ಬೆಂಗಳೂರು
ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ
ಬೆಂಗಳೂರು: ಕೆಂಗೇರಿ (Kengeri) ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಣ್ಣ ಶ್ರೀನಿವಾಸನ ಮೃತ ದೇಹ ಪತ್ತೆಯಾಗಿದೆ.
ಸೋಮವಾರ ಅಣ್ಣ ಶ್ರೀನಿವಾಸ್ (13) ತಂಗಿ ಲಕ್ಷ್ಮೀ (11) ನಾಪತ್ತೆಯಾಗಿದ್ದರು. ಕೆಂಗೇರಿ ಕೆರೆಯಲ್ಲಿ ಮಕ್ಕಳು ಬಿದ್ದಿರುವ ಶಂಕೆ ಹಿನ್ನೆಲೆ ಇಂದು ಬೆಳಗ್ಗೆ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ಆರಂಭ ಮಾಡಿದ್ದರು. ಸುಮಾರು 3 ಗಂಟೆಗಳಿಂದ ಸತತ ಕಾರ್ಯಾಚರಣೆ ನಡೆಸಿ, ಅಣ್ಣ ಜಾನ್ ಸೀನಾ ಮೃತ ದೇಹ ಪತ್ತೆ ಹಚ್ಚಿದ್ದಾರೆ.
ಪ್ರಕರಣ ಏನು?
ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳಾದ ಶ್ರೀನಿವಾಸ್ ಮತ್ತು ಲಕ್ಷ್ಮೀ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆಗೆ (Lake) ನೀರು ತರಲು ಹೋಗಿದ್ದರು.
ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಯುತ್ತಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮ ಅವರ ಆಕ್ರಂದನ ಮುಗಿಲು ಮುಟ್ಟಿದೆ.
ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದರು.
ಜ್ಞಾನ ಭಾರತಿ ಅಗ್ನಿ ಶಾಮಕ ದಳದ ಆರು ಮಂದಿ ಸಿಬ್ಬಂದಿಯಿಂದ ಕೆಂಗೇರಿ ಕೆರೆಯಲ್ಲಿ ಬೋಟ್ ಬಳಸಿ ಕಾರ್ಯಾಚರಣೆ ನಡೆಯುತ್ತಿದೆ. 12 ಗಂಟೆ ನಂತರ ಬೋರ್ವೆಲ್ಗಳಲ್ಲಿ ಬಳಸುವ ಕ್ಯಾಮರಾ ಮೂಲಕ ಕಾರ್ಯಾಚರಣೆ ನಿರ್ಧರಿಸಲಾಗಿದೆ.
ಮೂರು ಹಂತದಲ್ಲಿ ಕಾರ್ಯಾಚರಣೆಗೆ ನಿರ್ಧಾರ ಮಾಡಲಾಗಿದೆ. ಮೊದಲ ಹಂತ ಗ್ರಾಪ್ ನೇಲ್ ಮೂಲಕ ಕಾರ್ಯಾಚರಣೆ, ಎರಡನೇ ಹಂತದಲ್ಲಿ ಬೋರ್ ವೆಲ್ ಕ್ಯಾಮರಾ, ಮೂರನೇ ಹಂತದದಲ್ಲಿ ಅಂಡರ್ ವಾಟರ್ ಕ್ಯಾಮರಾ ಬಳಸಿ ಶೋಧ ಕಾರ್ಯನಡೆಸಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.
ರಾಜ್ಯ
Bidadi Township ವಿರೋಧಕ್ಕೆ ರೈತರ ರಣಕಹಳೆ; JMC ಕಾರಿನ ಮೇಲೆ ಕಲ್ಲು ತೂರಾಟ
ಬೆಂಗಳೂರು ದಕ್ಷಿಣ: Bidadi Township (Bidadi Smart Township) ಯೋಜನೆಗೆ ವಿರೋಧವಾಗಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದಲ್ಲಿ ಜಂಟಿ ಮಾರುಕಟ್ಟೆ ಸಮಿತಿ (JMC) ಅಧಿಕಾರಿಗಳ ಸರ್ವೇ ಕಾರ್ಯವನ್ನು ವಿರೋಧಿಸಿ ನೂರಾರು ರೈತರು ಹಾಗೂ ರೈತ ಮಹಿಳೆಯರು ಸೋಮವಾರ ರಸ್ತೆಗಿಳಿದು ಭಾರೀ ಪ್ರತಿಭಟನೆ ನಡೆಸಿದರು.
ಸರ್ವೇ ನಡೆಸಲು ಬಂದ ಅಧಿಕಾರಿಗಳ ವಾಹನವನ್ನು ತಡೆದ ಪ್ರತಿಭಟನಾಕಾರರು ಕಾರಿನ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದು ವಾಹನದ ಮೇಲೆ ಹೊಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮಹಿಳೆಯರು, “ನಮ್ಮ ಜೀವ ಹೋದರೂ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಕೃಷಿ ಭೂಮಿಯನ್ನು ಬಿಡುವುದಿಲ್ಲ. ಬಲವಂತದ ಸರ್ವೇ ಒಪ್ಪುವುದಿಲ್ಲ” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ರೈತರು ಟೌನ್ಶಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕೈಯಲ್ಲಿ ಪೊರಕೆಗಳನ್ನು ಹಿಡಿದು ಬಿಡದಿ–ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ಧರಣಿ ನಡೆಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ಪ್ರತಿಭಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ರೈತರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ, ಯೋಜನೆಯನ್ನು ಕೈಬಿಡುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ಸ್ಪಷ್ಟಪಡಿಸಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಈ ಬೆಳವಣಿಗೆ ರಾಜ್ಯದ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ರೈತರ ನಡುವಿನ ಮಾತುಕತೆ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು
Yeshwanthpura ದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಬ್ಯಾಡರಹಳ್ಳಿ, ಭಾರತನಗರದಲ್ಲಿ ಹೆಚ್ಚಿದ ಭೀತಿ
ಬೆಂಗಳೂರು, ಜುಲೈ 13: Yeshwanthpura ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಹಾಗೂ ಭಾರತನಗರ ಪ್ರದೇಶಗಳಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರ ಪಾರ್ಕ್ ಹಾಗೂ ರಸ್ತೆ ಪಕ್ಕದ ಖಾಲಿ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದರೆ, ಭಾನುವಾರವೂ ಮತ್ತೆ ಪ್ರತ್ಯಕ್ಷವಾಗಿರುವುದು ಜನರ ಭಯವನ್ನು ಮತ್ತಷ್ಟು ಹೆಚ್ಚಿಸಿದೆ.
ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರ ಸೂಚನೆಯಂತೆ ಸಾರ್ವಜನಿಕರ ಮನವಿಯ ಮೇರೆಗೆ ಚಿರತೆ ಅಡಗಿಕೊಳ್ಳುತ್ತಿದ್ದ ಪೊದೆಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಚಿರತೆ ಮತ್ತೆ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆಯ ಮುಂದಿನ ಕ್ರಮದತ್ತ ಜನರ ಗಮನ ನೆಟ್ಟಿದೆ.
ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಒಂದು ಬೋನನ್ನು ಅಳವಡಿಸಿದೆ. ಆದರೆ, ಒಂದು ಬೋನು ಸಾಕಾಗುವುದಿಲ್ಲ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದು, ಕನಿಷ್ಠ ಎರಡು ಅಥವಾ ಮೂರು ಬೋನುಗಳನ್ನು ಅಳವಡಿಸಿ, ಅರಣ್ಯ ಇಲಾಖೆ ಸಿಬ್ಬಂದಿಯಿಂದ ನಿರಂತರ ಗಸ್ತು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಸಂಜೆಯಾಗುತ್ತಿದ್ದಂತೆ ಈ ಭಾಗದಲ್ಲಿ ಜನರು ಹೊರಗಡೆ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ವಾಹನ ಸಂಚಾರವೂ ಕಡಿಮೆಯಾಗಿದ್ದು, ಮಕ್ಕಳು ಹಾಗೂ ವೃದ್ಧರ ಸುರಕ್ಷತೆ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಚಿರತೆಯ ಚಲನವಲನದ ಮೇಲೆ ನಿಗಾ ಇರಿಸಲಾಗಿದೆ. ಸ್ಥಳೀಯರು ಅನಗತ್ಯವಾಗಿ ಹೊರಗೆ ಓಡಾಡದಂತೆ ಹಾಗೂ ಚಿರತೆ ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ರಾಜ್ಯ
Government Office ಗಳಿಗೆ ಡಿಸಿ ದಿಢೀರ್ ಭೇಟಿ; ತಡವಾಗಿ ಬಂದ ಅಧಿಕಾರಿಗಳ ವಿರುದ್ಧ ಕಠಿಣ ಸೂಚನೆ
ಬೆಂಗಳೂರು ಗ್ರಾಮಾಂತರ: Government Office ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯಕ್ಕೆ ಹಾಜರಾಗುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸೋಮವಾರ ಬೆಳಗ್ಗೆ ವಿವಿಧ ಇಲಾಖೆಗಳಿಗೆ ದಿಢೀರ್ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದರು. ಬೆಳಗ್ಗೆ 10.30ರಿಂದ 11 ಗಂಟೆಯೊಳಗೆ ನಡೆದ ಈ ಪರಿಶೀಲನೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕ ಮೂಡಿಸಿತು.
ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ, ಭೂ ದಾಖಲೆ, ಆರೋಗ್ಯ, ಕೃಷಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಹಲವು ಕಚೇರಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಮಯಕ್ಕೆ ಕಚೇರಿಗೆ ಬಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಿದರು.
ರಾಜ್ಯ ಸರ್ಕಾರ ಇತ್ತೀಚೆಗೆ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಡಿಜಿಟಲ್ ಹಾಜರಾತಿ ಆಪ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್ಔಟ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಪ್ನಲ್ಲಿ ಹಾಜರಾತಿ ದಾಖಲಿಸಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ ಹಾಗೂ ಫೀಲ್ಡ್ ವರ್ಕ್ಗೆ ತೆರಳಿದ್ದರೆ ಅದರ ವಿವರವನ್ನು ಆಪ್ನಲ್ಲಿ ದಾಖಲಿಸಿದ್ದಾರೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು, ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಈ ಅನಿರೀಕ್ಷಿತ ಭೇಟಿ ಸಿಬ್ಬಂದಿಯನ್ನು ಅಚ್ಚರಿಗೆ ದೂಡಿದ್ದು, ಇಂತಹ ಪರಿಶೀಲನೆಗಳು ನಿರಂತರವಾಗಿ ನಡೆದರೆ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಆಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
-
ಕ್ರೀಡೆ23 ಗಂಟೆಗಳು agoEngland ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್? ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆ
-
ಅಪರಾಧ22 ಗಂಟೆಗಳು agoTelangana ‘ಇದು ನನ್ನ ಆಯ್ಕೆ’ ಎಂದ ಎಸ್ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
-
ದೇಶ19 ಗಂಟೆಗಳು agoPM Narendra Modi ಜಕಾರ್ತಾ ಭೇಟಿ ಐತಿಹಾಸಿಕ; ಭಾರತ-ಇಂಡೋನೇಷ್ಯಾ ನಡುವೆ ಹಲವು ಮಹತ್ವದ ಒಪ್ಪಂದಗಳು
-
ಬೆಂಗಳೂರು22 ಗಂಟೆಗಳು ago₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ
-
ದೇಶ23 ಗಂಟೆಗಳು agoThailand ಪಬ್ನಲ್ಲಿ ಭೀಕರ ಅಗ್ನಿ ಅವಘಡ; 27 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
-
ರಾಜ್ಯ15 ಗಂಟೆಗಳು agoBakrid ವೇಳೆ ಗೋಹತ್ಯೆ ತಡೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ತಮಿಳುನಾಡು ಸರ್ಕಾರಕ್ಕೆ ಸದ್ಯದ ನೆಮ್ಮದಿ
-
ದೇಶ23 ಗಂಟೆಗಳು agoKadapa ದಲ್ಲಿ ಕೋವಿಡ್ ಆತಂಕ; ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ
-
ರಾಜ್ಯ23 ಗಂಟೆಗಳು agoKarnataka SIR ಅಭಿಯಾನಕ್ಕೆ ಭರ್ಜರಿ ವೇಗ; ಶೇ.92.95 ಕೆಲಸ ಪೂರ್ಣ
