ರಾಜಕೀಯ
ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ, ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡವೆ ಪ್ರಜ್ವಲ್ ರೇವಣ್ಣ ಅವರ ಸಿಡಿ ಪ್ರಕರಣ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಪರ ಪ್ರಚಾರ ನಡೆಸಿದ ಸಿದ್ದರಾಮಯ್ಯ ಅವರು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಅವಕಾಶ ಕೊಡಿ. ಈ ಉಪಚುನಾವಣೆಯಲ್ಲಿ ಅವರಿಗೆ ಆಶೀರ್ವಾದ ಮಾಡಿ, ಯೋಗೇಶ್ವರ್ ಗೆ ಎಲ್ಲರೂ ಕೈ ಎತ್ತಿ ಆಶೀರ್ವಾದ ಮಾಡಿದ್ದೀರಿ, ನಾನು ಚನ್ನಪಟ್ಟಣಕ್ಕೆ ಮತ್ತೊಮ್ಮೆ ಬರ್ತೀನಿ, 11ಕ್ಕೆ ಸಾರ್ವಜನಿಕ ಸಭೆ ಇದೆ, ಅಲ್ಲಿ ಹೆಚ್ಚು ಹೊತ್ತು ಮಾತನಾಡುತ್ತೇನೆ. ಇದು ಉಪಚುನಾವಣೆ, ಸಾಮಾನ್ಯ ಚುನಾವಣೆ ಅಲ್ಲ. ಇದೇನು ಸರ್ಕಾರ ರಚನೆ ಮಾಡುವ ಚುನಾವಣೆಯಲ್ಲ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದಿರಿ, ಆದರೆ, ಅವರು ಬಿಜೆಪಿ ಜೊತೆ ಸೇರಿ ಕೇಂದ್ರದಲ್ಲಿ ಮಂತ್ರಿ ಆಗುವ ಆಸೆಯಿಂದ ಮಂಡ್ಯಕ್ಕೆ ಹೋಗಿ ನಿಂತರು. ಕೇಂದ್ರದಲ್ಲಿ ಮಂತ್ರಿಯಾಗಿ ಐದಾರು ತಿಂಗಳು ಆಯಿತು. ಐದಾರು ತಿಂಗಳಲ್ಲಿ ಐದು ತಿಂಗಳು ಮಂಡ್ಯದಲ್ಲೇ ಇದ್ದಾರೆ. ಇವರು ದೇಶದ ಮಂತ್ರಿ, ಬೇರೆ ರಾಜ್ಯಗಳಿಗೆ ಹೋಗಲ್ಲ. ಯಾಕಂದ್ರೆ ಇವರು ಜನರ ಪರವಾಗಿ ಕೆಲಸ ಮಾಡಲ್ಲ.
2018ರಲ್ಲಿ ನಾವೆಲ್ಲಾ ಸೇರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದೆವು, ಕೇವಲ 37 ಸ್ಥಾನ ಗೆದ್ದಿದ್ದರೂ ಸಿಎಂ ಮಾಡಿದ್ದೆವು. ಈ ಕುಮಾರಸ್ವಾಮಿ, ದೇವೇಗೌಡರು ಯಾವತ್ತೂ ಬಡವರ ಪರ ಕೆಲಸ ಮಾಡಿಲ್ಲ. ಯಾವಾಗಲೂ ಭಾವನಾತ್ಮಕವಾಗಿ ಜನರ ಅನುಕಂಪ ಗಿಟ್ಟಿಸಿಕೊಂಡು ಅಧಿಕಾರಕ್ಕೆ ಬರುತ್ತಾರೆ. ದೇವೇಗೌಡ ಕುಟುಂಬಕ್ಕೆ ಇದೇ ಕೆಲಸವಾಗಿದೆ. ಈ ಚುನಾವಣೆಯಲ್ಲಿ ಸೋಲುತ್ತೇವೆಂದು ಅವರಿಗೆ ಗೊತ್ತಾಗಿದೆ. ಹಾಗಾಗಿ ಈಗಲೇ ಅಳೋಕೆ ಶುರು ಮಾಡಿದ್ದಾರೆ.
ದೇವೇಗೌಡರೆ ಯಾಕೆ ಇಲ್ಲಿ ಬಂದು ಅಳ್ತೀರಾ? ನಿಮ್ಮ ಮೊಮ್ಮಗ ಹಾಸನದಲ್ಲಿ ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ನಲ್ಲ ಅಲ್ಲಿ ಹೋಗಿ ಅಳಿ. ಇಲ್ಲಿ ಮೊಮ್ಮಗ 3ನೇ ಬಾರಿಗೆ ಸೋತುಬಿಡ್ತಾನೆ ಅಂತ ಬಂದು ಇಲ್ಲಿ ಅಳ್ತಾ ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಆಯ್ತು ಈಗ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು ಅಳೋದು ಕಲ್ತಿದ್ದಾರೆ. ಅಳೋ ಗಂಡಸರನ್ನ ನಂಬಬಾರದಂತೆ. ಯಾಕೆ ಅಳಬೇಕು? ಕೆಲಸ ಮಾಡಿದ್ದರೆ ಯಾಕೆ ಅಳಬೇಕು? ಕರುಳು ಹಿಂಡಿ ಬಿಡುತ್ತಂತೆ, ಯಾಕೆ ಹಾಸನದಲ್ಲಿ ಅತಿ ದೊಡ್ಡ ಲೈಂಗಿಕ ಹಗರಣ ಆದಾಗ ಯಾಕೆ ಅಳಲಿಲ್ಲಾ? ಅಲ್ಲಿ ದೇವೇಗೌಡರಿಗೆ, ನಿಖಿಲ್ಗೆ ಅಳು ಬರಲಿಲ್ಲ. ಈಗ ಚನ್ನಪಟ್ಟಣದಲ್ಲಿ ಅಳು ಬರುತ್ತಾ? ಎಂದು ಲೇವಡಿ ಮಾಡಿದರು.
40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಒಂದೇ ಒಂದು ಕಪ್ಪು ಚುಕ್ಕಿ ನನ್ನ ಮೇಲೆ ಇಲ್ಲ. ಆದರೆ, ಈಗ ಬಿಜೆಪಿಯವರು ನನ್ನನ್ನ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ನನ್ನನ್ನ ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.
ದೇವೇಗೌಡ ಅವರು ಈ ವಯಸ್ಸಿನಲ್ಲೂ ಮೊಮ್ಮಗನ ಪರ ಪ್ರಚಾರ ಮಾಡುವುದಕ್ಕೆ ಬಂದಿದ್ದಾರೆ, ಸಿದ್ದರಾಮಯ್ಯನ ಗರ್ವ ಇಳಿಸಬೇಕು ಎಂದು ದೇವೇಗೌಡ ಅವರು ಹೇಳಿದ್ದಾರೆ. ಈ ರೀತ ಹೇಳಿ ಜನರ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ನಾನು ಯವಾತ್ತೂ ಅಧಿಕಾರ ಬಂದಾಗ ಗರ್ವದಿಂದ, ಅಹಂ ನಿಂದ ನಡೆದುಕೊಂಡಿಲ್ಲ. ಜನರ ಉತ್ಸಾಹ ನೋಡುತ್ತಿದ್ದಾರೆ ಯೋಗೆಶ್ವರ್ ಗೆಲುವು ನಿಶ್ಚಿತ, ನೂರಕ್ಕೆ ನೂರರಷ್ಟು ಯೋಗೇಶ್ವರ್ ಗೆಲ್ಲುತ್ತಾರೆ. ಯೋಗೇಶ್ವರ್ ಈ ತಾಲೂಕಿನವರು, ಇಲ್ಲಿನ ಜನರ ಕಷ್ಟ ಗೊತ್ತಿರುವವರು. ನಿಖಿಲ್ ಕುಮಾರಸ್ವಾಮಿಗೆ ಗೊತ್ತಾ, ಹಳ್ಳಿಗಳು ಗೊತ್ತಾ? ಕುಮಾರಸ್ವಾಮಿಗೂ ಗೊತ್ತಿಲ್ಲ ಎಂದರು.
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗಿದ್ದಾರೆ, ನಾವು ಮೇಕೆದಾಟು ಯೋಜನಗೆ ಮುಂದಾಗಿದ್ದೇವೆ. ಈಗ ರೈತನ ಮಗ, ಮಣ್ಣಿನ ಮಗ ಅದನ್ನು ಮಾಡಿಸಲಿ, ಕೇಂದ್ರದಲ್ಲಿ ಅನುಮತಿ ಕೊಡಿಸಲಿ, 24 ಗಂಟೆಗಳಲ್ಲಿ ಸೈನ್ ಹಾಕಿಸುತ್ತೇನಂದು ಹೇಳಿದ್ದರು. ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
ದೇವೇಗೌಡರು ಇಲ್ಲಿಗೆ ಬಂದು ಕಣ್ಣೀರು ಹಾಕಿದರೆ. ಮೇಕೆದಾಟು ಮಾಡಲು ಆಗಲ್ಲ, ರಾಜ್ಯದ ಪರವಾಗಿ ಬಿಜೆಪಿ-ಜೆಡಿಎಸ್ ನವರು ಬಾಯಿ ಬಿಡಲ್ಲ. ಇಂತವರಿಗೆ ಓಟ್ ಹಾಕ್ತೀರಾ? ಇಂತವರನ್ನ ನೀವು ಆಯ್ಕೆ ಮಾಡಬಾರದು ನಿಖಿಲ್ ಕುಮಾರಸ್ವಾಮಿ ಸೋಲಿಸಿ ಯೋಗೇಶ್ವರ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ದೇಶ
ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ
ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.
ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.
ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.
ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ದೇಶ
ಹೊಸ ಪಕ್ಷ, ಹೊಸ ಹೋರಾಟ! ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಕ್ರಾಂತಿ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ K. Annamalai ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ನಡೆಸಿದ ಅಣ್ಣಾಮಲೈ, ತಮ್ಮ ಹೊಸ ರಾಜಕೀಯ ವೇದಿಕೆಗೆ ‘We The People’ (ನಾವು ಜನರು) ಎಂದು ಹೆಸರು ಇಡಲಾಗುವುದು ಎಂದು ಘೋಷಿಸಿದರು. ಈ ಪಕ್ಷವು ಸಂಪೂರ್ಣವಾಗಿ ನಾಗರಿಕ ಕೇಂದ್ರಿತ ರಾಜಕೀಯ ಮಾದರಿಯನ್ನು ಅನುಸರಿಸಲಿದೆ ಎಂದು ಅವರು ತಿಳಿಸಿದರು.
“ಕಳೆದ 18 ತಿಂಗಳುಗಳಿಂದ ಹಲವು ವಿಚಾರಗಳಲ್ಲಿ ಬಿಜೆಪಿ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯಗಳಿದ್ದವು. 2025ರ ಡಿಸೆಂಬರ್ನಲ್ಲೇ ಪಕ್ಷ ಬಿಡುವ ನಿರ್ಧಾರವನ್ನು ಹೈಕಮಾಂಡ್ಗೆ ತಿಳಿಸಿದ್ದೆ. ಆದರೆ ಚುನಾವಣೆಯವರೆಗೆ ಜವಾಬ್ದಾರಿ ನಿರ್ವಹಿಸುವಂತೆ ಕೋರಿದ್ದರಿಂದ ಮುಂದುವರಿದಿದ್ದೆ,” ಎಂದು ಅಣ್ಣಾಮಲೈ ಹೇಳಿದ್ದಾರೆ.
ತಮ್ಮ ಭಾಷಣದಲ್ಲಿ ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ನೆನಪಿಸಿಕೊಂಡ ಅವರು, “ಅಧಿಕಾರ ಮತ್ತು ಹುದ್ದೆಗಳು ಯಾರಿಗೂ ಶಾಶ್ವತವಲ್ಲ. ರಾಜಕೀಯದಲ್ಲಿ ಒಂದೇ ಕುಟುಂಬ ಅಥವಾ ವ್ಯಕ್ತಿಗೆ ನಿರಂತರವಾಗಿ ಅಧಿಕಾರ ಸಿಗಬಾರದು. ಸಾಮಾನ್ಯ ಕುಟುಂಬಗಳಿಂದ ಬಂದವರಿಗೂ ಅವಕಾಶ ಸಿಗಬೇಕು,” ಎಂದು ವಂಶಾಡಳಿತ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು.
ಹೊಸ ಪಕ್ಷವು ಸ್ಥಳೀಯ ಸಂಸ್ಥೆಗಳಿಂದ ವಿಧಾನಸಭೆ ಚುನಾವಣೆಯವರೆಗೆ ಎಲ್ಲಾ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಭ್ರಷ್ಟಾಚಾರ ರಹಿತ, ಪಾರದರ್ಶಕ ಮತ್ತು ಜನಪರ ಆಡಳಿತವೇ ತಮ್ಮ ರಾಜಕೀಯ ಚಳವಳಿಯ ಮುಖ್ಯ ಗುರಿಯಾಗಿದೆ ಎಂದರು.
ಬಿಜೆಪಿಯಿಂದ ಹೊರಬಂದಿದ್ದರೂ ಪ್ರಧಾನಿ Narendra Modi ಅವರ ಮೇಲಿನ ಗೌರವ ಕಡಿಮೆಯಾಗಿಲ್ಲ ಎಂದು ಹೇಳಿದ ಅಣ್ಣಾಮಲೈ, “ಸಿದ್ಧಾಂತ ಮತ್ತು ಕಾರ್ಯವೈಖರಿಯಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಪ್ರಧಾನಿ ಮೋದಿ ಅವರ ನಾಯಕತ್ವದ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಸ್ಪಷ್ಟಪಡಿಸಿದರು.
ಅಣ್ಣಾಮಲೈ ಅವರ ಆಪ್ತ ವಲಯವು ಈ ಹೊಸ ರಾಜಕೀಯ ಪರಿಕಲ್ಪನೆಯನ್ನು ‘ದ್ರಾವಿಡ 2.0’ ಎಂದು ಬಣ್ಣಿಸುತ್ತಿದ್ದು, ಪ್ರಾದೇಶಿಕ ತಮಿಳು ಅಸ್ಮಿತೆ ಹಾಗೂ ರಾಷ್ಟ್ರೀಯ ದೃಷ್ಟಿಕೋನವನ್ನು ಒಟ್ಟುಗೂಡಿಸುವ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.
ದೇಶ
ಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ
ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಪಡೆದಿರುವ K. H. Muniyappa ಅವರು ಕೂಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಖಾತೆ ಹಂಚಿಕೆ ವೇಳೆ ತಮ್ಮ ಹಿರಿತನಕ್ಕೆ ತಕ್ಕ ಮಹತ್ವ ನೀಡಿಲ್ಲ ಎಂದು ಮುನಿಯಪ್ಪ ಬೇಸರ ಹೊರಹಾಕಿದ್ದಾರೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲೂ ಆಹಾರ ಖಾತೆಯನ್ನೇ ನಿರ್ವಹಿಸಿದ್ದ ಅವರು, ಈ ಬಾರಿ ಬೇರೆ ಖಾತೆಯ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ. ಆದರೆ ಮತ್ತೆ ಅದೇ ಇಲಾಖೆಯ ಜವಾಬ್ದಾರಿ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಏಳು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ, “ಪಕ್ಷದಲ್ಲಿ ನನ್ನ ಹಿರಿತನವನ್ನು ಪರಿಗಣಿಸಿಲ್ಲ. ಆಹಾರ ಖಾತೆ ಬದಲು ಬೇರೆ ಇಲಾಖೆ ನೀಡುವಂತೆ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಖಾತೆ ಹಂಚಿಕೆಯಲ್ಲಿ ಹಿರಿಯ ನಾಯಕರಿಗೆ ಸೂಕ್ತ ಗೌರವ ಸಿಗಬೇಕಿತ್ತು” ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ಬೆಂಗಳೂರು ಅಭಿವೃದ್ಧಿ ಇಲಾಖೆ ನಿರೀಕ್ಷಿಸಿದ್ದ Ramalinga Reddy ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟವನ್ನುಂಟು ಮಾಡಿದೆ.
ಸರ್ಕಾರ ರಚನೆಯಾದ ಮೂರೇ ದಿನಗಳಲ್ಲಿ ಇಬ್ಬರು ಹಿರಿಯ ನಾಯಕರ ಅಸಮಾಧಾನ ಬಹಿರಂಗವಾಗಿರುವುದು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ. ಅಸಮಾಧಾನಿತ ನಾಯಕರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಮುಂದಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯ ವಲಯ ಕುತೂಹಲದಿಂದ ಗಮನ ಹರಿಸಿದೆ.
-
ದೇಶ23 hours agoಶೈಕ್ಷಣಿಕ ಜಾಗ ದುರ್ಬಳಕೆ ಆರೋಪ: ಕೆಂಗೇರಿ ಟ್ರಸ್ಟ್ ವಿರುದ್ಧ PIL ವಿಚಾರಣೆ
-
ಅಪರಾಧ3 hours agoಭಂಗಾರ್ ಬಾಂಬ್ ಸ್ಫೋಟ ಪ್ರಕರಣ: ತಲೆಮರೆಸಿಕೊಂಡಿದ್ದ ಮಾಜಿ ಶಾಸಕ ಸಾಕೋಟ್ ಮೊಲ್ಲಾ ಬಂಧನ
-
ದೇಶ6 hours agoಪೆಟ್ರೋಲ್ಗೆ ಪರ್ಯಾಯ E85 ಇಂಧನಕ್ಕೆ ಚಾಲನೆ; ಪರಿಸರ ಸ್ನೇಹಿ ಇಂಧನ ಕ್ರಾಂತಿ ಶುರು
-
ದೇಶ5 hours agoBangalore : ಡಿಜಿಟಲ್ ಹಣಕಾಸು ಕ್ಷೇತ್ರದಲ್ಲಿ ಭಾರತದ ಸಾಧನೆ; ಸಹಮತಿ SRO ಆಗಿ ಗುರುತಿಸಿದ RBI
-
ದೇಶ5 hours agoBengaluru : Major Boost for Digital Finance: Sahamati Gets RBI Approval as AA Ecosystem Regulator
-
ಕ್ರೀಡೆ2 hours agoಕೆಎಲ್ ರಾಹುಲ್ಗೆ ‘ಆಸ್ಕರ್’ ಟೀಕೆ! ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ನಲ್ಲಿ ವಿವಾದ
-
ದೇಶ5 hours agoಭಾರತಕ್ಕೆ ಸಿಕ್ಕಿತು ಹೊಸ ಇಂಧನ ಸಂಪತ್ತು! ಅಂಡಮಾನ್ ಕಡಲಿನಲ್ಲಿ ಅನಿಲ ನಿಕ್ಷೇಪ ಪತ್ತೆ
-
ದೇಶ2 hours agoಸುಳ್ಳು ಹೇಳಿಕೆಗಳಿಂದ ವಾಸ್ತವ ಬದಲಾಗದು: ಯುಎನ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಕಿಡಿ
