ಬೆಂಗಳೂರು
ಬಸ್ನಲ್ಲೂಟಿಕೆಟ್ಗೆ ಫೋನ್ ಪೇ, ಗೂಗಲ್ ಪೇ ಯೂಸ್ ಮಾಡಬಹುದು!
ಇನ್ಮುಂದೆ ಬಸ್ನಲ್ಲಿ ಹೋಗೋಕೆ ಜೇಬ್ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಚಿಲ್ಲರೆ ಸಮಸ್ಯೆಯಿಂದ ಮುಕ್ತಿ ಸಿಗುತ್ತೆ. ಚಿಲ್ಲರೆ ಇಲ್ಲ ಅನ್ನೋ ಪ್ರಯಾಣಿಕರು ಮತ್ತು ಕಂಡಕ್ಟರ್ ಸಮಸ್ಯೆ ದೂರವಾಗುತ್ತೆ. ಬಸ್ಗಳಲ್ಲಿ ಟಿಕೆಟ್ ಪಡೆಯಲು ಸಾರಿಗೆ ಇಲಾಖೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ, ನಿಮ್ಮ ಮೊಬೈಲ್ ನಲ್ಲಿ UPI ಪೇಮೆಂಟ್ ಅವಕಾಶ ಇದ್ರೆ ಸಾಕು ಬಸ್ ನಲ್ಲಿ ಟಿಕೆಟ್ ಪಡೆಯಬಹುದು. UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ ನೀಡಿದ್ದು, ಪ್ರಾಯೋಗಿಕವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಆರಂಭ ಮಾಡಲಾಗಿದೆ. ಫೋನ್ ಪೇ, ಗೂಗಲ್ ಪೇ ಸೇರಿದಂತೆ UPI ಮೂಲಕ ಪೇಮೆಂಟ್ ಮಾಡಬಹುದು. ಮುಂದಿನ ದಿನಗಳಲ್ಲಿ ಬಿಎಂಟಿಸಿ, KSRTC ಗೆ ವಿಸ್ತರಿಸಲು ಚಿಂತನೆ ಮಾಡಲಾಗಿದೆ. UPI ಪೇಮೆಂಟ್ ನಿಂದ ನಗದು ರಹಿತ ಪಾವತಿ, ಮೊಬೈಲ್ ನಲ್ಲಿ UPI ಆ್ಯಪ್ ಇದ್ರೆ ಸಾಕು ಬಸ್ ನಲ್ಲಿ ಸಂಚರಿಸಬಹುದು. ಮೊಬೈಲ್ UPI ಮೂಲಕ ಪೇಮೆಂಟ್ ಮಾಡಿ ಟಿಕೆಟ್ ಪಡೆಯಬಹುದು.
ದೇಶ
ರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
ಬೆಂಗಳೂರು: ನಗರದ ಪ್ಯಾಲೇಸ್ ರಸ್ತೆಯಲ್ಲಿ ನಾಗರಹಾವು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ರಸ್ತೆಯ ಮಧ್ಯಭಾಗಕ್ಕೆ ಬಂದ ನಾಗರಹಾವು ಇದ್ದಕ್ಕಿದ್ದಂತೆ ಹೆಡೆ ಬಿಚ್ಚಿ ನಿಂತಿದ್ದು, ಇದನ್ನು ಕಂಡ ವಾಹನ ಸವಾರರು ಹಾಗೂ ಸ್ಥಳೀಯರು ಬೆಚ್ಚಿಬಿದ್ದರು.
ರಸ್ತೆಯ ನಡುಭಾಗದಲ್ಲೇ ಹಾವು ಕೆಲಕಾಲ ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಕಾರು, ಬೈಕ್ ಹಾಗೂ ಇತರೆ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ, ಪ್ಯಾಲೇಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹಾವು ಅಲ್ಲೇ ಇದ್ದ ಕಾರಣ ಸ್ಥಳದಲ್ಲಿ ಜನರು ಜಮಾಯಿಸಿ ಕುತೂಹಲದಿಂದ ವೀಕ್ಷಿಸಿದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಹಾವು ರಕ್ಷಣೆಯಲ್ಲಿ ಪರಿಣತಿ ಹೊಂದಿದ ಸಿಬ್ಬಂದಿಯ ಸಹಾಯದಿಂದ ನಾಗರಹಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಹಿಡಿದು ಸ್ಥಳಾಂತರಿಸಲಾಯಿತು. ಈ ವೇಳೆ ಸಾರ್ವಜನಿಕರು ಹಾವಿನ ಸಮೀಪ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದರು.
ಹಾವು ರಕ್ಷಣೆಯಾದ ನಂತರ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು. ಕೆಲಕಾಲ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿವಾರಣೆಯಾಗಿದ್ದು, ಸಂಚಾರ ಎಂದಿನಂತೆ ಸುಗಮವಾಯಿತು.
ಮಳೆಗಾಲದ ಸಮಯದಲ್ಲಿ ಹಾವುಗಳು ತಮ್ಮ ವಾಸಸ್ಥಳಗಳಿಂದ ಹೊರಬಂದು ನಗರ ಪ್ರದೇಶಗಳಿಗೆ ಪ್ರವೇಶಿಸುವ ಘಟನೆಗಳು ಹೆಚ್ಚಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾವು ಕಂಡುಬಂದರೆ ಅದನ್ನು ಹಿಡಿಯಲು ಅಥವಾ ಹತ್ತಿರ ಹೋಗಲು ಪ್ರಯತ್ನಿಸದೆ ತಕ್ಷಣ ಅರಣ್ಯ ಇಲಾಖೆ, ಹಾವು ರಕ್ಷಣಾ ಸಿಬ್ಬಂದಿ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ದೇಶ
ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಬಾಡಿಗೆದಾರರಿಗೆ ಇಂಧನ ಇಲಾಖೆ ಮಹತ್ವದ ಸಡಿಲಿಕೆ ನೀಡಿದೆ. ಇನ್ನು ಮುಂದೆ ಬಾಡಿಗೆ ಒಪ್ಪಂದದ ಪತ್ರ (Rent Agreement) ಇಲ್ಲದಿದ್ದರೂ ಸಹ ಬಾಡಿಗೆದಾರರು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಬಹುದಾಗಿದೆ.
ಇಲ್ಲಿಯವರೆಗೆ ಅಧಿಕೃತ ಬಾಡಿಗೆ ಕರಾರು ಪತ್ರ ಇಲ್ಲದ ಕಾರಣ ಅನೇಕ ಬಾಡಿಗೆದಾರರು ಯೋಜನೆಗೆ ನೋಂದಣಿ ಮಾಡಿಕೊಳ್ಳಲು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಗಮನಿಸಿದ ಇಂಧನ ಇಲಾಖೆ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಅದರಂತೆ, ಬಾಡಿಗೆ ಒಪ್ಪಂದದ ಪ್ರತಿ ಇಲ್ಲದಿದ್ದರೆ ಸಂಬಂಧಿತ ಬೆಸ್ಕಾಂ (BESCOM) ಅಥವಾ ಆಯಾ ಎಸ್ಕಾಂ ಕಚೇರಿಯಿಂದ ನೀಡಲಾಗುವ ವಿಶೇಷ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಈ ನಮೂನೆಗೆ ಬಾಡಿಗೆದಾರ ಮತ್ತು ಮನೆಯ ಮಾಲೀಕರು ಇಬ್ಬರೂ ಸಹಿ ಹಾಕಿ ಸಲ್ಲಿಸಿದರೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಪೂರ್ಣಗೊಳ್ಳಲಿದೆ.
ಇದರ ಜೊತೆಗೆ ಜುಲೈ ತಿಂಗಳ ವಿದ್ಯುತ್ ಬಿಲ್ಲಿಗೂ ಮಹತ್ವದ ಬದಲಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳು ಮನೆ ಮನೆಗೆ ತೆರಳಿ ಮೀಟರ್ ರೀಡಿಂಗ್ ಮಾಡುವ ಪ್ರಕ್ರಿಯೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಕಂಪನಿಗಳು ಸ್ಪಷ್ಟಪಡಿಸಿವೆ.
ಹೀಗಾಗಿ ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಈ ಸರಾಸರಿ ಬಳಕೆಯನ್ನು ಪರಿಗಣಿಸಿ ಬಿಲ್ ಸಿದ್ಧಪಡಿಸಿ ಗ್ರಾಹಕರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಹೊಸ ಕ್ರಮದಿಂದ ಬಾಡಿಗೆದಾರರಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುವುದು ಮತ್ತಷ್ಟು ಸುಲಭವಾಗಿದ್ದು, ಬಾಡಿಗೆ ಕರಾರು ಪತ್ರ ಇಲ್ಲದ ಕಾರಣ ಇದುವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಕುಟುಂಬಗಳಿಗೆ ಇದು ದೊಡ್ಡ ಅನುಕೂಲವಾಗಲಿದೆ.
ಕ್ರೀಡೆ
ಅಪ್ಪು ಕಪ್ ಸೀಸನ್ 4ಕ್ಕೆ ಅದ್ದೂರಿ ಚಾಲನೆ: ಜುಲೈ 24ರಿಂದ ಶಟಲ್ ಬ್ಯಾಡ್ಮಿಂಟನ್ ಲೀಗ್ ಆರಂಭ
ಬೆಂಗಳೂರು: ರಾಜ್ಯದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿರುವ ಅಪ್ಪು ಕಪ್ ಸೀಸನ್ 4 (Appu Cup Season 4) ಶಟಲ್ ಬ್ಯಾಡ್ಮಿಂಟನ್ ಟೂರ್ನಿಗೆ ಅದ್ದೂರಿ ಚಾಲನೆ ದೊರೆತಿದೆ. STELLER STUDIO & EVENT MANAGEMENT ಸಂಸ್ಥೆ, PRK Audio ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಈ ಪ್ರತಿಷ್ಠಿತ ಟೂರ್ನಿಯ ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಸಂಭ್ರಮದಿಂದ ನಡೆಯಿತು. ಇದೇ ಜುಲೈ 24, 25 ಮತ್ತು 26ರಂದು ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ. ಪ್ರಭಾಕರ್, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಟೂರ್ನಿಗೆ ಶುಭ ಕೋರಿದರು. ತಂಡಗಳ ಮಾಲೀಕರು, ನಾಯಕರು, ರಾಯಭಾರಿಗಳು ಹಾಗೂ ಮೆನ್ ಮತ್ತು ವುಮನ್ ಐಕಾನ್ಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಆಯೋಜಕ ಚೇತನ್ ಸೂರ್ಯ, “ಅಪ್ಪು ಕಪ್ ಆರಂಭವಾದ ದಿನದಿಂದಲೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬೆಂಬಲ ನಮ್ಮೊಂದಿಗಿದೆ. ಈ ಬಾರಿಯ ಪಂದ್ಯಗಳು ಜುಲೈ 24ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಪಂದ್ಯಗಳ ನೇರ ಪ್ರಸಾರವೂ ಇರಲಿದೆ. ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ತಿಳಿಸಿದರು.
ಟಿ.ಎ. ಶರವಣ ಅವರು, “ಅಪ್ಪು ಕಪ್ ಆರಂಭದಿಂದಲೇ ಚೇತನ್ ಸೂರ್ಯ ಅವರೊಂದಿಗೆ ಇದ್ದೇನೆ. ಮುಂದೆಯೂ ಈ ಕ್ರೀಡಾ ಉತ್ಸವಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ” ಎಂದು ಹೇಳಿದರು. ಕೆ.ವಿ. ಪ್ರಭಾಕರ್ ಹಾಗೂ ಸಾ.ರಾ. ಗೋವಿಂದು ಅವರು ಕೂಡ ಟೂರ್ನಿಯ ಯಶಸ್ಸಿಗೆ ಶುಭ ಹಾರೈಸಿದರು.
ಕ್ರೀಡೆ, ಮನರಂಜನೆ ಹಾಗೂ ಯುವ ಪ್ರತಿಭೆಗಳಿಗೆ ವೇದಿಕೆಯಾಗಿರುವ ಅಪ್ಪು ಕಪ್ ಸೀಸನ್ 4 ಈ ಬಾರಿ ಮತ್ತಷ್ಟು ಭರ್ಜರಿಯಾಗಿ ನಡೆಯಲಿದ್ದು, ಬ್ಯಾಡ್ಮಿಂಟನ್ ಅಭಿಮಾನಿಗಳಲ್ಲಿ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಬೆಂಗಳೂರಿನ ಕ್ರೀಡಾ ಕ್ಯಾಲೆಂಡರ್ನಲ್ಲಿ ಈ ಟೂರ್ನಿ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮುವ ಸಾಧ್ಯತೆ ಇದೆ.
-
ದೇಶ23 hours agoPetrol Diesel Price: ಜುಲೈ 20ರೊಳಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಗ್ರಾಹಕರಿಗೆ ಸಿಗುತ್ತಾ ಸಿಹಿಸುದ್ದಿ
-
ದೇಶ22 hours ago30 ನಿಮಿಷ ಸಿಂಹದ ಹಿಡಿತದಲ್ಲೇ ವ್ಯಕ್ತಿ! ಗ್ರಾಮಸ್ಥರ ಕೂಗಾಟಕ್ಕೂ ಜಗ್ಗದ ಕಾಡಿನ ರಾಜ
-
ದೇಶ22 hours agoGrama Panchayat Election ಬಿಗ್ ಅಪ್ಡೇಟ್! ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ
-
ದೇಶ22 hours agoಕೇರಳದಲ್ಲಿ ಮತ್ತೆ ಪ್ರಕೃತಿ ವಿಕೋಪ! ವಯನಾಡಿನ ಕಲ್ಲಾಡಿ ಗ್ರಾಮದಲ್ಲಿ ಭಾರೀ ಭೂ ಕುಸಿತ
-
ದೇಶ19 hours agoಅಂಜನಾದ್ರಿ ಹುಂಡಿ ಎಣಿಕೆ ಬಳಿಕ 4 ದಿನ ಮೌನ! ಈಗ ಪ್ರಕಟಣೆ ಹೊರಬಿದ್ದಿದ್ದು ಏಕೆ?
-
ದೇಶ19 hours ago‘ಕಿಂಗ್100’ನಲ್ಲಿ ಟಬು ವಿಲನ್! ನಾಗಾರ್ಜುನ ವಿರುದ್ಧ ಹೊಸ ಅವತಾರ
-
ದೇಶ5 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ದೇಶ22 hours agoರೈತರ ಬೆಳೆ ಸಾಲ ಮನ್ನಾ ಆಗುತ್ತಾ? ಕಲಬುರಗಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
