸಿಡಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು.

ಬೌಲಿಂಗ್ ವಿಭಾಗದಲ್ಲಿ Krunal Pandya (1/26) ಮತ್ತು Suyash Sharma (2/47) ಪ್ರಮುಖ ಪಾತ್ರವಹಿಸಿ ಮುಂಬೈ ತಂಡವನ್ನು ನಿಯಂತ್ರಿಸಿದರು.

ಪಂದ್ಯದ ಬಳಿಕ ಮಾತನಾಡಿದ ಪಾಟಿದಾರ್, “ಪ್ರತಿ ಪಂದ್ಯದಲ್ಲೂ 200ಕ್ಕೂ ಹೆಚ್ಚು ರನ್‌ಗಳು ಬರುತ್ತಿವೆ. ಇದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ” ಎಂದು ಹೇಳಿದರು. ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿ, “ನಾನು ಬಾಲ್‌ಗೆ ಪ್ರತಿಕ್ರಿಯಿಸುತ್ತೇನೆ, ಸ್ಪಷ್ಟತೆಯಿಂದ ಆಟ ಆಡುತ್ತೇನೆ” ಎಂದು ತಿಳಿಸಿದ್ದಾರೆ.

ಕೃಣಾಲ್ ಪಾಂಡ್ಯಾ ತಂಡದ ಬ್ಯಾಟಿಂಗ್ ಶಕ್ತಿಯನ್ನು ಮೆಚ್ಚಿ, “ವಿರಾಟ್, ಸಾಲ್ಟ್, ಟಿಮ್ ಎಲ್ಲರೂ ಕೊಡುಗೆ ನೀಡಿದ್ದಾರೆ” ಎಂದರು. ಕೋಚ್ Malolan Rangarajan ರಸಿಖ್‌ರ ಹೋರಾಟ ಮನೋಭಾವವನ್ನು ಶ್ಲಾಘಿಸಿದರು.

ಈ ಗೆಲುವಿನೊಂದಿಗೆ RCB ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು, ಮುಂದಿನ ಚಿನ್ನಸ್ವಾಮಿ ಪಂದ್ಯಕ್ಕಾಗಿ ಕಾತುರವಾಗಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

Trending