Connect with us

ಅಪರಾಧ

Ram Mandir ಸೆಕ್ಯೂರಿಟಿ ಗಾರ್ಡ್ ಗಮನಿಸಿದ ಒಂದು ನೋಟಿನ ಕಂತೆ… ಬಯಲಾಯ್ತು 80 ಲಕ್ಷ ರೂ. ಹುಂಡಿ ಹಗರಣ!

Published

on

ಅಯೋಧ್ಯೆ: ಅಯೋಧ್ಯೆಯ Ram Mandir ಸೆಕ್ಯೂರಿಟಿ ಗಾರ್ಡ್ ಒಬ್ಬರು ಶೌಚಾಲಯದಲ್ಲಿ ಕಂಡ ಅನುಮಾನಾಸ್ಪದ ನೋಟಿನ ಕಂತೆ ಇಡೀ ದೇಶವನ್ನೇ ಬೆಚ್ಚಿಬೀಳಿಸುವ ಹುಂಡಿ ಹಣದ ಕಳವು ಪ್ರಕರಣವನ್ನು ಬಯಲಿಗೆಳೆದಿದೆ. ಮೊದಲಿಗೆ ಕೇವಲ ₹40 ಸಾವಿರ ನಗದು ಪತ್ತೆಯಾದ ಘಟನೆ ಎಂದು ಭಾವಿಸಲಾಗಿತ್ತು. ಆದರೆ ಸೆಕ್ಯೂರಿಟಿ ಗಾರ್ಡ್‌ನ ಸಮಯಪ್ರಜ್ಞೆಯಿಂದ ಆರಂಭವಾದ ತನಿಖೆ, ಕೊನೆಗೆ ರಾಮಮಂದಿರದ ಹುಂಡಿಯಿಂದ ಬರೋಬ್ಬರಿ ₹80 ಲಕ್ಷ ಹಣ ಕಳುವಾಗಿದ್ದನ್ನು ಬಹಿರಂಗಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಶೌಚಾಲಯದಲ್ಲಿ ಸಿಕ್ಕ ನೋಟಿನ ಕಂತೆ ಬಿಚ್ಚಿಟ್ಟಿತು ಭಾರಿ ರಹಸ್ಯ

ಕಳೆದ ಮೇ ತಿಂಗಳ ಕೊನೆಯ ವಾರದಲ್ಲಿ ಕರ್ತವ್ಯದಲ್ಲಿದ್ದ ರಾಮಮಂದಿರದ ಸೆಕ್ಯೂರಿಟಿ ಗಾರ್ಡ್, ದೇವಸ್ಥಾನದ ಶೌಚಾಲಯದಲ್ಲಿ ಅನುಮಾನಾಸ್ಪದವಾಗಿ ಅಡಗಿಸಿಟ್ಟಿದ್ದ ₹40 ಸಾವಿರ ನೋಟಿನ ಕಂತೆ ಕಂಡು ತಕ್ಷಣ ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಪ್ರಾಥಮಿಕ ಪರಿಶೀಲನೆ ನಡೆಸಿದಾಗ ಪ್ರಕರಣ ಗಂಭೀರವಾಗಿರುವುದು ಗೊತ್ತಾಗಿ ಕೂಡಲೇ ಪೊಲೀಸರಿಗೆ ದೂರು ನೀಡಿದರು. ಈ ಒಂದು ಸುಳಿವೇ ಭಾರೀ ಹಣದ ಕಳ್ಳತನದ ತನಿಖೆಗೆ ನಾಂದಿ ಹಾಡಿತು.

17 ಗಂಟೆಗಳಲ್ಲಿ 80 ಲಕ್ಷ ರೂ. ವಶ, ಎಂಟು ಮಂದಿ ಬಂಧನ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇಣಿಗೆ ಕೌಂಟರ್ ಸಿಬ್ಬಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವು ಸ್ಥಳಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಲಾಯಿತು. ಕೇವಲ 17 ಗಂಟೆಗಳ ಅವಧಿಯಲ್ಲಿ ಕಳುವಾಗಿದ್ದ ಸುಮಾರು ₹80 ಲಕ್ಷ ನಗದುವನ್ನು ಪೊಲೀಸರು ವಶಪಡಿಸಿಕೊಂಡರು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ ಚಿನ್ನಾಭರಣ ಮತ್ತು ಇನ್ನಷ್ಟು ಹಣವನ್ನು ಜಪ್ತಿ ಮಾಡಲಾಗಿದೆ.

ಎಸ್‌ಐಟಿ ತನಿಖೆ, ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ವರದಿ ಸಾಧ್ಯತೆ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (SIT) ವಹಿಸಲಾಗಿದೆ. ಇದೇ ವೇಳೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ನ್ಯಾಯಾಲಯ ಕೇಳಿರುವ ವಸ್ತುಸ್ಥಿತಿ ವರದಿಯನ್ನು ಎಸ್‌ಐಟಿ ಶೀಘ್ರದಲ್ಲೇ ಸಲ್ಲಿಸುವ ಸಾಧ್ಯತೆ ಇದೆ. ತನಿಖೆ ಇನ್ನೂ ಪೂರ್ಣಗೊಳ್ಳದ ಕಾರಣ ಹೆಚ್ಚಿನ ಸಮಯ ನೀಡುವಂತೆ ಉತ್ತರ ಪ್ರದೇಶ ಸರ್ಕಾರ ಮನವಿ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಭಕ್ತರಲ್ಲಿ ಆತಂಕ, ದೇವಸ್ಥಾನದಲ್ಲಿ ವಿಶೇಷ ಶುದ್ಧೀಕರಣ ಪೂಜೆ

ಪವಿತ್ರ ರಾಮಮಂದಿರದಲ್ಲೇ ಇಂತಹ ದೊಡ್ಡ ಪ್ರಮಾಣದ ದೇಣಿಗೆ ಹಣದ ಕಳವು ಬೆಳಕಿಗೆ ಬಂದಿರುವುದು ಭಕ್ತರಲ್ಲಿ ತೀವ್ರ ಆತಂಕ ಮತ್ತು ಬೇಸರಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಟ್ರಸ್ಟ್ 10 ದಿನಗಳ ವಿಶೇಷ ಧಾರ್ಮಿಕ ವಿಧಿವಿಧಾನಗಳು ಹಾಗೂ ಶುದ್ಧೀಕರಣ ಪೂಜೆಗಳನ್ನು ಆರಂಭಿಸಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ತನಿಖೆ ಮುಂದುವರಿದಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಅಪರಾಧ

ಕಲಬುರಗಿಯಲ್ಲಿ ಲಂಚ ಪಡೆಯುತ್ತಿದ್ದ ಎಪಿಪಿ ಲೋಕಾಯುಕ್ತ ಬಲೆಗೆ; ನಗದು ಜೊತೆಗೆ ಬಟ್ಟೆಗಳಿಗೂ ಬೇಡಿಕೆ!

Published

on

ಕಲಬುರಗಿ: ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖ ಪ್ರಕರಣದಲ್ಲಿ ಕಲಬುರಗಿ (Kalaburagi) ನಗರದ 5ನೇ ಜೆಎಂಎಫ್‌ಸಿ (JMFC) ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ (APP) ಸಂತೋಷ್ ಕುಮಾರ್ ಲೋಖಂಡೆ ಅವರು ಲಂಚ ಪಡೆಯುವ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಿ ಅರ್ಜಿ ಸಲ್ಲಿಸಲು ದೂರುದಾರನಿಂದ ಲಂಚದ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ದೂರುದಾರರಾದ ರಾಹುಲ್ ಹೈದರಾಬಾದ್ ಅವರಿಂದ ₹10,000 ನಗದು ಮಾತ್ರವಲ್ಲದೆ, 9 ಸೀರೆಗಳು, 4 ಶರ್ಟ್‌ಗಳು, 4 ಲಂಡನ್ ಜೀನ್ಸ್ ಪ್ಯಾಂಟ್‌ಗಳು, ಒಂದು ಜೋಡಿ ಶೂ, 4 ಮಹಿಳೆಯರ ಡ್ರೆಸ್‌ಗಳು ಹಾಗೂ 6 ಜೋಡಿ ಮಹಿಳೆಯರ ಚಪ್ಪಲಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ದೂರುದಾರರಿಂದ ಆರೋಪಿತ ಎಪಿಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಸ್ಥಳದಲ್ಲೇ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಅವರ ನೇತೃತ್ವದಲ್ಲಿ ನಡೆದಿದೆ.

ಬಂಧಿತ ಸಂತೋಷ್ ಕುಮಾರ್ ಲೋಖಂಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಲಂಚದ ಬೇಡಿಕೆ ಹಾಗೂ ಪ್ರಕರಣದ ಸಂಪೂರ್ಣ ಹಿನ್ನೆಲೆ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳನ್ನು ಕೂಡ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಸಾರ್ವಜನಿಕ ಸೇವೆಯಲ್ಲಿ ಇರುವ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದರೆ ಲೋಕಾಯುಕ್ತ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದೆ. ಈ ಘಟನೆಯೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ನ್ಯಾಯಾಂಗ ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ಗಮನ ಸೆಳೆದಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ವಿಚಾರಣೆಯ ನಂತರ ಆರೋಪಿಯ ವಿರುದ್ಧ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

Continue Reading

ಅಪರಾಧ

Sakleshpur ದಲ್ಲಿ ಕಾಡಾನೆ ಭೀಮನ ಮೇಲೆ ಕಲ್ಲು ತೂರಾಟ: ಕಾರ್ಮಿಕನ ವಿರುದ್ಧ ಆಕ್ರೋಶ

Published

on

ಹಾಸನ: Sakleshpur ತಾಲೂಕಿನ ಒಸ್ಸೂರು ಎಸ್ಟೇಟ್‌ನಲ್ಲಿ ಜನಪ್ರಿಯ ಕಾಡಾನೆ ಭೀಮ (Elephant Bhima) ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಾಣಿ ಪ್ರಿಯರು ಮತ್ತು ಸ್ಥಳೀಯರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಾಹಿತಿಯ ಪ್ರಕಾರ, ಅಸ್ಸಾಂ ಮೂಲದ ಕಾರ್ಮಿಕರು ವಾಸಿಸುತ್ತಿರುವ ಲೈನ್ ಮನೆಗಳ ಸಮೀಪ ಇಂದು (ಜುಲೈ 14) ಬೆಳಿಗ್ಗೆ ಕಾಡಾನೆ ಭೀಮ ಸಾಗುತ್ತಿತ್ತು. ಈ ವೇಳೆ ಕಾರ್ಮಿಕನೊಬ್ಬ ಕಾಡಾನೆಯತ್ತ ಪದೇಪದೇ ಕಲ್ಲು ತೂರಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಕಲ್ಲು ತಗುಲುತ್ತಿದ್ದಂತೆ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು ಯತ್ನಿಸಿದರೂ, ಬಳಿಕ ಅಲ್ಲಿಂದ ಓಡಿ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೂ ತೊಂದರೆ ನೀಡದೆ ಶಾಂತ ಸ್ವಭಾವದಿಂದ ಗ್ರಾಮಗಳು ಹಾಗೂ ರಸ್ತೆಗಳ ಮೂಲಕ ಸಂಚರಿಸುವ ಭೀಮನಿಗೆ ಈ ರೀತಿ ಹಿಂಸೆ ನೀಡಿರುವುದು ಖಂಡನೀಯ ಎಂದು ಪ್ರಾಣಿ ಪ್ರಿಯರು ಅಭಿಪ್ರಾಯಪಟ್ಟಿದ್ದಾರೆ.

ಮಲೆನಾಡು ಭಾಗದ ಜನರ ಪ್ರೀತಿಗೆ ಪಾತ್ರವಾಗಿರುವ ಭೀಮ, ಹಲವು ವರ್ಷಗಳಿಂದ ಸಕಲೇಶಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಕ್ತವಾಗಿ ಓಡಾಡುತ್ತಿದ್ದು, ವಾಹನ ದಟ್ಟಣೆ ಇರುವ ರಸ್ತೆಗಳಲ್ಲೂ ಯಾರಿಗೂ ಹಾನಿ ಮಾಡದೆ ಸಂಚರಿಸುವ ಕಾಡಾನೆ ಎಂದು ಸ್ಥಳೀಯರು ಹೇಳುತ್ತಾರೆ.

ವೈರಲ್ ಆಗಿರುವ ವಿಡಿಯೋ ಆಧರಿಸಿ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ವನ್ಯಜೀವಿಗೆ ಕಿರುಕುಳ ನೀಡಿದ ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ. ಈ ಘಟನೆ ಮತ್ತೊಮ್ಮೆ ವನ್ಯಜೀವಿಗಳ ಸಂರಕ್ಷಣೆ ಮತ್ತು ಮಾನವ-ಪ್ರಾಣಿ ಸಹಬಾಳ್ವೆಯ ಕುರಿತು ಚರ್ಚೆಗೆ ಕಾರಣವಾಗಿದೆ.

Continue Reading

ಅಪರಾಧ

Bidadi Township ವಿವಾದ ತೀವ್ರ: 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್

Published

on

ರಾಮನಗರ: Bidadi Township ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ನಡುವೆ, ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ನಡುವೆ, ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ನಡುವೆ, ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ.

Continue Reading

Trending