Connect with us

ರಾಜಕೀಯ

ಬೈ ಎಲೆಕ್ಷನ್‌ ರಿಸಲ್ಟ್‌ಗೆ ಕೌಂಟ್‌ಡೌನ್‌: ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್​?

ಹಾವೇರಿ: ಶಿಗ್ಗಾಂವಿ-ಸವಣೂರು ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆದಿದ್ದು, ನಾಳೆ ಫಲಿತಾಂಶ ಬರಲಿದೆ. ಈ ಚುನಾವಣೆಯಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ನಡುವೆ ನೇರ ಹಣಾಹಣಿ ಇದೆ.

ಅರೆಮಲೆನಾಡು ತಾಲೂಕುಗಳಾದ ಶಿಗ್ಗಾಂವಿ – ಸವಣೂರು ದಾಸಶ್ರೇಷ್ಠರಾದ ಕನಕದಾಸ ಮತ್ತು ದಾರ್ಶನಿಕ ಶಿಶುನಾಳ ಷರೀಫರು ಜನ್ಮವೆತ್ತಿದ ಭೂಮಿ. ರಾಜಕೀಯ ಮುತ್ಸದ್ಧಿ- ಮಾಜಿ ಸಿಎಂ ಎಸ್​. ನಿಜಲಿಂಗಪ್ಪ ಮತ್ತು ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಗೆ ರಾಜಕೀಯ ಮರುಹುಟ್ಟು ಕೊಟ್ಟ ಕ್ಷೇತ್ರವಾಗಿದೆ.

2024ರ ಉಪಚುನಾವಣೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು: ಬಿಜೆಪಿ ಅಭ್ಯರ್ಥಿಯಾಗಿ ಭರತ್​ ಬೊಮ್ಮಾಯಿ, ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್, ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಖಾಜಾಮೈನುದ್ದೀನ ಗುಡಗೇರಿ, ಕೆಆರ್​ಎಸ್ ಪಕ್ಷದ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿ, ಪಕ್ಷೇತರ ಅಭ್ಯರ್ಥಿಗಳಾಗಿ ಡಾ.ಜಿ.ಹೆಚ್. ಇಮ್ರಾಪೂರ, ಶಿದ್ದಪ್ಪ ಹೊಸಳ್ಳಿ, ಎಸ್.ಎಸ್.ಪಾಟೀಲ್ ಮತ್ತು ಸಾತಪ್ಪ ನೀಲಪ್ಪ ದೇಸಾಯಿ ಅವರು ಚುನಾವಣಾ ಕಣದಲ್ಲಿದ್ದಾರೆ.

ಯಾರಿಗೆ ಗೆಲುವು, ಯಾರಿಗೆ ಸೋಲು: ಶಿಗ್ಗಾಂವಿಯಲ್ಲಿ ಚುನಾವಣಾ ಸನ್ನಿವೇಶ ಸಂಪೂರ್ಣ ಬದಲಾಗಿದೆ. ಆರಂಭದಲ್ಲಿ ಭರತ್ ಪರವಾಗಿ ಏಕಪಕ್ಷೀಯವಾಗಿ ಕಾಣುತ್ತಿದ್ದ ಸ್ಪರ್ಧೆ ಕ್ರಮೇಣ ಟ್ವಿಸ್ಟ್ ಪಡೆಯಿತು. ಈ ಹಿಂದೆ ಕಾಂಗ್ರೆಸ್‌ನ ಮತ್ತೋರ್ವ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್​ ಖಾದ್ರಿ ಅವರಿಗೆ ಟಿಕೆಟ್‌ ನೀಡದಿದ್ದಕ್ಕೆ ಬೇಸರಗೊಂಡಿದ್ದರು. ಆದರೆ ನಂತರ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ನಡೆದಿದ್ದರಿಂದ ಪರಿಸ್ಥಿತಿ ಕಾಂಗ್ರೆಸ್‌ ಪರವಾಗಿ ತಿರುಗಿದೆ ಎಂದು ಹೇಳಲಾಗುತ್ತಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೊಮ್ಮಾಯಿ ಅವರಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 8,500 ಮತಗಳ ಮುನ್ನಡೆ ಸಾಧಿಸಿತ್ತು. ಆದರೆ, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು. ಇದೇ ರೀತಿ ಮುಂದುವರಿದರೆ ಶಿಗ್ಗಾಂವಿಯಲ್ಲಿ ಫೋಟೊ ಫಿನಿಶ್ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರದ ಮತ ಎಣಿಕೆಗೆ ಸಲಕ ಸಿದ್ಧತೆ : ಶನಿವಾರ ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ. 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಇವಿಎಂ ಮತಗಳ ಎಣಿಕೆಗಾಗಿ ಒಟ್ಟು 14 ಟೇಬಲ್ ನಿಗದಿ ಮಾಡಲಾಗಿದೆ. ಒಂದು ಟೇಬಲ್​ನಲ್ಲಿ ಅಂಚೆ ಮತ, ಸೇವಾ ಮತದಾರರ ಅಂಚೆ ಮತ ಎಣಿಕೆ ಮಾಡಲಾಗುತ್ತದೆ. ಪ್ರತಿ ಟೇಬಲ್‌ಗೂ ತಲಾ ಒಬ್ಬರು ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕ ಹಾಗೂ ಎಣಿಕೆ ಮೈಕ್ರೋ ಅಬ್ಸರವರ್ ನೇಮಕ ಮಾಡಲಾಗಿದೆ.

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಾಲ್ವರು ಡಿಎಸ್​​ಪಿ, 9 ಸಿಪಿಐ, 25 ಪಿಎಸ್​​ಐ, 29 ಎಎಸ್​​​ಐ, 250 ಹೆಚ್​​ಸಿ/ಪಿಸಿ ಹಾಗೂ ಎರಡು ಕೆಎಸ್​​ಆರ್​​ಪಿ ತುಕಡಿ, ನಾಲ್ಕು ಡಿಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕೆಗೆ ಆಗಮಿಸುವ ಏಜೆಂಟರುಗಳಿಗಾಗಿ ಗುರುತಿನ ಚೀಟಿ ಕಡ್ಡಾಯ. ಎಣಿಕೆ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

Trending