Connect with us

ದೇಶ

Horoscope Today 06 September 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ….

Published

on

ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುವ ನೆಂಟರಂತೆ.

ಆದರೆ, ನಾವು ಮಾಡುವ ಪಾಪ- ಕರ್ಮಗಳು. ತಂದೆ- ತಂದೆ ಮೂಲಕ ನಮಗೆ ಬರುವ ರಕ್ತದ ಗುಣದಂತೆ. ಒಳ್ಳೆ ಕರ್ಮಕ್ಕೆ ಉತ್ತಮ ಫಲ- ಆರೋಗ್ಯ. ಕೆಟ್ಟ ಕರ್ಮಕ್ಕೆ- ಕೆಟ್ಟ ಫಲ, ಸಮಸ್ಯೆ. ಆದರೆ ಅದನ್ನು ಕೂಡ ನಾವು ಹೇಗೆ ವೈದ್ಯರಲ್ಲಿಗೆ ಹೋಗಿ, ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುತ್ತೀವೋ ಹಾಗೇ ಜೋಪಾನ ಮಾಡಬಹುದು.

ಮೇಷ

ವೈಯಕ್ತಿಕ ವಿಚಾರಗಳ ಬಗ್ಗೆ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಭಾವನೆ ನಿಮ್ಮನ್ನು ಬಹಳ ಕಾಡಲಿದೆ. ಸ್ವಂತ ನಿರ್ಧಾರವನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಸೃಷ್ಟಿಯಾಗಲಿದೆ. ಆರ್ಥಿಕ ಒತ್ತಡದ ಕಾರಣಕ್ಕೆ ಇತರರ ಬಳಿ ಸಾಲ ಮಾಡಬೇಕಾದ ಸೃಷ್ಟಿ ನಿರ್ಮಾಣವಾಗಲಿದೆ.

ವೃಷಭ

ಎಣ್ಣೆಯಲ್ಲಿ ಕರಿದ ಅಥವಾ ಮಸಾಲೆ ಪದಾರ್ಥಗಳ ಸೇವನೆಯಿಂದ ಸಾಧ್ಯವಾದಷ್ಟೂ ದೂರ ಇರಿ. ಇತರರಿಗೆ ಮಾದರಿ ಎನಿಸುವಂತೆ ಇರುವುದಕ್ಕೆ ಪ್ರಯತ್ನಿಸಿ. ಕಾನೂನು ಮುರಿಯಲು ಹೋಗಬೇಡಿ. ತುರ್ತು ಕೆಲಸಗಳು ಬರಬಹುದು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಟ್ಟುಕೊಂಡಿರಿ.

ಮಿಥುನ

ಇಡೀ ದಿನ ಬಿಡುವಿಲ್ಲದಂಥ ಕೆಲಸ ಇರಲಿದೆ. ಈ ಹಿಂದೆ ನೀವು ಮಾಡಿದ್ದ ಕೆಲವು ಕೆಲಸಗಳನ್ನು ಮೆಚ್ಚಿ, ಹೊಸ ಜವಾಬ್ದಾರಿಗಳನ್ನು ವಹಿಸಲಾಗುತ್ತದೆ. ಪ್ರಾಣಿ- ಪಕ್ಷಿಗಳ ಸಲುವಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿಯ ಕಡೆ ಸಂಬಂಧಿಕರಿಗೆ ನಿಮ್ಮ ನೆರವು ಬೇಕಾಗಬಹುದು.

ಕರ್ಕಾಟಕ

ಸಣ್ಣ ಸಮಸ್ಯೆಗಳನ್ನು ನೀವೇ ಮನಸಿಗೆ ತೆಗೆದುಕೊಂಡು, ದೊಡ್ಡದು ಮಾಡಲು ಹೋಗದಿರಿ. ಸಂಗಾತಿಯ ಬಗ್ಗೆ ಅಸಮಾಧಾನಗಳು ಇದ್ದಲ್ಲಿ ಕೂತು, ಮಾತನಾಡಿ ಬಗೆಹರಿಸಿಕೊಳ್ಳಿ. ಎಲ್ಲರನ್ನೂ ಅನುಮಾನದಿಂದ ನೋಡಿದರೆ ನಿಮ್ಮ ಸಹಾಯಕ್ಕೆ ಯಾರೂ ಇಲ್ಲದಂತೆ ಆಗುತ್ತದೆ. ತಾಳ್ಮೆಯಿಂದ ಇರುವುದನ್ನು ರೂಢಿ ಮಾಡಿಕೊಳ್ಳಿ.

ಸಿಂಹ

ಅಂದುಕೊಂಡಿದ್ದಕ್ಕಿಂತ ವೇಗವಾಗಿ ಕೆಲಸ- ಕಾರ್ಯಗಳು ಮುಗಿಯುತ್ತವೆ. ಸೇವಾ ಮನೋಭಾವ ಹೆಚ್ಚಾಗುತ್ತದೆ. ಇಷ್ಟು ಸಮಯ ನಿಮ್ಮನ್ನು ಕಾಡುತ್ತಿದ್ದ ಆತಂಕ ನಿವಾರಣೆ ಆಗುವ ದಾರಿ ಗೋಚರಿಸಲಿದೆ. ಯಾರನ್ನೋ ನಂಬಿ, ಹೂಡಿಕೆ ಮಾಡುವುದು ನಷ್ಟಕ್ಕೆ ಕಾರಣ ಆಗಬಹುದು. ಆ ಬಗ್ಗೆ ಎ‌ಚ್ಚರ ಇರಲಿ.

ಕನ್ಯಾ

ದೇವತಾರಾಧನೆ, ಅಧ್ಯಾತ್ಮ ಚಿಂತನೆಗೆ ಹೆಚ್ಚು ಸಮಯ ಮೀಸಲಿಡಲಿದ್ದೀರಿ. ಊಟ- ತಿಂಡಿ ರುಚಿಕಟ್ಟಾಗಿ ಇರಲಿದೆ. ಒಪ್ಪಿಕೊಂಡ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸುವುದು ಕಷ್ಟವಾಗುತ್ತದೆ. ಯಾರ ನೆರವನ್ನು ಬಯಸಿದ್ದರೋ ಅವರಿಗೇ ಸಮಸ್ಯೆ ಎದುರಾಗಲಿದೆ. ಅತಿಯಾದ ನಿರೀಕ್ಷೆ ಬೇಡ.

ತುಲಾ

ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ನಿಮ್ಮ ನಿರ್ಧಾರಗಳು ಕೆಲಸ ಮಾಡುತ್ತವೆ. ಸಹೋದ್ಯೋಗಿಗಳು ನಿಮ್ಮನ್ನು ಮೆಚ್ಚುಗೆಯಿಂದ ನೋಡುತ್ತಾರೆ. ತಂದೆ- ತಾಯಿ ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವ ದಿನ ಇದು. ಸಂಗಾತಿ- ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.

ವೃಶ್ಚಿಕ

ಈ ದಿನ ಹೊತ್ತು ಕಳೆಯುವುದೇ ಕಷ್ಟ ಎಂಬಷ್ಟು ಬೇಸರ ಉಂಟಾಗುತ್ತದೆ. ಏಕಾಗ್ರತೆಯಿಂದ ಕೆಲಸ ಮಾಡುವುದು ಅಸಾಧ್ಯ ಎಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಯಾರದೋ ಅಪ್ಪಣೆಗಾಗಿ ಕಾದು ಕೂರುವಂಥ ಸ್ಥಿತಿ ನಿರ್ಮಾಣವಾಗುತ್ತದೆ. ಆಪ್ತರಿಗೆ ನಿಮ್ಮ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮೂಡುವಂತೆ ಆಗುತ್ತದೆ.

ಧನು

ಹಳೆಯ ಗೆಳೆಯ- ಗೆಳತಿಯರು, ಸಂಬಂಧಿಗಳು ನಿಮ್ಮ ಜತೆಗೆ ಮಾತು ಕತೆ ನಡೆಸಲಿದ್ದೀರಿ. ಹಳೆಯ ನೆನಪುಗಳು ನಿಮ್ಮನ್ನು ಕಾಡಲಿದೆ. ಮಕ್ಕಳ ಸಲುವಾಗಿಯೇ ಹೆಚ್ಚಿನ ಸಮಯ ಹೋಗುತ್ತದೆ. ಮನರಂಜನೆಗಾಗಿ ಹಣ ಖರ್ಚು ಮಾಡಲಿದ್ದೀರಿ. ತಾಯಿ ಮನೆ ಕಡೆಯವರ ಪ್ರೀತಿ ದೊರೆಯಲಿದೆ.

ಮಕರ

ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಬೆಳವಣಿಗೆಗಳು ನಡೆಯಲಿವೆ. ವಹಿಸಿದ ಕೆಲಸವನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡುವುದು ಅಸಾಧ್ಯ ಎಂಬಂತಾಗುತ್ತದೆ. ವಿವಿಧ ಬಗೆಯ ಸ್ನೇಹಿತರಿಂದ ಬರುವ ಸಲಹೆ- ಸೂಚನೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಿ. ಯಾರ ಮೇಲೂ ಸಿಟ್ಟಾಗಬೇಡಿ.

ಕುಂಭ

ವಿಚಿತ್ರವಾದ ಕೋರಿಕೆಗಳು ನಿಮ್ಮನ್ನು ಬೆನ್ನಟ್ಟಲಿವೆ. ಎಲ್ಲವನ್ನೂ ಈಡೇರಿಸಿಕೊಳ್ಳಬೇಕು ಅಂತ ಹೊರಡಬೇಡಿ. ಖರ್ಚಿನ ಮೇಲೆ ಗಮನ ಇರಲಿ. ಇತರರಿಗೆ ನೆರವಾಗಬೇಕು ಎಂಬ ಆಲೋಚನೆಯೇನೋ ಸರಿ. ಆದರೆ ನಿಮಗೂ ಇಲ್ಲದಂತೆ ಮಾಡಿಕೊಂಡು, ಸಹಾಯ ಮಾಡುವುದು ಒಳ್ಳೆ ವಿಚಾರ ಅಲ್ಲ.

ಮೀನ

ಹೊಸ ವ್ಯಾಪಾರದ ಆಲೋಚನೆಗಳು ಬರುವ ದಿನ ಇದು. ಮುಮ್ದೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸರಿಯಾದ ಯೋಜನೆಯನ್ನು ಮಾಡಿಟ್ಟುಕೊಳ್ಳಿ. ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಇತರರ ನೆರವು ಬೇಕಾಗಲಿದೆ. ನಿಮ್ಮ ಯೋಜನೆಗಳಿಗೆ ತಂದೆ- ತಾಯಿ ಅಥವಾ ಸಂಗಾತಿಯ ಸಹಾಯ ದೊರೆಯಬಹುದು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ದೇಶ

Indian Army ಗೆ ಅಮೆರಿಕದ ಜಾವೆಲಿನ್ ಕ್ಷಿಪಣಿ! ಚೀನಾ-ಪಾಕ್‌ ಗಡಿಗೆ ಮತ್ತಷ್ಟು ಬಲ; ದೊಡ್ಡ ಘೋಷಣೆ

Published

on

ನವದೆಹಲಿ: Indian Army ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯುದ್ಧಭೂಮಿಯಲ್ಲಿ ಪರಿಣಾಮಕಾರಿ ಎಂದು ಸಾಬೀತಾಗಿರುವ ಜಾವೆಲಿನ್ ಆಂಟಿ-ಟ್ಯಾಂಕ್ ಕ್ಷಿಪಣಿ ವ್ಯವಸ್ಥೆಯನ್ನು ಅಮೆರಿಕದಿಂದ ಖರೀದಿಸಲು ಭಾರತ ಯೋಜಿಸುತ್ತಿದೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ತಿಳಿಸಿದ್ದಾರೆ.

ಒಬ್ಬ ಸೈನಿಕನೇ ಹೊತ್ತೊಯ್ಯಬಹುದಾದ ಮಧ್ಯಮ ಶ್ರೇಣಿಯ ಜಾವೆಲಿನ್ ಕ್ಷಿಪಣಿ ವ್ಯವಸ್ಥೆಯು ‘ಫೈರ್ ಆ್ಯಂಡ್ ಫರ್ಗೆಟ್’ ತಂತ್ರಜ್ಞಾನವನ್ನು ಹೊಂದಿದೆ. ಅಂದರೆ ಕ್ಷಿಪಣಿಯನ್ನು ಗುರಿಯತ್ತ ಉಡಾಯಿಸಿದ ಬಳಿಕ ಅದನ್ನು ನಿರಂತರವಾಗಿ ನಿಯಂತ್ರಿಸುವ ಅಗತ್ಯವಿಲ್ಲ. ಈ ಸಾಮರ್ಥ್ಯವು ಆಧುನಿಕ ಯುದ್ಧಭೂಮಿಯಲ್ಲಿ ಮಹತ್ವದ್ದಾಗಿದೆ.

ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ FGM-148 Javelin ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕದ ವಿದೇಶಾಂಗ ಇಲಾಖೆ ಕಳೆದ ವರ್ಷದ ನವೆಂಬರ್‌ನಲ್ಲಿ ಅನುಮೋದನೆ ನೀಡಿತ್ತು.

ಜಾವೆಲಿನ್ ಖರೀದಿ ಕುರಿತು ಅಮೆರಿಕದಿಂದ ಮಾಹಿತಿ

ಈ ಕುರಿತು ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುದ್ಧ-ಪರೀಕ್ಷಿತ ಜಾವೆಲಿನ್ ಆಂಟಿ-ಟ್ಯಾಂಕ್ ವ್ಯವಸ್ಥೆಯನ್ನು ಖರೀದಿಸಲು ಭಾರತ ಯೋಜಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮೇ 2026ರಲ್ಲಿ ನಡೆದ ಶಾಂಗ್ರಿ-ಲಾ ಸಂವಾದದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಪ್ರಸ್ತಾಪಿಸಿದ ರಕ್ಷಣಾ ಸಹಕಾರದ ಮುಂದುವರಿದ ಭಾಗವಾಗಿ ಈ ಬೆಳವಣಿಗೆ ನಡೆದಿದೆ ಎಂದು ಗೋರ್ ಹೇಳಿದ್ದಾರೆ.

ಜಾವೆಲಿನ್ ವ್ಯವಸ್ಥೆಯ ಖರೀದಿಯು ಅಮೆರಿಕ-ಭಾರತ ರಕ್ಷಣಾ ಸಂಬಂಧದಲ್ಲಿ ಮಹತ್ವದ ಹೆಜ್ಜೆಯಾಗಲಿದೆ. ಅಲ್ಲದೆ, ಭವಿಷ್ಯದಲ್ಲಿ ಈ ಶಸ್ತ್ರಾಸ್ತ್ರ ವ್ಯವಸ್ಥೆಯ ಜಂಟಿ ಉತ್ಪಾದನೆಗೆ ಅವಕಾಶಗಳನ್ನು ತೆರೆಯಬಹುದು ಎಂದು ಅವರು ತಿಳಿಸಿದ್ದಾರೆ.

ಎಷ್ಟು ಜಾವೆಲಿನ್ ಕ್ಷಿಪಣಿ ಖರೀದಿ?

ಸದ್ಯ ಭಾರತವು ಎಷ್ಟು ಸಂಖ್ಯೆಯ ಜಾವೆಲಿನ್ ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲಿದೆ ಎಂಬ ನಿಖರ ಮಾಹಿತಿ ಬಹಿರಂಗವಾಗಿಲ್ಲ. ಇದೇ ರೀತಿ ಒಪ್ಪಂದದ ಒಟ್ಟು ಮೌಲ್ಯ ಎಷ್ಟು ಎಂಬುದೂ ಇನ್ನೂ ಸ್ಪಷ್ಟವಾಗಿಲ್ಲ.

ಜಾವೆಲಿನ್ ಕ್ಷಿಪಣಿ ವ್ಯವಸ್ಥೆಯನ್ನು ಮುಖ್ಯವಾಗಿ ಶತ್ರುಗಳ ಟ್ಯಾಂಕ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ. ಅದರ ಸಾಗಾಟದ ಸುಲಭತೆ ಹಾಗೂ ‘ಫೈರ್ ಆ್ಯಂಡ್ ಫರ್ಗೆಟ್’ ಸಾಮರ್ಥ್ಯದಿಂದಾಗಿ ಸೈನಿಕರಿಗೆ ಯುದ್ಧಭೂಮಿಯಲ್ಲಿ ಹೆಚ್ಚಿನ ಚಲನೆಯ ಸ್ವಾತಂತ್ರ್ಯ ದೊರೆಯುತ್ತದೆ.

ಭಾರತ ಈಗಾಗಲೇ ತನ್ನ ಸಶಸ್ತ್ರ ಪಡೆಗಳ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿವಿಧ ದೇಶಗಳಿಂದ ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನಗಳನ್ನು ಪಡೆಯುವುದರ ಜೊತೆಗೆ ದೇಶೀಯವಾಗಿ ಶಸ್ತ್ರಾಸ್ತ್ರಗಳ ಉತ್ಪಾದನೆಗೂ ಆದ್ಯತೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಾವೆಲಿನ್ ವ್ಯವಸ್ಥೆಯ ಖರೀದಿ ಹಾಗೂ ಭವಿಷ್ಯದಲ್ಲಿ ಜಂಟಿ ಉತ್ಪಾದನೆಯ ಸಾಧ್ಯತೆಗಳು ಭಾರತ-ಅಮೆರಿಕ ರಕ್ಷಣಾ ಸಹಕಾರಕ್ಕೆ ಮತ್ತಷ್ಟು ವೇಗ ನೀಡುವ ನಿರೀಕ್ಷೆಯಿದೆ.

Continue Reading

ರಾಜ್ಯ

Mysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?

Published

on

ಮೈಸೂರು: ವಿಶ್ವವಿಖ್ಯಾತ Mysuru Dasara 2026 ಹಿನ್ನೆಲೆಯಲ್ಲಿ ದಸರಾ ಗಜಪಡೆಗಳಿಗೆ ಮೈಸೂರು ಅರಣ್ಯ ಭವನದಲ್ಲಿ ಇಂದು ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಒಟ್ಟು 9 ದಸರಾ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಪ್ರಯಾಣ ಬೆಳೆಸಿದವು.

ಅರಮನೆ ದ್ವಾರಕ್ಕೆ ಆಗಮಿಸಿದ ದಸರಾ ಗಜಪಡೆಗಳನ್ನು ಮೈಸೂರು ಜಿಲ್ಲಾಡಳಿತ ವತಿಯಿಂದ ಸಂಪ್ರದಾಯಬದ್ಧವಾಗಿ ಸ್ವಾಗತಿಸಲಾಯಿತು. ಶುಭ ಲಗ್ನದಲ್ಲಿ ಆನೆಗಳು ಅರಮನೆ ಪ್ರವೇಶಿಸಬೇಕಿದ್ದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಸಾಂಪ್ರದಾಯಿಕ ಪೂಜೆ ಹಾಗೂ ಸ್ವಾಗತದ ಬಳಿಕ ದಸರಾ ಆನೆಗಳು ಅರಮನೆ ಆವರಣ ಪ್ರವೇಶಿಸಿದವು.

ಅರಮನೆ ಪ್ರವೇಶದ ವೇಳೆ ಶ್ರೀರಾಮ ಆನೆಗೆ ಗಾಬರಿ

ಇದೇ ವೇಳೆ ಮೈಸೂರು ಅಂಬಾವಿಲಾಸ ಅರಮನೆ ಪ್ರವೇಶಿಸುವ ಸಂದರ್ಭದಲ್ಲಿ ಶ್ರೀರಾಮ ಆನೆ ಏಕಾಏಕಿ ಗಾಬರಿಗೊಂಡ ಘಟನೆ ನಡೆದಿದೆ. ಅರಮನೆ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ಕಂಡು ಆನೆ ಕೆಲಕಾಲ ಬೆಚ್ಚಿಬಿದ್ದು ಹಿಂದಕ್ಕೆ ಸರಿಯಲು ಯತ್ನಿಸಿತು.

ಅರಮನೆ ದ್ವಾರದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು, ಜನರ ಚಲನವಲನ ಹಾಗೂ ಸುತ್ತಮುತ್ತಲಿನ ಗದ್ದಲದಿಂದ ಶ್ರೀರಾಮ ಆನೆ ಮತ್ತಷ್ಟು ಆತಂಕಗೊಂಡಿತು. ಇದರ ನಡುವೆ ಕೇಳಿಬಂದ ನಾದಸ್ವರದ ಸದ್ದಿಗೂ ಆನೆ ಪ್ರತಿಕ್ರಿಯಿಸಿ, ಅರಮನೆ ಆವರಣ ಪ್ರವೇಶಿಸಲು ಹಿಂದೇಟು ಹಾಕಿತು.

ಶ್ರೀರಾಮ ಆನೆ ಗಾಬರಿಗೊಂಡಿದ್ದರಿಂದ ಸ್ಥಳದಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿಯನ್ನು ಗಮನಿಸಿದ ಮಾವುತರು ಹಾಗೂ ಕಾವಾಡಿಗರು ತಕ್ಷಣವೇ ಆನೆಯನ್ನು ನಿಯಂತ್ರಣಕ್ಕೆ ತರಲು ಮುಂದಾದರು.

ಮಾವುತರು, ಕಾವಾಡಿಗರಿಂದ ಆನೆ ಹತೋಟಿ

ಮಾವುತರು ಮತ್ತು ಕಾವಾಡಿಗರು ಆನೆಯನ್ನು ಸಮಾಧಾನಪಡಿಸಿ ಹತೋಟಿಗೆ ತಂದ ಬಳಿಕ, ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಅರಮನೆ ಆವರಣದೊಳಗೆ ಕರೆದುಕೊಂಡು ಹೋದರು. ಇದರಿಂದ ಸ್ಥಳದಲ್ಲಿದ್ದವರು ನಿಟ್ಟುಸಿರು ಬಿಟ್ಟರು.

ಮೈಸೂರು ದಸರಾ ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ಆಗಮನದೊಂದಿಗೆ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಆನೆಗಳ ಆರೋಗ್ಯ, ಸುರಕ್ಷತೆ ಮತ್ತು ತರಬೇತಿಗೆ ಅರಣ್ಯ ಇಲಾಖೆ ಹಾಗೂ ಮಾವುತರು ವಿಶೇಷ ಗಮನ ಹರಿಸುತ್ತಿದ್ದಾರೆ.

Continue Reading

Trending