ದೇಶ
ರಜನಿಕಾಂತ್ ಸುಪ್ರೀಮ್ ಆಫ್ ಆಲ್ ಸ್ಟಾರ್ಸ್’ ಎಂದ ಬಿಗ್ ಬಿ: ‘ಅಮಿತಾಭ್ ನೋಡಿ ಬಾಲಿವುಡ್ ನಕ್ಕ ದಿನ’ಇತ್ತೆಂದ ನಟ – Vettaiyan Prevue and Audio Launch
ಚೆನ್ನೈ(ತಮಿಳುನಾಡು): ಭಾರತೀಯ ಚಿತ್ರರಂಗದ ಹಿರಿಯ, ಬಹುಬೇಡಿಕೆ ನಟ ಅಮಿತಾಭ್ ಬಚ್ಚನ್ ಅವರು ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮೇಲೆ ಹೊಂದಿರುವ ಅಗಾಧ ಅಭಿಮಾನ ಎಲ್ಲರಿಗೂ ತಿಳಿದಿರುವ ವಿಚಾರ. ಶುಕ್ರವಾರ ಚೆನ್ನೈನಲ್ಲಿ ನಡೆದ ಬಹುನಿರೀಕ್ಷಿತ ಚಿತ್ರ ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದೆ.
ಸೆಪ್ಟೆಂಬರ್ 20ರಂದು ಚೆನ್ನೈನಲ್ಲಿ ನಡೆದ ಸಿನಿಮಾ ಪ್ರಮೋಶನ್ ಈವೆಂಟ್ಗೆ ಬಿಗ್ ಬಿ ಆಗಮಿಸಲು ಸಾಧ್ಯವಾಗಿಲ್ಲವಾದರೂ, ಹೃದಯಸ್ಪರ್ಶಿ ವಿಡಿಯೋ ಸಂದೇಶದ ಮೂಲಕ ಅಭಿಮಾನಿಗಳು ಮತ್ತು ಚಿತ್ರತಂಡದೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ರಿಲೀಸ್ ಈವೆಂಟ್ನ ಕೆಲ ಹೈಲೆಟ್ಸ್ ಇಲ್ಲಿವೆ.
ಸುಪ್ರೀಮ್ ಆಫ್ ಆಲ್ ಸ್ಟಾರ್ಸ್’: ಬಿಗ್ ಬಿ
ತಮ್ಮ ವಿಡಿಯೋದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ದಕ್ಷಿಣ ಚಿತ್ರರಂಗದ ಹೆಸರಾಂತ ನಟ ರಜನಿಕಾಂತ್ ಅವರನ್ನು “ಸುಪ್ರೀಮ್ ಆಫ್ ಆಲ್ ಸ್ಟಾರ್ಸ್” ಎಂದು ಉಲ್ಲೇಖಿಸಿದ್ದಾರೆ. ಈ ಗುಣಗಾನ ಪ್ರೇಕ್ಷಕರಿಂದ ಹರ್ಷೋದ್ಗಾರ ಮತ್ತು ಚಪ್ಪಾಳೆಗಳನ್ನು ಸ್ವೀಕರಿಸಿತು. “ವೆಟ್ಟೈಯನ್ ನನ್ನ ಚೊಚ್ಚಲ ತಮಿಳು ಚಿತ್ರ, ಗೌರವಕರ ವಿಷಯ. ರಜನಿಕಾಂತ್ ಎಲ್ಲ ಸ್ಟಾರ್ಗಳಿಗಿಂತಲೂ ಸರ್ವೋಚ್ಛ” ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
‘ರಜನಿ ನೆಲದ ಮೇಲೆ ಮಲಗುತ್ತಿದ್ದರು’: 1991ರ ಬ್ಲಾಕ್ಬಸ್ಟರ್ ‘ಹಮ್’ ಚಿತ್ರದಲ್ಲಿ ರಜನಿಕಾಂತ್ ಮತ್ತು ಅಮಿತಾಭ್ ಸಹೋದರರ ಪಾತ್ರ ನಿರ್ವಹಿಸಿದ್ದರು. ವಿಡಿಯೋದಲ್ಲಿ, ಬಿಗ್ ಬಿ ಶೂಟಿಂಗ್ ಕ್ಷಣಗಳನ್ನು ನೆನಪಿಸಿಕೊಂಡರು. ಹಮ್ ಚಿತ್ರೀಕರಣದ ವೇಳೆ ನಾನು ನನ್ನ ಎಸಿ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿದ್ದೆ. ರಜನಿ ಬ್ರೇಕ್ ಟೈಮ್ನಲ್ಲಿ ನೆಲದ ಮೇಲೆ ಮಲಗುತ್ತಿದ್ದರು. ಅವರ ಸರಳತೆ ನೋಡಿ ನಾನು ವಾಹನದಿಂದ ಹೊರಬಂದು ಹೊರಗೆ ವಿಶ್ರಾಂತಿ ಪಡೆದೆ ಎಂದು ಹಳೇ ನೆನಪುಗಳನ್ನು ಮೆಲುಕು ಹಾಕಿದರು.
‘ಬಿಗ್ ಬಿ ಯಶಸ್ಸಿನ ಅವನತಿಗಾಗಿ ಜಗತ್ತು ಕಾದಿತ್ತು’: ಈವೆಂಟ್ನಲ್ಲಿ, ಅಮಿತಾಭ್ ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಎದುರಿಸಿದ ಕೆಲ ಸವಾಲುಗಳನ್ನು ರಜನಿ ವಿವರಿಸಿದರು. “ಅಮಿತ್ ಜಿ ಸಿನಿಮಾಗಳನ್ನು ನಿರ್ಮಿಸುವ ಸಂದರ್ಭ ಅವರು ದೊಡ್ಡ ನಷ್ಟವನ್ನು ಎದುರಿಸಿದ್ದರು. ಎಷ್ಟರ ಮಟ್ಟಿಗೆಂದರೆ ತಮ್ಮ ವಾಚ್ಮ್ಯಾನ್ಗೆ ಸಂಬಳ ಪಾವತಿಸಲು ಸಹ ಸಾಧ್ಯವಾಗಲಿಲ್ಲ. ಅವರ ಜುಹು ನಿವಾಸ ಪಬ್ಲಿಕ್ ಬಿಡ್ಡಿಂಗ್ಗೆ ಹೋಗಿತ್ತು. ಆ ಸಂದರ್ಭ ಬಾಲಿವುಡ್ ಅವರನ್ನು ನೋಡಿ ನಗುತ್ತಿತ್ತು. ಅವರ ಯಶಸ್ಸಿನ ಅವನತಿಗಾಗಿ ಜಗತ್ತು ಕಾದಿತ್ತು” ಎಂದು ತಿಳಿಸಿದರು.
‘ದಿನಕ್ಕೆ 10 ಗಂಟೆ ಕೆಲಸ ಮಾಡುತ್ತಾರೆ’: “ಕೇವಲ ಮೂರು ವರ್ಷಗಳಲ್ಲಿ, ಅಮಿತಾಭ್ ಅವರು ಜಾಹೀರಾತುಗಳು ಮತ್ತು ಕೆಬಿಸಿ ಯಲ್ಲಿ ಕಾಣಿಸಿಕೊಂಡರು. ಎಲ್ಲ ಹಣವನ್ನು ಮರಳಿ ಗಳಿಸಿದರು. ಜುಹು ಸೇರಿದಂತೆ ಅವರ ಮೂರು ಮನೆಗಳನ್ನು ಸಹ ಮರಳಿ ಪಡೆದರು. ಅವರದ್ದು ಸ್ಫೂರ್ತಿದಾಯಕ ವ್ಯಕ್ತಿತ್ವ. 82ರ ಹರೆಯದ ಅವರು ದಿನಕ್ಕೆ 10 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ” ಎಂದು ಪ್ರಶಂಸೆಗಳ ಸುರಿಮಳೆಯನ್ನೇ ಹರಿಸಿದರು.
ತಂದೆಯ ಜನಪ್ರಿಯತೆಯನ್ನು ಬಳಸಲಿಲ್ಲ’: ಅಮಿತಾಭ್ ಕುಟುಂಬದ ಸಾಹಿತ್ಯ ಪರಂಪರೆ ಬಗ್ಗೆಯೂ ಮಾತನಾಡಿದರು. “ಅಮಿತಾಭ್ ಅವರ ತಂದೆ ಓರ್ವ ಶ್ರೇಷ್ಠ ಬರಹಗಾರರಾಗಿದ್ದರು. ಅವರು ತಮ್ಮ ತಂದೆಯ ಜನಪ್ರಿಯತೆಯನ್ನು ಸುಲಭವಾಗಿ ಬಳಸಬಹುದಿತ್ತು. ಆದರೆ ಅವರು ತಮ್ಮದೇ ಆದ ಮಾರ್ಗ ಕಂಡುಕೊಂಡರು” ಎಂದು ತಿಳಿಸಿದರು.
ಅಮಿತಾಭ್ ಆ್ಯಕ್ಸಿಡೆಂಟ್ ನೆನಪಿಸಿಕೊಂಡ ರಜನಿ: ರಜನಿ ಕೆಲ ಕಠಿಣ ಕ್ಷಣಗಳನ್ನೂ ನೆನಪಿಸಿಕೊಂಡರು. “ಒಮ್ಮೆ, ಅಮಿತಾಭ್ ಅವರು ಭೀಕರ ಅಪಘಾತಕ್ಕೊಳಗಾದರು. ಆ ವೇಳೆ, ಇಂದಿರಾ ಗಾಂಧಿ ಅವರು ಸಮ್ಮೇಳನಕ್ಕಾಗಿ ವಿದೇಶದಲ್ಲಿದ್ದರು. ಅಪಘಾತದ ಬಗ್ಗೆ ತಿಳಿದ ಕೂಡಲೇ ಅವರು ಭಾರತಕ್ಕೆ ಹಿಂತಿರುಗಿದರು. ಆಗ ರಾಜೀವ್ ಗಾಂಧಿ ಮತ್ತು ಅಮಿತಾಭ್ ಜಿ ಒಟ್ಟಿಗೆ ವಿದ್ಯಾಭ್ಯಾಸ ಪಡೆದವರು ಎಂಬುದು ಎಲ್ಲರಿಗೂ ಗೊತ್ತಾಯಿತು.
ಕುಣಿದು ಕುಪ್ಪಳಿಸಿದ ರಜನಿ: ‘ವೆಟ್ಟೈಯನ್’ನ ಪ್ರಿವ್ಯೂ ಮತ್ತು ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಂಜು ವಾರಿಯರ್, ರಾಣಾ ದಗ್ಗುಬಾಟಿಯಂತಹ ಗಣ್ಯರು ಕಾಣಿಸಿಕೊಂಡರು. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ಮನಸಿಲಾಯೊ ಹಾಡಿಗೆ ಸಿಗ್ನೇಚರ್ ಸ್ಟೆಪ್ ಹಾಕಲು ರಜನಿಕಾಂತ್ ಅವರನ್ನು ಆಹ್ವಾನಿಸಿದರು. ಬ್ಲ್ಯಾಕ್ ಔಟ್ಫಿಟ್ನಲ್ಲಿದ್ದ ಸೂಪರ್ ಸ್ಟಾರ್ ವೇದಿಕೆಯಲ್ಲಿ ಸಖತ್ ಸ್ಟೆಪ್ ಹಾಕಿದರು. ಅನಿರುದ್ಧ್ ಅವರ ಗಾಯನ ಈವೆಂಟ್ನ ಉತ್ಸಾಹ ಹೆಚ್ಚಿಸಿತ್ತು. ರಜನಿಕಾಂತ್ ಡ್ಯಾನ್ಸ್ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್ನ ಗೇಟ್ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್ಬಾಗ್ನಲ್ಲಿ ಬೃಹತ್ ಬ್ಯಾನರ್ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್ಗಳಲ್ಲಿ ಪಾರ್ಕ್ಗಳೇ ಇಲ್ಲ!
ಐಐಹೆಚ್ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
ಬೆಂಗಳೂರು22 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ21 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ರಾಜ್ಯ24 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ದೇಶ24 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
-
ಬೆಂಗಳೂರು3 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ3 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
