Connect with us

ಬೆಂಗಳೂರು

ಟ್ರಾಫಿಕ್ ರೂಲ್ಸ್ ಪಾಲನೆ ಮಾಡದವರ ಲೈಸೆನ್ಸ್ ರದ್ದು ಮಾಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಚಾರ ನಿಯಮ ಪಾಲನೆ ಮಾಡದವರ ಲೈಸೆನ್ಸ್ ರದ್ದು ಮಾಡುವ ನಿಯಮ ರಾಜ್ಯದಲ್ಲೂ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸಾರಿಗೆ ಇಲಾಖೆಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಯೋಜನೆಯಡಿ ನೂತನ 65 ಅಂಬುಲೆನ್ಸ್ ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ, ನಿಯಮ ಪಾಲನೆ ಮಾಡುವಂತೆ ಜನರಿಗೆ ಕರೆ ಕೊಟ್ಟರು. ಹೊಸ 65 ಅಂಬುಲೆನ್ಸ್‌ ಸೇರ್ಪಡೆ ಆಗುತ್ತಿವೆ.‌ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಈ ಅಂಬುಲೆನ್ಸ್ ಕೊಡ್ತಿದ್ದೇವೆ‌.108 ಅಂಬುಲೆನ್ಸ್‌ ಕೆಲಸ ಮಾಡ್ತಿವೆ. ಇದರ ಜೊತೆಗೆ 65 ಅಂಬುಲೆನ್ಸ್‌ ಬರ್ತಿವೆ. 39 ಬೇಸಿಕ್ ಲೈಫ್ ಸಪೋರ್ಟ್, 26 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಅಂಬುಲೆನ್ಸ್‌ಗಳಾಗಿವೆ. ಅಡ್ವಾನ್ಸ್ಡ್ ಅಂಬುಲೆನ್ಸ್‌ನಲ್ಲಿ ವೆಂಟಿಲೇಟರ್ ಇರುತ್ತದೆ. ಅಪಘಾತಕ್ಕೆ ಈಡಾದವರಿಗೆ ಜೀವ ಉಳಿಸೋ ಕೆಲಸ ಮಾಡ್ತಾವೆ ಎಂದು ತಿಳಿಸಿದರು.

ಪ್ರತಿ ವರ್ಷ 40 ಸಾವಿರ ಅಪಘಾತ ಆಗುತ್ತದೆ. ಇದರಲ್ಲಿ 10 ಸಾವಿರ ಜ‌ನ ಪ್ರಾಣ ಕಳೆದುಕೊಳ್ಳುತ್ತಾರೆ‌. ಜಾಸ್ತಿ ಯುವಕರಿಗೆ, ಶಾಲಾ ಮಕ್ಕಳಿಗೆ ಅಪಘಾತ ಆಗ್ತಿದೆ. ಇದರಿಂದ ಅವರಿಂದ ಸಮಾಜಕ್ಕೆ ಆಗೋ ಒಳ್ಳೆ ಕೆಲಸ ಕಳೆದುಕೊಳ್ಳುತ್ತೇವೆ. ಹೀಗಾಗಿ ಸಾವು ತಡೆಯಲು ರಸ್ತೆ ಸುರಕ್ಷತಾ ಪ್ರಾಧಿಕಾರದ ನಿಧಿಯಿಂದ ವರ್ಷಕ್ಕೆ 45 ಕೋಟಿ ಹಣ ಆರೋಗ್ಯ ಇಲಾಖೆಗೆ ಕೊಡ್ತಾರೆ. ಇದರಲ್ಲಿ ಅಂಬುಲೆನ್ಸ್‌ ಖರೀದಿ ಮಾಡಿದ್ದಾರೆ. ಮುಂದಿನ ವರ್ಷದಿಂದ ಮತ್ತಷ್ಟು ಹಣ ಅಂಬುಲೆನ್ಸ್‌ಗೆ ಕೊಡ್ತೀವಿ ಎಂದರು.

ಅಪಘಾತದಿಂದ ಇಡೀ ಜೀವಮಾನ ನರಳಬೇಕಾಗುತ್ತವೆ. ಆಕ್ಸಿಡೆಂಟ್ ಆದ ಒಂದು ಗಂಟೆ ಬಹಳ ಮುಖ್ಯ. ಒಂದು ಗಂಟೆ ಒಳಗೆ ಚಿಕಿತ್ಸೆ ಸಿಕ್ಕರೆ ಪ್ರಾಣ ಉಳಿಸಬಹುದು. ಗೋಲ್ಡನ್ ಹವರ್ ತುಂಬಾ ಮುಖ್ಯ. ಈ ಸಮಯದಲ್ಲಿ ಜೀವ ಉಳಿಸಬಹುದು ಎಂದು ಸಿಎಂ ತಿಳಿಸಿದರು. ಅಪಘಾತ ಕಡಿಮೆ ಆಗಲು ಕಾರ್, ಸ್ಕೂಟರ್, ವಾಹನಗಳು ಓಡಿಸೋರು ನಿಯಮ ಪಾಲನೆ ಮಾಡಬೇಕು. ಬಳಹ ಜನ ಕುಡಿದು ಓಡಿಸ್ತಾರೆ. ಕುಡಿದು ಗಾಡಿ ಓಡಿಸೋದು ಅಪಾಯ ಅಂತಾ ಬೋರ್ಡ್ ಇದ್ದರೂ, ಅದನ್ನು ನೋಡಿಕೊಂಡೇ ಕುಡೀತಾರೆ. ಮೂತ್ರ ವಿಸರ್ಜನೆ ಮಾಡಬಾರದು ಅಂತಾ ಬೋರ್ಡ್ ಹಾಕಿದ್ರೂ, ಅಲ್ಲೆ ಮೂತ್ರ ವಿಸರ್ಜನೆ ಮಾಡ್ತಾರೆ. ಇದು ನಮ್ಮ ಜನ. ನಮ್ಮ ಜನ ಚಾಪೆ ಕೆಳಗೆ ನುಗ್ಗದೇ ರಂಗೋಲೆ ಕೆಳಗೆ ನುಗ್ಗುತ್ತಾರೆ. ಇನ್ಮುಂದೆ ಎಲ್ಲರೂ ನಿಯಮಗಳನ್ನು ಪಾಲನೆ ಮಾಡಿ ಎಂದು ಕರೆಕೊಟ್ಟರು.

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

BESCOMಗೆ C-ರೇಟಿಂಗ್ ಶಾಕ್: ದೇಶದ 54 ಎಸ್ಕಾಂಗಳಲ್ಲಿ 51ನೇ ಸ್ಥಾನ

ಬೆಂಗಳೂರು: ದೇಶದ 54 ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಿದ್ಯುತ್ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಕರ್ನಾಟಕದ ಬೆಸ್ಕಾಂ (BESCOM) 51ನೇ ಸ್ಥಾನಕ್ಕೆ ಕುಸಿದಿದೆ. 14ನೇ ವಾರ್ಷಿಕ ಸಂಯೋಜಿತ ರೇಟಿಂಗ್ ಮತ್ತು ಶ್ರೇಯಾಂಕ ವರದಿಯಲ್ಲಿ ಬೆಸ್ಕಾಂ ಕಳಪೆ ಪ್ರದರ್ಶನ ನೀಡಿದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿದೆ.

ವಿದ್ಯುತ್ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಸಂಗ್ರಹಣಾ ದಕ್ಷತೆ, ಬಿಲ್ಲಿಂಗ್ ದಕ್ಷತೆ, ಪ್ರಸರಣ ನಷ್ಟ, ಆಡಿಟ್ ಖಾತೆಗಳ ಲಭ್ಯತೆ ಸೇರಿದಂತೆ 15 ಪ್ರಮುಖ ಮಾನದಂಡಗಳ ಆಧಾರದಲ್ಲಿ ಶ್ರೇಯಾಂಕ ನೀಡಲಾಗಿದೆ. ಈ ಸಾಲಿನ ವರದಿಯಲ್ಲಿ ಬೆಸ್ಕಾಂ 100ರಲ್ಲಿ ಕೇವಲ 12.44 ಅಂಕಗಳನ್ನು ಪಡೆದು C-ರೇಟಿಂಗ್ ಮತ್ತು ‘ಕೆಂಪು ಕಾರ್ಡ್’ ಪಡೆದಿದೆ.

ವರದಿ ಪ್ರಕಾರ, ಬೆಸ್ಕಾಂ 13,819 ಕೋಟಿ ರೂ. ಸಂಚಿತ ನಷ್ಟ ಹಾಗೂ 22,611 ಕೋಟಿ ರೂ. ಸ್ಥಾಯಿ ಸಾಲವನ್ನು ಹೊಂದಿದೆ. 2025ನೇ ಹಣಕಾಸು ವರ್ಷದಲ್ಲಿ ಮಾತ್ರ 5,476 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷಕ್ಕಿಂತ ಕುಸಿತ

ಹಿಂದಿನ 13ನೇ ವಾರ್ಷಿಕ ರೇಟಿಂಗ್‌ನಲ್ಲಿ ಬೆಸ್ಕಾಂ 100ರಲ್ಲಿ 40.43 ಅಂಕಗಳನ್ನು ಪಡೆದು B-ದರ್ಜೆಯೊಂದಿಗೆ 34ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 51ನೇ ಸ್ಥಾನಕ್ಕೆ ಜಾರಿದ್ದು ಕಾರ್ಯಕ್ಷಮತೆಯಲ್ಲಿ ಕುಸಿತ ಸ್ಪಷ್ಟವಾಗಿದೆ.

ಆಶ್ಚರ್ಯಕರವಾಗಿ, ಕರ್ನಾಟಕದ ಯಾವುದೇ ಎಸ್ಕಾಂಗಳು ಟಾಪ್ 10 ಅಥವಾ ಟಾಪ್ 20 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಆದರೆ ಮೆಸ್ಕಾಂ (MESCOM) 26ನೇ ಸ್ಥಾನ ಪಡೆದು ರಾಜ್ಯದ ಇತರ ಸಂಸ್ಥೆಗಳಿಗಿಂತ ಉತ್ತಮ ಪ್ರದರ್ಶನ ನೀಡಿದೆ.

ಸುಧಾರಣೆ ಅಗತ್ಯ

ತಜ್ಞರು ರಾಜ್ಯ ಸರ್ಕಾರವು ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರದ ಹೊರತು ಎಸ್ಕಾಂಗಳ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. KERC ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್, “ಗುರುಚರಣ್ ಸಮಿತಿ ವರದಿ ಎಸ್ಕಾಂಗಳನ್ನು ಪುನರುಜ್ಜೀವನಗೊಳಿಸಲು ರಚನಾತ್ಮಕ ಮತ್ತು ಕ್ರಿಯಾತ್ಮಕ ಸುಧಾರಣೆಗಳನ್ನು ಸೂಚಿಸಿತ್ತು. ಇಂತಹ ಸುಧಾರಣೆಗಳನ್ನು ತ್ವರಿತವಾಗಿ ಜಾರಿಗೆ ತರುವ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿ, “ಕೆಲವು ಲೆಕ್ಕಪತ್ರ ಸಮಸ್ಯೆಗಳಿವೆ. ಅವನ್ನು ಗುರುತಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇತರ ಅಂಶಗಳಲ್ಲಿ ಕಾರ್ಯಕ್ಷಮತೆ ತೃಪ್ತಿಕರವಾಗಿದೆ. ಆದಾಯದ ಬೆಳವಣಿಗೆ ಆರೋಗ್ಯಕರವಾಗಿದೆ” ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?

ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ. ಈ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು RCB ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಬಿಂಬಿಸಿಕೊಂಡು ವಂಚನೆ ಆರೋಪದಡಿ ಬಂಧನದಲ್ಲಿರುವ ಸುಕೇಶ್, ತಮ್ಮ ಎಲ್‌ಎಸ್ ಹೋಲ್ಡಿಂಗ್ಸ್ (LS Holdings) ಸಂಸ್ಥೆ ಮೂಲಕ ಡಿಯಾಜಿಯೋಗೆ ಪತ್ರ ಬರೆದು 1 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹8,300 ಕೋಟಿ) ಮೊತ್ತದ ಸಂಪೂರ್ಣ ನಗದು ಬಿಡ್ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. 48 ಗಂಟೆಗಳೊಳಗೆ ಪಾವತಿ ಪೂರ್ಣಗೊಳಿಸಲು ಸಿದ್ಧತೆ ಇದೆ ಎಂದು ಕೂಡ ಹೇಳಿದ್ದಾರೆ.

ಸುಕೇಶ್, RCB ಅನ್ನು ತಮ್ಮ ತವರು ತಂಡ ಎಂದು ಬಣ್ಣಿಸಿ, ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಉಡುಗೊರೆಯಾಗಿ ನೀಡುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇದೇವರೆಗೆ 9 ಬಿಡ್‌ಗಳು ಸಲ್ಲಿಕೆಯಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಸೀರಂ ಇನ್‌ಸ್ಟಿಟ್ಯೂಟ್‌ನ ಅದಾರ್ ಪೂನಾವಾಲಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ಸಹ ಮಾಲೀಕತ್ವ ಹೊಂದಿರುವ ಗ್ಲೇಝರ್ಸ್ ಕಂಪನಿಗಳು ಪೈಪೋಟಿಯಲ್ಲಿ ಇದ್ದಾರೆ. ಗ್ಲೇಝರ್ಸ್ ಸಂಸ್ಥೆ ಸುಮಾರು ₹16,300 ಕೋಟಿ ಮೊತ್ತದ ಬಿಡ್ ಸಲ್ಲಿಸಿದೆ ಎನ್ನಲಾಗಿದೆ.

RCB ಮಾರಾಟ ಪ್ರಕ್ರಿಯೆ ಈಗ ಕ್ರಿಕೆಟ್ ಮತ್ತು ಉದ್ಯಮ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.

Continue Reading

Trending