Connect with us

ರಾಜಕೀಯ

ಗೃಹ ಸಚಿವರ ಸುಕ್ಷೇತ್ರದಲ್ಲೇ ವಾಲ್ಮೀಕಿ ಸಮುದಾಯಕ್ಕೆ ಅಪಮಾನ

Published

on

ತುಮಕೂರು: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಆಗಿದ್ದು, ವಾಲ್ಮೀಕಿ ಜಯಂತಿ ದಿನದಂದೇ ಕಿಡಿಗೇಡಿಗಳು ವಾಲ್ಮೀಕಿ ಗುರುಗಳ ಪುತ್ಧಳಿ ಕದ್ದೊಯ್ದ ಘಟನೆ ನಡೆದಿದೆ,
ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ, ಘಟನೆಯ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕೊರಟಗೆರೆ ಪಟ್ಟಣದಲ್ಲಿ ಮಹಿಳೆಯರು ಸೇರಿದಂತೆ ವಾಲ್ಮೀಕಿ ಸಮುದಾಯ ನಾಯಕರು ಧರಣಿ ನಡೆಸಿದರು,
ಸ್ಧಳದಲ್ಲಿ ಉದ್ವಗ್ನಿ ಸ್ಧಿತಿ ನಿರ್ಮಾಣ ಹಿನ್ನೆಲೆಯಲ್ಲಿ ತುಮಕೂರು ಎಸ್.ಪಿ. ಅಶೋಕ್ ಕೆ.ವಿ. ಹಾಗೂ ಎಎಸ್ ಪಿ ಮರಿಯಪ್ಪ ಭೇಟಿ ನೀಡಿ ಪರಿಸ್ಧಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು, ಈ ವೇಳೆ ವಾಲ್ಮೀಕಿ ಸಮುದಾಯದವರು ಉದ್ದೇಶ ಪೂರ್ವಕವಾಗಿ ಈ ಕೃತ್ಯ ಮಾಡಲಾಗಿದೆ ಎಂದು ಆರೋಪಿಸಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಎಂದು ಒತ್ತಾಯಿಸಿದರು,
ಕಿಡಿಗೇಡಿಗಳನ್ನು ಬಂಧಿಸುವವರೆಗೂ ಧರಣಿ ಕೈಬಿಡಲ್ಲ ಎಂದು ಪಟ್ಟು ಹಿಡಿದರು, ಈ ವೇಳೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ಅವರು ವಾಲ್ಮೀಕಿ ಪುತ್ಧಳಿ ಕದ್ದೋಯ್ದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದರು, ಧರಣಿ ಕೈ ಬಿಡುವಂತೆ ವಾಲ್ಮೀಕಿ ಸಮುದಾಯದ ನಾಯಕರಿಗೆ ಪೊಲೀಸರು ಮನವಿ ಮಾಡಿದರು.
ಆದರೂ ಧರಣಿ ಕೈಬಿಡುವ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಮುಂದುವರೆಸಿದರು, ಘಟನಯು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ,

ದೇಶ

2028ರವರೆಗೆ ಸಿದ್ದರಾಮಯ್ಯ ಮುಂದುವರಿಕೆ? ಡಿಕೆಶಿಗೆ ಭವಿಷ್ಯದ ಭರವಸೆ

Published

on

ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿ ‘ಇಂದಿರಾ ಭವನ’ದಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಹೈವೋಲ್ಟೇಜ್ ಸಭೆಯಲ್ಲಿ ಸದ್ಯಕ್ಕೆ ರಾಜ್ಯ ರಾಜಕಾರಣದಲ್ಲಿ ಯಾವುದೇ ತಕ್ಷಣದ ನಾಯಕತ್ವ ಬದಲಾವಣೆ ಇಲ್ಲದೆ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆಗಳು ದಟ್ಟವಾಗಿವೆ.

ಕಾಂಗ್ರೆಸ್ ನಾಯಕ Rahul Gandhi ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಬಗ್ಗೆ ಪ್ರಮುಖ ಚರ್ಚೆ ನಡೆದಿದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ಪಕ್ಷದ ಮುಖ್ಯ ಗುರಿ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ. ಜೊತೆಗೆ ಯಾವುದೇ ರೀತಿಯ ಬಣ ರಾಜಕೀಯ ಅಥವಾ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ನಡುವಿನ ನಾಯಕತ್ವ ಸಮೀಕರಣದ ಕುರಿತೂ ಚರ್ಚೆ ನಡೆದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, 2028ರ ವಿಧಾನಸಭಾ ಚುನಾವಣೆಯ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಹೈಕಮಾಂಡ್ ನೀಡಿದೆ ಎಂದು ಹೇಳಲಾಗುತ್ತಿದೆ.

ಅವರೆಗೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದ್ದು, ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಜವಾಬ್ದಾರಿಯನ್ನೂ ಅವರಿಗೆ ನೀಡಲಾಗಿದೆ. ಇದೇ ವೇಳೆ ಬಹುಕಾಲದಿಂದ ಚರ್ಚೆಯಲ್ಲಿರುವ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೂಡ ಸಮಾಲೋಚನೆ ನಡೆದಿದ್ದು, ನಿಷ್ಠಾವಂತ ನಾಯಕರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ.

ಈ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಜಿಬಿಎ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ. ಇಬ್ಬರೂ ನಾಯಕರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ರಾಹುಲ್ ಗಾಂಧಿ ಸಂದೇಶ ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ Mallikarjun Kharge ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಗೆ ಕೂಡ ತೆರೆ ಬಿದ್ದಿದ್ದು, ಅವರು ರಾಜ್ಯ ರಾಜಕೀಯಕ್ಕೆ ಮರಳುವುದಿಲ್ಲ ಎಂಬ ಸಂದೇಶ ಸಭೆಯಲ್ಲಿ ಸ್ಪಷ್ಟವಾಗಿದೆ.

Continue Reading

ದೇಶ

ದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ

Published

on

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ Siddaramaiah ಅವರು ಇಂದು ಬೆಳಗ್ಗೆ ರಾಜಧಾನಿಯ ಕನ್ನಡ ಭವನದಲ್ಲಿ ರಾಜ್ಯದ ಪ್ರಮುಖ ಸಚಿವರು ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಉಪಹಾರ ಸೇವನೆ ಮಾಡುವ ಮೂಲಕ ಪರೋಕ್ಷವಾಗಿ ತಮ್ಮ ರಾಜಕೀಯ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಈ ಉಪಹಾರ ಸಭೆಯಲ್ಲಿ ಗೃಹ ಸಚಿವ G. Parameshwara, ಸಚಿವರಾದ Satish Jarkiholi, H. C. Mahadevappa, Bairathi Suresh, K. J. George, M. B. Patil ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಜೊತೆಗೆ ಹಿರಿಯ ಕಾಂಗ್ರೆಸ್ ಮುಖಂಡ B. K. Hariprasad ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಉಪಸ್ಥಿತರಿದ್ದರು.

ಈ ವೇಳೆ ರಾಜ್ಯ ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಹೈಕಮಾಂಡ್ ಭೇಟಿಗೂ ಮುನ್ನ ರಾಜ್ಯದ ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ಇದೇ ವೇಳೆ ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿ ‘ಇಂದಿರಾ ಭವನ’ದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ಆರಂಭಿಸಿದೆ. ಉಪ ಮುಖ್ಯಮಂತ್ರಿ D. K. Shivakumar ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ Mallikarjun Kharge, ಲೋಕಸಭೆ ವಿರೋಧ ಪಕ್ಷದ ನಾಯಕ Rahul Gandhi, ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಹಾಗೂ ರಾಜ್ಯ ಉಸ್ತುವಾರಿ Randeep Singh Surjewala ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಇದರ ಜೊತೆಗೆ ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.

ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.

ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending