Connect with us

ದೇಶ

Horoscope Today 05 September 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ….

Published

on

ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುವ ನೆಂಟರಂತೆ.

ಮೇಷ ರಾಶಿ

ನಿಮ್ಮ ಸ್ವಾರ್ಥರಹಿತವಾದ ಆಲೋಚನೆಗೆ ಕುಟುಂಬದವರು ಬಹಳ ಸಂತೋಷ ಪಡುತ್ತಾರೆ. ಇತರರ ಬಗ್ಗೆ ಕರುಣೆ ಹೆಚ್ಚಾಗಿರುತ್ತದೆ. ಪ್ರೀತಿಪಾತ್ರರ ಭೇಟಿ ಹಾಗೂ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಕೌಟುಂಬಿಕ ಸಮಸ್ಯೆಗಳಿದ್ದಲ್ಲಿ ಸರಳವಾದ ಪರಿಹಾರ ಕಂಡುಕೊಳ್ಳುವಿರಿ.

ವೃಷಭ

ನಿಮ್ಮ ಬಗ್ಗೆ ಇತರರು ಏನೆಂದುಕೊಳ್ಳುತ್ತಾರೆ ಎಂದು ಬಹಳ ಆತಂಕಕ್ಕೆ ಒಳಗಾಗುತ್ತೀರಿ. ಸಾರ್ವಜನಿಕ ಜೀವನದ ವರ್ತನೆ ಬಗ್ಗೆ ಬಹಳ ಎಚ್ಚರಿಕೆಯಿಂದ ನಡೆದುಕೊಳ್ಳುತ್ತೀರಿ. ಹಣ ಹೂಡಿಕೆ ವಿಚಾರದಲ್ಲಿ ಯಾರ ಪರವಾಗಿಯೂ ವಕಾಲತ್ತು ವಹಿಸಬೇಡಿ. ಸಲಹೆ- ಸೂಚನೆಯಂತೂ ಬೇಡವೇ ಬೇಡ.

ಮಿಥುನ

ಜಮೀನು ವ್ಯಾಜ್ಯಗಳು ಇದ್ದಲ್ಲಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ತಂದೆಯ ಕಡೆ ಸಂಬಂಧಿಗಳಿಂದ ನೆರವು ಸಿಗಲಿದೆ. ನೀವು ನೀಡಿದ್ದ ಮಾತಿಗೆ ಬದ್ಧವಾಗಿರಬೇಕು ಎಂಬುದನ್ನು ನೆನಪಿಟ್ಟುಕೊಳ್ಳಿ. ಕಾಲು, ಭುಜದ ನೋವು ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮನ್ನು ಕಾಡಬಹುದು.

ಕರ್ಕಾಟಕ

ಮನೆ ಬದಲಿಸಬೇಕು ಅಂದುಕೊಳ್ಳುತ್ತಿರುವವರಿಗೆ ಒಂದು ಬಗೆಯ ಅನಿಶ್ಚಿತತೆ ಕಾಡಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಆಲೋಚನೆ ಮಾಡಿಯೇ ಈ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ಈ ಗೊಂದಲ ಸೃಷ್ಟಿಯಾಗುತ್ತದೆ. ಈ ದಿನ ನಿಮಗೆ ವಿಶ್ರಾಂತಿಯ ಅಗತ್ಯ ಹೆಚ್ಚಿದೆ. ಆತುರದ ತೀರ್ಮಾನ ಬೇಡ.

ಸಿಂಹ

ಯಾರಿಗೋ ಬಂದ ಅವಕಾಶವೊಂದು ನಿಮ್ಮ ಪಾಲಿಗೆ ಬರಬಹುದು. ನಿಮ್ಮ ಅನುಮಾನ- ಗುಮಾನಿಯನ್ನು ಬಿಟ್ಟು ಇದನ್ನು ನೋಡಬೇಕು. ರಕ್ತಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಳ್ಳಬಹುದು. ಇದು ಇನ್ನೂ ಕೆಲ ಸಮಯ ಮುಂದುವರಿಯಬಹುದು. ಹಿತಶತ್ರುಗಳ ಕಾಟ ಇರುತ್ತದೆ.

ಕನ್ಯಾ

ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿಯನ್ನು ಕೇಳುವ ಯೋಗ ಇದೆ. ಮಕ್ಕಳಿಗೆ ವಿವಾಹಕ್ಕೆ ಸೂಕ್ತ ಸಂಬಂಧ ದೊರೆಯುವ ಅವಕಾಶ ಇದೆ. ನಿಮ್ಮ ಸಮತೋಲಿತ ಮಾತುಗಳಿಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಪ್ರೀತಿಪಾತ್ರರಿಗೆ ಬೆಲೆ ಬಾಳುವ ವಸ್ತುವನ್ನು ನೀಡುವ ಬಗ್ಗೆ ಆಲೋಚನೆ ಮಾಡುತ್ತೀರಿ.

ತುಲಾ

ನಿಮ್ಮಿಂದ ನೆರವು ಪಡೆದವರು ಈ ದಿನ ನಿಮಗೇ ಕೈ ಕೊಡಬಹುದು. ಅವಲಂಬನೆ, ನಿರೀಕ್ಷೆ ಒಳ್ಳೆಯದಲ್ಲ. ಹಳೆ ದ್ವೇಷ ಸಾಧನೆ ಮಾಡಲು ಹೋಗಿ ನಿಮ್ಮ ವರ್ಚಸ್ಸಿಗೆ ಹಾನಿ ಮಾಡಿಕೊಳ್ಳುವಿರಿ. ಸನ್ನಿವೇಶವನ್ನು ತಾಳ್ಮೆಯಿಂದ ಅವಲೋಕಿಸಿದ ನಂತರವೇ ಯಾವುದೇ ನಿರ್ಣಯವನ್ನು ಕೈಗೊಳ್ಳಿ.

ವೃಶ್ಚಿಕ

ಖರ್ಚು ವಿಪರೀತ ಹೆಚ್ಚಾಗಲಿದೆ. ಊಟ- ತಿಂಡಿ, ಮನರಂಜನೆ, ಕುಟುಂಬದವರ ಸಂತೋಷಕ್ಕಾಗಿ ಖರ್ಚಾಗಲಿದೆ. ನಿಮ್ಮ ಪಾಲಿನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಿದ್ದೀರಿ. ಭವಿಷ್ಯದಲ್ಲಿ ಹೀಗೇ ಆಗಬಹುದು ಎಂದು ನೀವು ಊಹಿಸಿದ್ದ ಸಂಗತಿಗಳು ನಿಜವಾಗುತ್ತಾ ಬರುತ್ತವೆ.

ಧನು

ವ್ಯಾಮೋಹದ ಕಾರಣಕ್ಕೆ ಅವಮಾನಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಪ್ರೀತಿ- ಪ್ರೇಮ ಪ್ರಕರಣಗಳಿಂದ ಈಗಾಗಲೇ ಹೊರಬಂದಿದ್ದರೆ ಅಥವಾ ಅದೇ ನೆನಪಿನಲ್ಲಿ ಇರುವವರಿಗೆ ಮಾನಸಿಕವಾಗಿ ಒತ್ತಡದ ದಿನ. ಹೇಳಿಕೊಳ್ಳಲಾಗದ ಮಾನಸಿಕ ನೋವು ನಿಮ್ಮನ್ನು ಬೆಂಬಿಡದೆ ಕಾಡಲಿದೆ.

ಮಕರ

ಮಿತ್ರರು- ಸಂಬಂಧಿಗಳ ಮಾತನ್ನು ಕೇಳಿಸಿಕೊಳ್ಳಿ. ಅಗತ್ಯ ಕಂಡುಬಂದಲ್ಲಿ ಅವರ ಸಲಹೆಯನ್ನು ಪಾಲಿಸಿ. ನಿಮ್ಮ ಅನುಭವ ಹಾಗೂ ಬುದ್ಧಿವಂತಿಕೆ ಮೇಲೆ ಅವಲಂಬನೆ ಸರಿ. ಆದರೆ ಎಲ್ಲರಿಗೆ ಎಲ್ಲವೂ ಗೊತ್ತಿರುವುದಿಲ್ಲ. ಆ ಕಾರಣದಿಂದ ಇತರರ ಸಲಹೆಯನ್ನೂ ಗಂಭೀರವಾಗಿ ಪರಿಗಣಿಸಿ.

ಮೀನ

ನಿಮ್ಮ ಬೆಳವಣಿಗೆ ಕಂಡು ಇತರರು ಹೊಟ್ಟೆ ಕಿಚ್ಚು ಪಡುತ್ತಾರೆ. ಸ್ವಂತ ವಿಷಯಗಳನ್ನು, ಗುಟ್ಟಿನ ಸಂಗತಿಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ. ಔಷಧ- ಮಾತ್ರೆ ಸೇವನೆ ಮಾಡುವಾಗ ಸರಿಯಾಗಿ ಪರೀಕ್ಷೆ ಮಾಡಿ. ಔಷಧ- ವೈದ್ಯರನ್ನು ಬದಲಿಸುವ ನಿರ್ಧಾರ ಮಾಡಿದ್ದರೆ ಈ ದಿನ ಬೇಡ.

ದೇಶ

ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ

Published

on

ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಭಾವುಕ ವಿದಾಯ ನೀಡಲಾಯಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದಿಂದ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು 1997ರಲ್ಲೇ ನಿಧನರಾಗಿದ್ದರು. ಅವರ ಏಕೈಕ ಪುತ್ರ ಮುರಳಿ ಕೃಷ್ಣ ಕೂಡ 2026ರ ಜನವರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕುಟುಂಬದಲ್ಲಿ ಪುರುಷ ವಾರಸುದಾರರಿಲ್ಲದ ಕಾರಣ, ಜಾನಕಿ ಅವರ ಮೊಮ್ಮಗಳು ಅಪ್ಸರಾ ಕುಟುಂಬದ ಪರವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಅಜ್ಜಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಭಾವುಕ ಕ್ಷಣ ಕಂಡು ಸ್ಥಳದಲ್ಲಿದ್ದ ಅಭಿಮಾನಿಗಳು ಕಣ್ಣೀರಿಟ್ಟರು.

1956ರಲ್ಲಿ ರಾಮಪ್ರಸಾದ್ ಅವರನ್ನು ವಿವಾಹವಾಗಿದ್ದ ಎಸ್. ಜಾನಕಿ, ತಮ್ಮ ಪತಿಯನ್ನು ಪ್ರೀತಿಯಿಂದ ‘ರಾಮು’ ಎಂದು ಕರೆಯುತ್ತಿದ್ದರು. ಜಾನಕಿ ಅವರ ಸಂಗೀತ ಪಯಣದಲ್ಲಿ ರಾಮಪ್ರಸಾದ್ ಸದಾ ಬೆಂಬಲವಾಗಿ ನಿಂತಿದ್ದು, ಅವರ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದರು ಎಂದು ಕುಟುಂಬದವರು ನೆನಪಿಸಿಕೊಂಡರು.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಸಾವಿರಾರು ಅಮರ ಗೀತೆಗಳಿಗೆ ಧ್ವನಿಯಾಗಿದ್ದ ಎಸ್. ಜಾನಕಿ, 2017ರ ಅಕ್ಟೋಬರ್ 28ರಂದು ಮೈಸೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಾಯನಕ್ಕೆ ವಿದಾಯ ಹೇಳಿದ್ದರು. ಮಲಯಾಳಂ ಚಿತ್ರದ ‘ಅಮ್ಮ ಪೂವಿನುಂ’ ಜೋಗುಳ ಗೀತೆ ಅವರ ಗಾಯನ ಬದುಕಿನ ಕೊನೆಯ ದಾಖಲಾದ ಹಾಡಾಗಿ ಉಳಿದಿದೆ.

ಗಾನಕೋಗಿಲೆ ಎಸ್. ಜಾನಕಿ ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಮಧುರ ಕಂಠ, ಅಮರ ಗೀತೆಗಳು ಮತ್ತು ಅಪಾರ ಸಂಗೀತ ಸೇವೆ ಭಾರತೀಯ ಸಂಗೀತ ಲೋಕದಲ್ಲಿ ಸದಾಕಾಲ ಜೀವಂತವಾಗಿರಲಿವೆ.

Continue Reading

ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ

Published

on

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಹಾಗೂ ಪ್ರತ್ಯೇಕತಾವಾದಿಗಳನ್ನು ವೈಭವೀಕರಿಸುವ ವಿಷಯಗಳನ್ನು ಒಳಗೊಂಡಿದೆ ಎನ್ನಲಾದ ‘Legends and Personalities of Jammu and Kashmir’ ಪುಸ್ತಕದ ಪ್ರಕಟಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ ವಿಂಗ್ (CIK) ಮೂವರು ಪ್ರಕಾಶಕರನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಪುಸ್ತಕದಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕೆಲವು ಉಗ್ರರು ಮತ್ತು ಪ್ರತ್ಯೇಕತಾವಾದಿ ನಾಯಕರನ್ನು ಜಮ್ಮು-ಕಾಶ್ಮೀರದ ಪ್ರಮುಖ ವ್ಯಕ್ತಿಗಳಂತೆ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಪ್ರಕಾಶಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬಂಧಿತರಲ್ಲಿ ಇಬ್ಬರು ದೆಹಲಿ ಮೂಲದವರಾಗಿದ್ದು, ಮತ್ತೊಬ್ಬರು ಜಮ್ಮುವಿನ ನಿವಾಸಿಯಾಗಿದ್ದಾರೆ. ಈ ಹಿಂದೆ ದೆಹಲಿ ಮತ್ತು ಜಮ್ಮುವಿನ ವಿವಿಧ ಪ್ರಕಾಶನ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ತನಿಖೆ ವೇಳೆ ಡಿಜಿಟಲ್ ಸಾಕ್ಷ್ಯಗಳನ್ನು ಅಳಿಸಲು ಯತ್ನಿಸಿದ ಆರೋಪವೂ ಕೇಳಿಬಂದಿದ್ದು, ತನಿಖಾ ತಂಡ ಡೇಟಾವನ್ನು ಮರುಪಡೆದಿದೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆಯ ಭಾಗವಾಗಿ ಪುಸ್ತಕದ ಲೇಖಕರೊಬ್ಬರನ್ನು ರಾಜಸ್ಥಾನದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತೊಬ್ಬ ಲೇಖಕರಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಪುಸ್ತಕದ ಪ್ರಕಟಣೆಗೆ ಸಂಬಂಧಿಸಿದ ಅನುಮೋದನೆ ಪ್ರಕ್ರಿಯೆಯಲ್ಲಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪಾತ್ರದ ಕುರಿತೂ ತನಿಖೆ ನಡೆಯುತ್ತಿದೆ. ಈಗಾಗಲೇ ಒಬ್ಬ ಪ್ರಾಂಶುಪಾಲರು ಸೇರಿದಂತೆ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪುಸ್ತಕದ ಪ್ರಕಟಣೆ, ಮುದ್ರಣ ಹಾಗೂ ಪ್ರಚಾರಕ್ಕೆ ಸಂಬಂಧಿಸಿದವರ ವಿರುದ್ಧ ಯುಎಪಿಎ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಬೆಂಗಳೂರು

Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ

Published

on

ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.

ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.

Continue Reading

Trending