ದೇಶ
ಕಳೆದ 10 ವರ್ಷಗಳಿಂದ ಹದಗೆಟ್ಟು ಹೋಗಿದ್ದ ಭಾರತದ ಪ್ರಜಾಪ್ರಭುತ್ವ ಈಗ ಪುನಶ್ಚೇತನಗೊಳ್ಳುತ್ತಿದೆ: ರಾಹುಲ್ ಗಾಂಧಿ
ವಾಷಿಂಗ್ಟನ್: ಕಳೆದ 10 ವರ್ಷಗಳಿಂದ ಭಾರತದಲ್ಲಿ ಹದಗೆಟ್ಟು ಹೋಗಿದ್ದ ಪ್ರಜಾಪ್ರಭುತ್ವ ಈಗ ತನ್ನ ಮೊದಲಿನ ಸ್ಥಿತಿಗೆ ಮರಳಲು ಹೋರಾಟ ನಡೆಸುತ್ತಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಲ್ಲಿರುವ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಭಾರತೀಯ ಸ್ಥಳೀಯ ಕಾಲಮಾನ ನಿನ್ನೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವವು ಹದಗೆಟ್ಟು ಹೋಗಿತ್ತು, ಈಗ ಮತ್ತೆ ಪುಟಿದೇಳಲು ಹೋರಾಡುತ್ತಿದೆ ಎಂದರು.
ಮಹಾರಾಷ್ಟ್ರ ಸರ್ಕಾರವನ್ನು ನಮ್ಮಿಂದ ಕಿತ್ತುಕೊಂಡರು. ನಾನು ಅದನ್ನು ನನ್ನ ಸ್ವಂತ ಕಣ್ಣುಗಳಿಂದ ನೋಡಿದ್ದೇನೆ. ನಮ್ಮ ಶಾಸಕರನ್ನು ಖರೀದಿಸಿ ಇದ್ದಕ್ಕಿದ್ದಂತೆ ಬಿಜೆಪಿ ನಾಯಕರಾದರು. ಹೀಗೆ ಎಲ್ಲಾ ವಿಷಯದಲ್ಲಿ ಭಾರತದಲ್ಲಿ ಪ್ರಜಾಪ್ರಭುತ್ವ ಆಕ್ರಮಣಕ್ಕೆ ಒಳಗಾಗಿದೆ. ಅತ್ಯಂತ ಕೆಟ್ಟದಾಗಿ ದುರ್ಬಲಗೊಂಡಿದೆ. ಈಗ ಅದು ಮತ್ತೆ ಹೋರಾಡುತ್ತಿದ್ದು, ಹಿಂದಿನ ಸ್ಥಿತಿಗೆ ಮರಳುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.
ಈ ಬಾರಿಯ ಲೋಕಸಭೆ ಚುನಾವಣಾ ಫಲಿತಾಂಶಗಳನ್ನು ನೋಡಿದರೆ,ಭಾರತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ನಿಮಗೆ ಹೆಚ್ಚಿನ ಭರವಸೆ ನೀಡುತ್ತದೆಯೇ ಎಂದು ಸುದ್ದಿಗಾರರು ಕೇಳಿದಾಗ, ಹೌದು, ನನ್ನ ಪ್ರಕಾರ, ಆಗುತ್ತದೆ. ಆದರೆ ಭಾರತೀಯ ಮತದಾರ ಸಾಕಷ್ಟು ಬದಲಾಗಿದ್ದಾನೆ ಮತ್ತು ತಿಳುವಳಿಕೆ ಹೊಂದಿದ್ದಾನೆ ಎಂದು ಹೇಳುವಷ್ಟು ಪರಿಸ್ಥಿತಿ ಸುಧಾರಿಸಿಲ್ಲ ಎಂದರು.
ನಮ್ಮಲ್ಲಿ ಸಮತೋಲನದ ಮನೋಭಾವ ಇದ್ದರೆ ಮತದಾರನು ಬಹಳ ಜ್ಞಾನ ಮತ್ತು ಸ್ಥಿತಿಸ್ಥಾಪಕನಾಗಿರಬಹುದು. ಇದು ಪ್ರಜಾಪ್ರಭುತ್ವಕ್ಕೆ ಪೂರಕವಾಗಿದೆ ಎಂದರು. ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಂಡು ನಾವು ಚುನಾವಣೆ ಎದುರಿಸಿದ್ದೇವೆ. ಇಂತಹ ವಿಷಯಗಳು ಬಹುಶಃ ನಮ್ಮ ಭಾರತದಲ್ಲಿ ಮತ್ತು ಇರಾಕ್ನಲ್ಲಿ ಸಂಭವಿಸಬಹುದು. ನಾವು ಚುನಾವಣೆ ಸಂದರ್ಭದಲ್ಲಿ ಅಕ್ಷರಶಃ ಹಣದ ಕೊರತೆಯನ್ನು ಎದುರಿಸಿದ್ದೆವು ಎಂದರು.
ನನ್ನಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿವೆ. ಭಾರತೀಯ ಇತಿಹಾಸದಲ್ಲಿ ಮಾನನಷ್ಟಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಏಕೈಕ ವ್ಯಕ್ತಿ ನಾನು. ಜೈಲಿನಲ್ಲಿರುವ ಮುಖ್ಯಮಂತ್ರಿ ನಮ್ಮಲ್ಲಿದ್ದಾರೆ. ಇದನ್ನೆಲ್ಲಾ ಭಾರತೀಯ ಮತದಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬದಲಾಗುತ್ತಿದ್ದಾನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ: ಭಾರತದಲ್ಲಿ ಈ 21ನೇ ಶತಮಾನದ ಆಧುನಿಕ ಜಗತ್ತಿನಲ್ಲಿ ನಾನು ದೇವರೊಂದಿಗೆ ಮಾತನಾಡುತ್ತೇನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ನಾನು ಎಲ್ಲರಿಗಿಂತ ಭಿನ್ನ. ನೀವು ಜೈವಿಕ ವ್ಯಕ್ತಿಗಳು, ನೀವು ಜೈವಿಕವಲ್ಲದ ವ್ಯಕ್ತಿ. ನಾನು ದೇವರೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದೇನೆ ಎನ್ನುತ್ತಾರೆ.
ಅದು ಚುನಾವಣೆಯಲ್ಲಿ ನಮಗೆ ಒಂದು ವಿಷಯವಾಯಿತು. ನಾವು ಪ್ರಧಾನಿಯನ್ನು ಸೋಲಿಸಿದ್ದೇವೆ ಎಂದರು.
ಇಷ್ಟೆಲ್ಲಾ ಮಾತನಾಡಿದ ನಂತರ ಪ್ರಧಾನ ಮಂತ್ರಿಗಳು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂವಿಧಾನ ಪುಸ್ತಕಕ್ಕೆ ನಮಸ್ಕರಿಸಿದ್ದು ವಿರೋಧಾಬಾಸವಾಗಿ ಕಂಡಿತು. ಒಂದೆಡೆ ಸಂವಿಧಾನವನ್ನು, ಪ್ರಜಾಪ್ರಭುತ್ವ ರಚನೆಯ ಮೇಲೆ ದಾಳಿ ಮಾಡುತ್ತಿದ್ದಾರೆ. ನಂತರ ಭಾರತೀಯರು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಗೌರವ ಕೊಡಬೇಕು, ಅದನ್ನು ರಕ್ಷಿಸಬೇಕು ಎನ್ನುತ್ತಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು.
ಕ್ರೀಡೆ
ವಿಶ್ವ ಚೆಸ್ನಲ್ಲಿ Praggnanandhaa ಹೊಸ ಇತಿಹಾಸ; ಕರುವಾನಾಗೆ ಶಾಕ್ ನೀಡಿ ಐತಿಹಾಸಿಕ ಪ್ರಶಸ್ತಿ ಗೆಲುವು
ಸೆಂಟ್ ಲೂಯಿಸ್: ಭಾರತದ ಯುವ ಗ್ರಾಂಡ್ಮಾಸ್ಟರ್ ಆರ್. Praggnanandhaa ಅವರು ವಿಶ್ವ ಚೆಸ್ ರಂಗದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೆಂಟ್ ಲೂಯಿಸ್ನಲ್ಲಿ ನಡೆದ ಪ್ರತಿಷ್ಠಿತ ಗ್ರಾಂಡ್ ಚೆಸ್ ಟೂರ್ 2026 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಫೈನಲ್ನಲ್ಲಿ ಹಾಲಿ ಚಾಂಪಿಯನ್ ಫ್ಯಾಬಿಯಾನೊ ಕರುವಾನಾ ವಿರುದ್ಧ ಭರ್ಜರಿ ಪುನರಾಗಮನ ಸಾಧಿಸಿದ ಪ್ರಜ್ಞಾನಂದ, ತಮ್ಮ 2026ರ ಅದ್ಭುತ ಪ್ರದರ್ಶನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರಿಸಿದ್ದಾರೆ.
6 ಅಂಕಗಳ ಹಿನ್ನಡೆಯಿಂದ ರೋಚಕ ಕಮ್ಬ್ಯಾಕ್
ಕ್ಲಾಸಿಕಲ್ ಪಂದ್ಯಗಳ ಅಂತ್ಯದಲ್ಲಿ ಪ್ರಜ್ಞಾನಂದ ಅವರು ಕರುವಾನಾ ವಿರುದ್ಧ 3-9 ಅಂಕಗಳಿಂದ ಆರು ಅಂಕಗಳ ಹಿನ್ನಡೆಯಲ್ಲಿದ್ದರು. ಹೀಗಾಗಿ ಪ್ರಶಸ್ತಿ ಗೆಲ್ಲುವ ಅವಕಾಶ ಕ್ಷೀಣಿಸಿತ್ತು. ಆದರೆ ಅಂತಿಮ ದಿನ ರ್ಯಾಪಿಡ್ ಪಂದ್ಯಗಳಲ್ಲಿ ಅದ್ಭುತ ಆಟವಾಡಿದ ಪ್ರಜ್ಞಾನಂದ ಸತತ ಎರಡು ಗೆಲುವು ದಾಖಲಿಸಿ 11-9 ಅಂಕಗಳ ಮುನ್ನಡೆ ಪಡೆದರು.
ಬಳಿಕ ನಡೆದ ಬ್ಲಿಟ್ಸ್ ಪಂದ್ಯದಲ್ಲಿ ಮೊದಲ ಪಂದ್ಯ ಡ್ರಾಗೊಂಡರೆ, ಎರಡನೇ ಪಂದ್ಯವನ್ನು ಕರುವಾನಾ ಗೆದ್ದು 12-12ರಲ್ಲಿ ಸಮಬಲ ಸಾಧಿಸಿದರು. ಆದರೆ ಮೂರನೇ ಬ್ಲಿಟ್ಸ್ ಪಂದ್ಯದಲ್ಲಿ ಪ್ರಜ್ಞಾನಂದ ಮತ್ತೆ ಗೆದ್ದು ನಿರ್ಣಾಯಕ ಮುನ್ನಡೆ ಪಡೆದುಕೊಂಡರು.
‘ತ್ರೀಫೋಲ್ಡ್ ರಿಪಿಟಿಷನ್’ ಮೂಲಕ ಪ್ರಶಸ್ತಿ ಖಚಿತ
ಅಂತಿಮ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಪ್ರಶಸ್ತಿ ತನ್ನದಾಗುವ ಪರಿಸ್ಥಿತಿಯಲ್ಲಿದ್ದ ಪ್ರಜ್ಞಾನಂದ, ಯಾವುದೇ ಅನಗತ್ಯ ಅಪಾಯ ತೆಗೆದುಕೊಳ್ಳಲಿಲ್ಲ. ಮೂರು ಬಾರಿ ಒಂದೇ ಸ್ಥಾನ ಪುನರಾವರ್ತನೆಯಾಗುವ ‘ತ್ರೀಫೋಲ್ಡ್ ರಿಪಿಟಿಷನ್’ ನಿಯಮವನ್ನು ಚಾಣಾಕ್ಷವಾಗಿ ಬಳಸಿಕೊಂಡು ಪಂದ್ಯವನ್ನು ಡ್ರಾ ಮಾಡಿಕೊಂಡರು. ಇದರೊಂದಿಗೆ ಪ್ರಶಸ್ತಿ ಅವರ ಪಾಲಾಯಿತು.
ಫೈನಲ್ನ ಒಟ್ಟು ಆರು ಪಂದ್ಯಗಳಲ್ಲಿ ಪ್ರಜ್ಞಾನಂದ ಮೂರು ಗೆಲುವು ದಾಖಲಿಸಿದರೆ, ಎರಡು ಪಂದ್ಯಗಳು ಡ್ರಾಗೊಂಡವು. ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲು ಅನುಭವಿಸಿದರು.
2026ರಲ್ಲಿ ಮುಂದುವರಿದ ಪ್ರಜ್ಞಾನಂದ ಗೆಲುವಿನ ಓಟ
ಈ ಗೆಲುವಿನೊಂದಿಗೆ 2026ರಲ್ಲಿ ಪ್ರಜ್ಞಾನಂದ ಅವರ ಯಶಸ್ಸಿನ ಪಯಣ ಮತ್ತಷ್ಟು ಗಟ್ಟಿಯಾಗಿದೆ. ವರ್ಷದ ಆರಂಭದಲ್ಲಿ ಕ್ಯಾಂಡಿಡೇಟ್ಸ್ ಟೂರ್ನಿಯಲ್ಲಿ ಹಿನ್ನಡೆ ಕಂಡಿದ್ದರೂ, ನಂತರ ಅದ್ಭುತವಾಗಿ ಚೇತರಿಸಿಕೊಂಡ ಅವರು ನಾರ್ವೆ ಚೆಸ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಎರಡು ಬಾರಿ ಮಣಿಸಿ ಪ್ರಶಸ್ತಿ ಗೆದ್ದಿದ್ದರು.
ಇದೀಗ ಗ್ರಾಂಡ್ ಚೆಸ್ ಟೂರ್ ಪ್ರಶಸ್ತಿಯನ್ನೂ ಗೆಲ್ಲುವ ಮೂಲಕ ವಿಶ್ವದ ಅಗ್ರ ಚೆಸ್ ಆಟಗಾರರ ಸಾಲಿನಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಕೇವಲ 21ನೇ ವಯಸ್ಸಿನಲ್ಲೇ ಪ್ರಜ್ಞಾನಂದ ಸಾಧಿಸುತ್ತಿರುವ ಈ ಸರಣಿ ಗೆಲುವುಗಳು ಭಾರತೀಯ ಚೆಸ್ನ ಭವಿಷ್ಯದ ಬಗ್ಗೆ ಮತ್ತಷ್ಟು ನಿರೀಕ್ಷೆ ಮೂಡಿಸಿವೆ.
ಬೆಂಗಳೂರು
Badminton ಕೋರ್ಟ್ನಲ್ಲಿ ಮಹಾ ಕದನ; Make My Propertyz, MRCL, Hosa Suddi, ಗೌರೀಶ್, ಆಂಜನಪ್ಪ, ಹರೀಶ್, ಶಿವಕುಮಾರ್ ಕೈಜೋಡಿಕೆ!
ಬೆಂಗಳೂರು: ಕ್ರೀಡಾಭಿಮಾನಿಗಳು ಹಾಗೂ ಬ್ಯಾಡ್ಮಿಂಟನ್ ಪ್ರೇಮಿಗಳಿಗಾಗಿ ಬೆಂಗಳೂರಿನಲ್ಲಿ ಆಗಸ್ಟ್ 29ರಂದು ‘MMP ಶಟಲ್ ಟೂರ್ನಮೆಂಟ್ 2026’ ನಡೆಯಲಿದೆ. ಕ್ರೀಡೆಯನ್ನು ಉತ್ತೇಜಿಸುವುದರ ಜೊತೆಗೆ ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜಿಸಲಾಗಿದೆ.
ಮೇಕ್ ಮೈ ಪ್ರಾಪರ್ಟೀಸ್ (Make My Propertyz) ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ 16 ತಂಡಗಳ ಒಟ್ಟು 32 ಆಟಗಾರರು ಭಾಗವಹಿಸಲಿದ್ದಾರೆ. ಗೋಲ್ಡನ್ ಫೆದರ್ಸ್ನಲ್ಲಿ ನಾಲ್ಕು ಅಂಕಣಗಳಲ್ಲಿ 21 ಅಂಕಗಳ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ.
ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ Make My Propertyz, ಕ್ರೀಡೆ ಮತ್ತು ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಟೂರ್ನಮೆಂಟ್ಗೆ ಬೆಂಬಲ ನೀಡಿದೆ. ಪ್ಲಾಟಿನಂ ಪ್ರಾಯೋಜಕರಾಗಿ MRCL Infrastructure Pvt Ltd ಕೈಜೋಡಿಸಿದೆ. ಮೋಹನ್ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಮಾಜಿ ಕಾರ್ಪೊರೇಟರ್ ಆರ್. ಆಂಜನಪ್ಪ ಅವರು ಗೋಲ್ಡ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಬೆಂಬಲ ನೀಡಿದ್ದಾರೆ. ಸ್ಥಳೀಯವಾಗಿ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಅವರು ಸಾರ್ವಜನಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಎಂ. ಹರೀಶ್ ಕುಮಾರ್ ಅವರು ಕೂಡ ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಮುಂಬರುವ GBA ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿರುವ ಹರೀಶ್, ಬಡವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದೊಂದಿಗೆ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗುವ ಆಶಯ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಗೋಲ್ಡನ್ ಫೆದರ್ಸ್ ಮೂಲಕ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಪ್ರೋತ್ಸಾಹ
ಪಂದ್ಯಾವಳಿ ನಡೆಯಲಿರುವ ಗೋಲ್ಡನ್ ಫೆದರ್ಸ್ ಸಂಸ್ಥೆಯ ಸಂಸ್ಥಾಪಕ ಗೌರೀಶ್ ಮತ್ತು ಲೋಕೇಶ್ ಅವರು ತಮ್ಮ ಕ್ಲಬ್ ಮೂಲಕ ಬ್ಯಾಡ್ಮಿಂಟನ್ ಆಟಗಾರರನ್ನು ಬೆಳೆಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಯುವ ಆಟಗಾರರಿಗೆ ತರಬೇತಿ, ಅಭ್ಯಾಸ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಮೂಲಕ ಸ್ಥಳೀಯ ಬ್ಯಾಡ್ಮಿಂಟನ್ ಪ್ರತಿಭೆಗಳನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ.
ವಿಶೇಷವಾಗಿ ನಾಗದೇವನಹಳ್ಳಿಯಲ್ಲಿ ಗೌರೀಶ್ ಅವರು ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರಿಯರಾಗಿದ್ದು, ಸ್ಥಳೀಯವಾಗಿ ವಿವಿಧ ಸಮಾಜಮುಖಿ ಚಟುವಟಿಕೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.
Hosa Suddi ಮತ್ತು ಶಿವಕುಮಾರ್ರಿಂದ ಬೆಂಬಲ
ಕನ್ನಡ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ Hosasuddi.in (Hosa Suddi) ಕೂಡ ಈ ಪಂದ್ಯಾವಳಿಗೆ ಸಿಲ್ವರ್ ಪ್ರಾಯೋಜಕರಾಗಿ ಬೆಂಬಲ ನೀಡುತ್ತಿದೆ. ಸ್ಥಳೀಯ ಕ್ರೀಡಾ ಪ್ರತಿಭೆಗಳು, ಯುವಜನರ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ Hosasuddi.in ನಿರಂತರವಾಗಿ ಬೆಂಬಲ ನೀಡುತ್ತಿದೆ.
ಇದೇ ವೇಳೆ ಶಿವಕುಮಾರ್ ಅವರು ಕೂಡ ಸಿಲ್ವರ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಕೈಜೋಡಿಸಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿವಕುಮಾರ್ ಅವರು ಕ್ರೀಡೆ ಹಾಗೂ ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.
ಒಟ್ಟಿನಲ್ಲಿ, ‘One Team, One Dream, One Champion’ ಹಾಗೂ ‘Smash Limits, Create Legends’ ಎಂಬ ಘೋಷವಾಕ್ಯಗಳೊಂದಿಗೆ ನಡೆಯಲಿರುವ MMP ಶಟಲ್ ಟೂರ್ನಮೆಂಟ್ 2026 ಕೇವಲ ಬ್ಯಾಡ್ಮಿಂಟನ್ ಪಂದ್ಯಾವಳಿಯಾಗಿರದೆ, ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವುದು, ಯುವಕರನ್ನು ಉತ್ತೇಜಿಸುವುದು ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ವೇದಿಕೆಯಾಗಲಿದೆ.
ಸಿನಿಮಾ
‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ ಹಾಗೂ ರುಕ್ಮಿಣಿ ವಸಂತ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್ ಮಾತ್ರವಲ್ಲದೆ ಕಾನೂನು ವಿಚಾರದಿಂದಲೂ ಸುದ್ದಿಯಾಗಿದೆ. ಚಿತ್ರದ ಕುರಿತು ಸುಳ್ಳು, ಮಾನಹಾನಿಕರ ಅಥವಾ ನಿಂದನಾತ್ಮಕ ವಿಷಯಗಳನ್ನು ಆನ್ಲೈನ್ನಲ್ಲಿ ಹಂಚಿಕೊಳ್ಳದಂತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.
ಯೂಟ್ಯೂಬರ್ ಸೂರಜ್ ಕುಮಾರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಮಗೆ ಬಂದಿರುವ ಕಾನೂನು ನೋಟಿಸ್ನ ಸ್ಕ್ರೀನ್ಶಾಟ್ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಐಪ್ಲೆಕ್ಸ್ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಈ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಪರವಾಗಿ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ನೋಟಿಸ್ನಲ್ಲಿ, ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಡಿಜಿಟಲ್ ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಕಂಟೆಂಟ್ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪಿಟಿಐ ವರದಿ ಪ್ರಕಾರ, ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ 22ರಂದು ವಿವಿಧ ಪ್ರತಿವಾದಿಗಳ ವಿರುದ್ಧ ಎಕ್ಸ್-ಪಾರ್ಟಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಿತ್ರದ ಕುರಿತು ಸುಳ್ಳು ಅಥವಾ ಮಾನಹಾನಿಕರ ವಿಷಯಗಳ ಪ್ರಕಟಣೆ ಮತ್ತು ಪ್ರಸಾರವನ್ನು ತಡೆಯುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.
ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ವರದಿಯಾಗಿದೆ. ಚಿತ್ರದ ಕುರಿತು ವಿಮರ್ಶೆಗಳು ಮತ್ತು ಸಾಮಾಜಿಕ ಮಾಧ್ಯಮ ಚರ್ಚೆಗಳು ಮುಂದುವರಿದಿರುವ ಬೆನ್ನಲ್ಲೇ ಈ ಕಾನೂನು ಬೆಳವಣಿಗೆ ಗಮನ ಸೆಳೆದಿದೆ.
-
ಬೆಂಗಳೂರು22 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ದೇಶ23 ಗಂಟೆಗಳು agoNepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
-
ರಾಜ್ಯ23 ಗಂಟೆಗಳು agoMysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
-
ಬೆಂಗಳೂರು23 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ಬೆಂಗಳೂರು19 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ದೇಶ2 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ2 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ದೇಶ1 ಗಂಟೆ agoKashmir ದಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: 5 ಹೈಬ್ರಿಡ್ ಉಗ್ರರು ಸೇರಿ 13 ಮಂದಿ ಅರೆಸ್ಟ್
