Connect with us

ರಾಜ್ಯ

BIG NEWS Gram Panchayati ಚುನಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಚುನಾವಣೆ ಯಾವಾಗ?

Published

on

ಬೆಂಗಳೂರು: ರಾಜ್ಯದ Gram Panchayati ಚುನಾವಣೆಗೆ ಕಾಯುತ್ತಿರುವ ಗ್ರಾಮೀಣ ಜನಪ್ರತಿನಿಧಿಗಳು ಹಾಗೂ ಮತದಾರರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ವಾರ್ಡ್ ಮರುವಿಂಗಡಣೆ ಹಾಗೂ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿರುವ 5,864 ಗ್ರಾಮ ಪಂಚಾಯಿತಿಗಳ ವಾರ್ಡ್ ಮರುವಿಂಗಡಣೆ ಮತ್ತು ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ಸಂಪೂರ್ಣವಾಗಿ ಪೂರ್ಣಗೊಂಡಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ. ಇದರಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸರ್ಕಾರದ ಕಡೆಯಿಂದ ಕೈಗೊಳ್ಳಬೇಕಿದ್ದ ಪ್ರಮುಖ ಪ್ರಕ್ರಿಯೆಗಳು ಮುಕ್ತಾಯಗೊಂಡಂತಾಗಿದೆ.

ಹೈಕೋರ್ಟ್‌ಗೆ ಸರ್ಕಾರದ ಪ್ರಮಾಣಪತ್ರ

ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಪೀಠಕ್ಕೆ ಪ್ರಮಾಣಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೀಸಲಾತಿ ಪ್ರಕಟಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸರ್ಕಾರ ಈ ಸ್ಥಿತಿ ವರದಿಯನ್ನು ಸಲ್ಲಿಸಿದೆ.

ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಟಿ.ಪಿ. ವಿವೇಕಾನಂದ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.

ಚುನಾವಣೆ ದಿನಾಂಕ ಪ್ರಕಟಿಸುವುದು ಆಯೋಗದ ಕೆಲಸ

ಸರ್ಕಾರ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದರಿಂದ ಚುನಾವಣಾ ಆಯೋಗದ ಪ್ರಮುಖ ಕೋರಿಕೆ ಈಡೇರಿದಂತಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಇನ್ನು ಅಗತ್ಯ ಕ್ರಮಗಳನ್ನು ಕೈಗೊಂಡು ಗ್ರಾಮ ಪಂಚಾಯಿತಿ ಚುನಾವಣೆಗಳ ದಿನಾಂಕ ಪ್ರಕಟಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ ಮೇಲಿದೆ ಎಂದು ನ್ಯಾಯಪೀಠ ತಿಳಿಸಿದೆ.

ಸರ್ಕಾರದ ಕಡೆಯಿಂದ ಸಲ್ಲಿಸಲಾದ ಸ್ಥಿತಿ ವರದಿಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ಒಟ್ಟು 5,927 ಗ್ರಾಮ ಪಂಚಾಯಿತಿಗಳು

ರಾಜ್ಯದಲ್ಲಿ ಒಟ್ಟು 5,927 ಗ್ರಾಮ ಪಂಚಾಯಿತಿಗಳಿವೆ. ಈ ಪೈಕಿ 5,864 ಗ್ರಾಮ ಪಂಚಾಯಿತಿಗಳ ವಾರ್ಡ್ ಮರುವಿಂಗಡಣೆ ಹಾಗೂ ಸದಸ್ಯ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ.

ಆದರೆ ಎಲ್ಲಾ ಗ್ರಾಮ ಪಂಚಾಯಿತಿಗಳನ್ನೂ ಸದ್ಯದ ಚುನಾವಣಾ ಪ್ರಕ್ರಿಯೆಯಲ್ಲಿ ಸೇರಿಸಲಾಗಿಲ್ಲ.

56 ಗ್ರಾಮ ಪಂಚಾಯಿತಿಗಳಿಗೆ ವಿನಾಯಿತಿ

ರಾಜ್ಯದ 56 ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ 2027ರಲ್ಲಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಈ ಪಂಚಾಯಿತಿಗಳನ್ನು ಪ್ರಸ್ತುತ ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ.

ಇದರ ಜೊತೆಗೆ ಗಡಿ ನಿಗದಿ ಮತ್ತು ಕೇಂದ್ರಸ್ಥಾನ ಅಂತಿಮಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ 7 ಗ್ರಾಮ ಪಂಚಾಯಿತಿಗಳ ಪ್ರಕರಣಗಳು ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿವೆ ಎಂದು ಸರ್ಕಾರದ ಮಾಹಿತಿಯಿಂದ ತಿಳಿದುಬಂದಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ವಿಚಾರಣೆ ಮುಂದೂಡಿಕೆ

ಇದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯೂ ನಡೆಯಿತು.

ಚುನಾವಣೆ ಸಂಬಂಧ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಸಂಬಂಧಿತ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸರ್ಕಾರ ಸಮಯ ಕೋರಿತು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿದೆ.

ಗ್ರಾಮೀಣ ರಾಜಕೀಯ ಚಟುವಟಿಕೆ ಚುರುಕು

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಅಗತ್ಯವಾದ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕಾಗುವ ನಿರೀಕ್ಷೆ ಇದೆ.

ಇನ್ನು ಚುನಾವಣಾ ದಿನಾಂಕ ಯಾವಾಗ ಪ್ರಕಟವಾಗಲಿದೆ ಎಂಬುದು ರಾಜ್ಯ ಚುನಾವಣಾ ಆಯೋಗದ ಮುಂದಿನ ಕ್ರಮದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಕಾಯುತ್ತಿರುವ ಗ್ರಾಮೀಣ ಜನಪ್ರತಿನಿಧಿಗಳು ಹಾಗೂ ಮತದಾರರ ಗಮನ ಇದೀಗ ರಾಜ್ಯ ಚುನಾವಣಾ ಆಯೋಗದತ್ತ ನೆಟ್ಟಿದೆ.

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

ವಿಜಯ್-ತ್ರಿಷಾ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದೇಕೆ? ಕ್ಯಾಮೆರಾ ತಿರುಗುತ್ತಿದ್ದಂತೆ CM Vijay ಮಾಡಿದ್ದೇನು?

Published

on

ಚೆನ್ನೈ: ನಟ ಹಾಗೂ ತಮಿಳುನಾಡು CM Vijay ಮತ್ತು ನಟಿ ತ್ರಿಷಾ ಕೃಷ್ಣನ್ ಮತ್ತೆ ಸುದ್ದಿಯಲ್ಲಿದ್ದಾರೆ. ಲಂಡನ್‌ನಲ್ಲಿ ನಡೆದ ಕಾರು ರೇಸ್‌ವೊಂದರಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ನೆಟ್ಟಿಗರ ಗಮನ ಸೆಳೆದಿದೆ.

ನಟ ಅಜಿತ್ ಕುಮಾರ್ ಭಾಗವಹಿಸಿದ್ದ ಮೈಕೆಲಿನ್ ಲೆ ಮ್ಯಾನ್ಸ್ ಕಪ್ ಕಾರು ರೇಸ್ ವೀಕ್ಷಿಸಲು ವಿಜಯ್ ಮತ್ತು ತ್ರಿಷಾ ಲಂಡನ್‌ನ ಸಿಲ್ವರ್‌ಸ್ಟೋನ್ ಸರ್ಕ್ಯೂಟ್‌ಗೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಚಿವ ಆಧವ್ ಅರ್ಜುನ್ ಅವರೊಂದಿಗೆ ಇಬ್ಬರೂ ಸ್ಟ್ಯಾಂಡ್ಸ್‌ನಲ್ಲಿ ಕುಳಿತು ರೇಸ್ ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

ಆದರೆ ಈ ಸಂದರ್ಭದಲ್ಲಿ ಕ್ಯಾಮೆರಾ ಅವರತ್ತ ತಿರುಗುತ್ತಿದ್ದಂತೆ ವಿಜಯ್ ಅವರು ತಕ್ಷಣವೇ ಹಿಂದೆ ಸರಿದಂತೆ ಹಾಗೂ ಕ್ಯಾಮೆರಾ ಫ್ರೇಮ್‌ನಿಂದ ದೂರವಾಗಲು ಪ್ರಯತ್ನಿಸಿದಂತೆ ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಇದೇ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕ್ಯಾಮೆರಾ ಕಂಡ ತಕ್ಷಣ ವಿಜಯ್ ಹಿಂದೆ ಸರಿದಿದ್ದೇಕೆ?

ವೈರಲ್ ಆಗಿರುವ ವಿಡಿಯೋದಲ್ಲಿ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಕುಳಿತು ರೇಸ್ ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತದೆ. ಕ್ಯಾಮೆರಾ ಅವರತ್ತ ತಿರುಗಿದಾಗ ವಿಜಯ್ ಅವರು ಫ್ರೇಮ್‌ನಿಂದ ಹಿಂದೆ ಸರಿದಂತೆ ಕಾಣಿಸಿಕೊಂಡಿದ್ದಾರೆ.

ಈ ನಡೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ವಿಜಯ್ ಉದ್ದೇಶಪೂರ್ವಕವಾಗಿ ಕ್ಯಾಮೆರಾದಿಂದ ದೂರ ಸರಿದಿದ್ದಾರೆ ಎಂದು ಚರ್ಚಿಸುತ್ತಿದ್ದರೆ, ಮತ್ತೊಂದೆಡೆ ವಿಡಿಯೋದಲ್ಲಿನ ಕೆಲವೇ ಕ್ಷಣಗಳನ್ನು ಆಧರಿಸಿ ಯಾವುದೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಮತ್ತೆ ಚರ್ಚೆಗೆ ಬಂದ ವಿಜಯ್-ತ್ರಿಷಾ ಹೆಸರು

ವಿಜಯ್ ಮತ್ತು ತ್ರಿಷಾ ಈ ಹಿಂದೆ ಕೂಡ ಹಲವು ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಇವರಿಬ್ಬರ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ಚರ್ಚೆಗೆ ಬರುತ್ತಿದೆ.

ವಿಜಯ್ ಅವರ ವೈಯಕ್ತಿಕ ಜೀವನದ ಕುರಿತ ಚರ್ಚೆಗಳ ನಡುವೆಯೂ ತ್ರಿಷಾ ಅವರೊಂದಿಗೆ ಅವರ ಹೆಸರು ತಳುಕು ಹಾಕಿಕೊಳ್ಳುತ್ತಿರುವುದು ಮುಂದುವರಿದಿದೆ. ಆದರೆ ಇಬ್ಬರ ನಡುವಿನ ಸಂಬಂಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳನ್ನು ಖಚಿತ ಮಾಹಿತಿಯೆಂದು ಪರಿಗಣಿಸಲು ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಇದೀಗ ಲಂಡನ್‌ನ ಸಿಲ್ವರ್‌ಸ್ಟೋನ್ ಸರ್ಕ್ಯೂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿರುವುದು ಮತ್ತೊಮ್ಮೆ ನೆಟ್ಟಿಗರ ಕುತೂಹಲಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಡಿಯೋ

ವಿಜಯ್ ಕ್ಯಾಮೆರಾ ಕಣ್ಣಿಗೆ ಬೀಳುತ್ತಿದ್ದಂತೆ ಹಿಂದೆ ಸರಿದಿರುವ ದೃಶ್ಯವೇ ಸದ್ಯ ವೈರಲ್ ವಿಡಿಯೋದ ಪ್ರಮುಖ ಅಂಶವಾಗಿದೆ. ಈ ಕುರಿತು ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದು, ವಿಜಯ್ ಅವರ ನಡೆಗೆ ಕಾರಣವೇನು ಎಂಬ ಚರ್ಚೆ ನಡೆಯುತ್ತಿದೆ.

ಆದರೆ ವೈರಲ್ ವಿಡಿಯೋದಲ್ಲಿನ ದೃಶ್ಯವನ್ನು ಆಧರಿಸಿ ವಿಜಯ್ ಮತ್ತು ತ್ರಿಷಾ ಅವರ ವೈಯಕ್ತಿಕ ಸಂಬಂಧದ ಬಗ್ಗೆ ಯಾವುದೇ ಖಚಿತ ತೀರ್ಮಾನಕ್ಕೆ ಬರುವುದು ಸಾಧ್ಯವಿಲ್ಲ. ಸದ್ಯಕ್ಕೆ ಲಂಡನ್ ರೇಸ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರುವುದು ಮತ್ತು ಆ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದಷ್ಟೇ ಗಮನಾರ್ಹವಾಗಿದೆ.

Continue Reading

ಬೆಂಗಳೂರು

“ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್!”: ಗಣೇಶೋತ್ಸವ ವಿಚಾರಕ್ಕೆ R Ashok ಗರಂ, ಸರ್ಕಾರಕ್ಕೆ ನೇರ ಸವಾಲು

Published

on

ಬೆಂಗಳೂರು: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಿ.ನರಸೀಪುರದಲ್ಲಿ ಪೊಲೀಸರು ನೀಡಿರುವ ಸೂಚನೆಗಳ ಕುರಿತು ವಿಧಾನಸಭೆ ವಿಪಕ್ಷ ನಾಯಕ R Ashok ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹಿಂದೂಗಳ ತಂಟೆಗೆ ಹೋದರೆ ಹುಷಾರ್. ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರುತ್ತೇನೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಮಾತನಾಡಿದ ಆರ್.ಅಶೋಕ್, ತಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೆಮ್ಮದಿಯಿಂದ ಗಣೇಶೋತ್ಸವ ಆಚರಿಸಲೂ ಬಿಡುತ್ತಿಲ್ಲ ಎಂದು ಆರೋಪಿಸಿದ ಅವರು, ರಾಜ್ಯಾದ್ಯಂತ ಗಣೇಶ ಹಬ್ಬದ ಆಚರಣೆಗೆ ಸರ್ಕಾರದಿಂದ ಕಿರುಕುಳ ನಡೆಯುತ್ತಿದೆ ಎಂದು ದೂರಿದರು.

ಗಣೇಶ ಹಬ್ಬವು ಮಕ್ಕಳು, ಹಿರಿಯರು ಸೇರಿದಂತೆ ಎಲ್ಲರೂ ಶ್ರದ್ಧಾಭಕ್ತಿಯಿಂದ ಆಚರಿಸುವ ಪವಿತ್ರ ಹಬ್ಬ ಹಾಗೂ ಐಕ್ಯತೆಯ ಹಬ್ಬ ಎಂದು ಅವರು ಹೇಳಿದರು. ತಿ.ನರಸೀಪುರದಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ದುರಹಂಕಾರದಿಂದ ಮಾತನಾಡಿದ್ದಾರೆ ಎಂದು ಆರೋಪಿಸಿದ ಆರ್.ಅಶೋಕ್, ಮಸೀದಿ ಮುಂದೆ ಮೆರವಣಿಗೆ ನಡೆಸಬಾರದು, ಪಟಾಕಿ ಸಿಡಿಸಬಾರದು ಎಂದು ಹೇಳಿರುವುದನ್ನು ಪ್ರಶ್ನಿಸಿದರು.

“ನೀವೇನು ರೌಡಿನಾ? ಗ್ರಹಚಾರ ಬಿಡಿಸೋಕೆ ಬಂದಿದ್ದೀರಾ? ಮೆರವಣಿಗೆ ಮಾಡುವವರು ರೌಡಿಗಳಾ?” ಎಂದು ಆರ್.ಅಶೋಕ್ ಪ್ರಶ್ನಿಸಿದರು.

“ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ”

ಇನ್ಸ್‌ಪೆಕ್ಟರ್ ಧನಂಜಯ್ ಈ ರೀತಿ ಮಾತನಾಡಿದ್ದರೆ ಅದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರ್.ಅಶೋಕ್ ಆರೋಪಿಸಿದರು. ಇದಕ್ಕೆ ಸರ್ಕಾರದ ಕುಮ್ಮಕ್ಕು ಇರಬಹುದು ಎಂದ ಅವರು, ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ ಎಂದು ವಾಗ್ದಾಳಿ ನಡೆಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣೆ ಸಂದರ್ಭದಲ್ಲಿ ದೇವಸ್ಥಾನಗಳಿಗೆ ತೆರಳಿ ಕುಂಕುಮ ಧರಿಸಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಆದರೆ ಇದೇ ಹಿಂದೂಗಳ ಕಾಳಜಿಯೇ ಎಂದು ಆರ್.ಅಶೋಕ್ ಪ್ರಶ್ನಿಸಿದರು.

“ಚುನಾವಣೆ ಹಿಂದೂ, ಕಲೆಕ್ಷನ್ ಹಿಂದೂ. ಜನರಿಗೆ ಏನು ಸಂದೇಶ ಕೊಡಲು ಹೊರಟಿದ್ದೀರಿ?” ಎಂದು ಅವರು ಕಿಡಿಕಾರಿದರು.

ಗಣೇಶ ಹಬ್ಬದ ಸಂದರ್ಭದಲ್ಲಿ ಪೊಲೀಸರು ಭಕ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಭಕ್ತಾದಿಗಳಿಗೆ ಬೆದರಿಕೆ ಹಾಕುವುದೇ ಸರ್ಕಾರದ ಕೆಲಸವೇ ಎಂದು ಅವರು ಪ್ರಶ್ನಿಸಿದರು.

“ಇನ್ಸ್‌ಪೆಕ್ಟರ್‌ನ್ನು ಅಮಾನತು ಮಾಡಿ”

ಗಣೇಶೋತ್ಸವಕ್ಕೆ ತೊಂದರೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಆರ್.ಅಶೋಕ್, ಡಿ.ಕೆ.ಶಿವಕುಮಾರ್ ನಿಜವಾಗಿಯೂ ಹಿಂದೂಗಳ ಬಗ್ಗೆ ಕಾಳಜಿ ಹೊಂದಿದ್ದರೆ ತಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಲಿ ಎಂದು ಆಗ್ರಹಿಸಿದರು.

“ಡಿಕೆಶಿ ತೋರಿಸಲಿ ತಾವು ನಿಜ ಹಿಂದೂನಾ, ಕಪಟ ಹಿಂದೂನಾ” ಎಂದು ಸವಾಲು ಹಾಕಿದರು.

ಪಾಕ್ ಪರ ಘೋಷಣೆ ಮಾಡುವವರಿಗೆ ಬಿರಿಯಾನಿ ನೀಡಲಾಗುತ್ತದೆ, ಆದರೆ ಗಣೇಶ ಹಬ್ಬ ಆಚರಿಸುವವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ ಅವರು, ಇದನ್ನು “ಗೂಂಡಾ ಸರ್ಕಾರ, ತಾಲಿಬಾನಿ ಸರ್ಕಾರ” ಎಂದು ಟೀಕಿಸಿದರು.

ಮೈಕ್ ಬಳಕೆ ವಿಚಾರದಲ್ಲಿಯೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಆರ್.ಅಶೋಕ್, ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಧ್ವನಿ ಮಿತಿಯನ್ನು ಎಲ್ಲ ಧಾರ್ಮಿಕ ಸ್ಥಳಗಳಲ್ಲೂ ಸಮಾನವಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.

“ಮನೆಗಳಲ್ಲಿ ಗಣಪತಿ ಕೂರಿಸಲೂ ಅನುಮತಿ ಬೇಕಾಗುವ ಸ್ಥಿತಿ ಬರಬಹುದು”

ಹಿಂದೂಗಳು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದ ಆರ್.ಅಶೋಕ್, ಈಗ ಸುಮ್ಮನಿದ್ದರೆ ಮುಂದಿನ ದಿನಗಳಲ್ಲಿ ಗಲ್ಲಿಗಲ್ಲಿಯಲ್ಲೂ ಪೊಲೀಸರು ವಾರ್ನಿಂಗ್ ನೀಡುವ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಸಿದರು.

ತಾವು ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ ಎಂದು ಹೇಳಿದ ಅವರು, ಕೂಡಲೇ ತಿ.ನರಸೀಪುರಕ್ಕೆ ತೆರಳಿ ನ್ಯಾಯಕ್ಕಾಗಿ ಹೋರಾಡುವುದಾಗಿ ಘೋಷಿಸಿದರು.

ಬ್ರಿಟಿಷರ ಆಡಳಿತದ ಅವಧಿಯಲ್ಲೂ ಗಣೇಶ ಹಬ್ಬವನ್ನು ಆರಾಮವಾಗಿ ಆಚರಿಸಲಾಗುತ್ತಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಬ್ರಿಟಿಷರಿಗಿಂತಲೂ ಕೆಟ್ಟ ಪರಿಸ್ಥಿತಿ ನಿರ್ಮಿಸಿದೆ ಎಂದು ಆರ್.ಅಶೋಕ್ ಆರೋಪಿಸಿದರು.

“ದೂರು ಕೊಟ್ಟಿರುವವರು ನಿಮ್ಮ ಸುತ್ತಮುತ್ತಲೇ ಇರಬೇಕು”

ಇಡಿ ದೂರು ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, “ಯಾರು ದಲಿತ ವಿರೋಧಿ ಎಂಬುದು ಈಗ ಗೊತ್ತಾಯ್ತಲ್ಲ” ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಅವರು ಚಿನ್ನದ ಗಣಿ ಪಡೆದಿದ್ದಾರೆ ಹಾಗೂ ಅದರಲ್ಲಿ ಪಾಲುದಾರಿಕೆ ಇದೆ ಎಂಬ ವಿಚಾರ ಬೆಳಗಾವಿಯವರಿಗೆ ಗೊತ್ತಿದೆ. ಬೆಂಗಳೂರಿನಲ್ಲಿರುವವರಿಗೆ ಗೊತ್ತಿಲ್ಲ ಎಂದು ಅವರು ಹೇಳಿದರು.

ದೂರು ನೀಡಿರುವವರು ಸತೀಶ್ ಜಾರಕಿಹೊಳಿ ಅವರ ಸುತ್ತಮುತ್ತಲೇ ಇರಬೇಕು. ಮೊದಲು ಬೆಳಗಾವಿಯಲ್ಲಿ ಹುಡುಕಲಿ, ನಂತರ ಬೆಂಗಳೂರಿನಲ್ಲಿ ಹುಡುಕಲಿ ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.

ಯಾರು ಬ್ರೇಕಿಂಗ್ ಸುದ್ದಿ ನೀಡಿದ್ದಾರೆ, ಕ್ಷಣಕ್ಷಣದ ಮಾಹಿತಿ ನೀಡಿದ್ದಾರೆ ಎಂಬುದನ್ನೂ ಪತ್ತೆಹಚ್ಚಬೇಕು ಎಂದು ಅವರು ಹೇಳಿದರು. ಜಾತಿಗೂ ಭ್ರಷ್ಟಾಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟರು.

Continue Reading

ಬೆಂಗಳೂರು

CM D K Shiv Kumar 100 ದಿನಗಳ ಸಂವಾದ: ‘ಗಟ್ಟಿ ತೀರ್ಮಾನ ಮಾಡದಿದ್ದರೆ ನನ್ನನ್ನು ಕಾಲಿ ಡಬ್ಬಿ ಅಂತಾರೆ’!

Published

on

ಬೆಂಗಳೂರು: CM D K Shiv Kumar ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸುದ್ದಿಮಾಧ್ಯಮಗಳ ಸಂಪಾದಕರೊಂದಿಗೆ ಸಂವಾದ ನಡೆಸಿ, ತಮ್ಮ ಸರ್ಕಾರದ ನೂರು ದಿನಗಳ ಹೆಜ್ಜೆಗುರುತು, ಮುಂದಿನ ಯೋಜನೆಗಳು ಹಾಗೂ ಎದುರಿಸುತ್ತಿರುವ ಸವಾಲುಗಳ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಆರೋಗ್ಯ ಸಹಕರಿಸಿದರೆ ಇನ್ನೂ 15 ವರ್ಷ ರಾಜಕೀಯದಲ್ಲಿ ಸಕ್ರಿಯವಾಗಿರುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಪರಿಸ್ಥಿತಿ ಅರಿತೇ ಯೋಜನೆಗಳ ಘೋಷಣೆ

ಕಳೆದ ನೂರು ದಿನಗಳಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡೇ ಅನುಷ್ಠಾನ ಮಾಡಲು ಸಾಧ್ಯವಿರುವ ಯೋಜನೆಗಳನ್ನು ಮಾತ್ರ ಘೋಷಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನುಡಿದಂತೆ ನಡೆಯಬೇಕು ಎಂಬ ಅರಿವು ತಮ್ಮಲ್ಲಿದೆ. ಇಲ್ಲವಾದರೆ ಎಲ್ಲರ ಎದುರು ನಗೆಪಾಟಲಿಗೀಡಾಗಬೇಕಾಗುತ್ತದೆ. ಹೀಗಾಗಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಒಸಿ, ಸಿಸಿ ವಿಚಾರದಲ್ಲಿಯೂ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಸತಿ ಕಟ್ಟಡಗಳ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ವಾಣಿಜ್ಯ ಕಟ್ಟಡಗಳ ವಿಚಾರವನ್ನು ಪರಿಗಣಿಸಿದರೆ ಬೇರೆ ರೀತಿಯ ನಿರ್ಧಾರವಾಗುತ್ತದೆ. ಭೂ ಗ್ಯಾರಂಟಿಯನ್ನೂ ನೀಡಲಾಗಿದೆ ಎಂದು ಹೇಳಿದ್ದಾರೆ.

ಹೊರರಾಜ್ಯದವರಿಗೆ ಉಚಿತ ಸೌಲಭ್ಯ ಯಾಕೆ?

ಶಕ್ತಿ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್‌ ನೀಡಲು ತೀರ್ಮಾನಿಸಲಾಗಿದ್ದು, ಕಾರ್ಡ್‌ ಸ್ಕ್ಯಾನ್‌ ಮಾಡಿ ಪ್ರಯಾಣಿಸುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 14 ಲಕ್ಷದಷ್ಟು ಹೊರರಾಜ್ಯದವರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದಾಗ ಹೊರರಾಜ್ಯದವರಿಗೆ ಏಕೆ ಉಚಿತ ಅವಕಾಶ ನೀಡಬೇಕು ಎಂಬ ಪ್ರಶ್ನೆ ಇದೆ. ಇದೇ ರೀತಿ ಹೊರರಾಜ್ಯದವರಿಗೆ ಉಚಿತ ವಿದ್ಯುತ್‌ ನೀಡುವ ವಿಚಾರದಲ್ಲಿಯೂ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸಣ್ಣಪುಟ್ಟ ವಿಚಾರಗಳಲ್ಲಿಯೂ ಗಟ್ಟಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಇಲ್ಲವಾದರೆ ತಮ್ಮನ್ನು ‘ಕಾಲಿ ಡಬ್ಬ’ ಎಂದು ಕರೆಯುತ್ತಾರೆ ಎಂಬ ಅರಿವು ಇದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಟನಲ್‌ ರಸ್ತೆ ಯಾರಿಗಾಗಿ?

ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ನೀಡಲು ಉದ್ದೇಶಿಸಿರುವ ಟನಲ್‌ ರಸ್ತೆ ಯೋಜನೆಗೆ ಹಲವು ಅಡೆತಡೆಗಳಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪಾರ್ಕ್‌ನ ಒಂದು ಮೂಲೆಯ ಜಾಗವನ್ನು ಬಳಸಿಕೊಳ್ಳುವುದಕ್ಕೂ ಆಕ್ಷೇಪ ವ್ಯಕ್ತವಾಗುತ್ತಿದೆ. ಸಣ್ಣ ಬಂಡೆಯೊಂದನ್ನು ತೆಗೆಯಬೇಕಾದ ಪರಿಸ್ಥಿತಿಯನ್ನೂ ದೊಡ್ಡ ವಿಚಾರವನ್ನಾಗಿ ಮಾಡಲಾಗುತ್ತಿದೆ. ಬೇರೆ ಕಟ್ಟಡಗಳನ್ನು ಒಡೆಯಲು ಸಾಧ್ಯವಿಲ್ಲ. ಹಾಗಾದರೆ ಈ ಟನಲ್‌ ರಸ್ತೆ ಯಾರಿಗಾಗಿ ಎಂಬ ಪ್ರಶ್ನೆಯನ್ನು ಡಿಕೆಶಿ ಮುಂದಿಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಏಳು ಟನಲ್‌ ರಸ್ತೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಕರ್ನಾಟಕದ ದಾಖಲೆಗಳನ್ನು ತೆಗೆದುಕೊಂಡು ಕೆಲವು ರಾಜ್ಯಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟನಲ್‌ ರಸ್ತೆಯನ್ನು ನಿರ್ಮಿಸಲು ಸರ್ಕಾರ ಸುಮಾರು ₹4,000 ಕೋಟಿ ಮಾತ್ರ ನೀಡಲಿದೆ. ಉಳಿದ ಹಣವನ್ನು ಖಾಸಗಿ ಸಂಸ್ಥೆಗಳು ಹೂಡಿಕೆ ಮಾಡಿ, 25ರಿಂದ 30 ವರ್ಷಗಳ ಕಾಲ ನಿರ್ವಹಣೆ ಮಾಡುವ ರೀತಿಯಲ್ಲಿ ಬಿಲ್ಡ್‌-ಆಪರೇಟ್‌-ಟ್ರಾನ್ಸ್‌ಫರ್‌ ಮಾದರಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಹಣ ಪಾವತಿಸಲು ಸಿದ್ಧರಿರುವವರು ಟನಲ್‌ ರಸ್ತೆಯಲ್ಲಿ ಸಂಚರಿಸಿ ಸಮಯ ಉಳಿಸಿಕೊಳ್ಳಬಹುದು. ಹಣ ನೀಡಲು ಸಾಧ್ಯವಾಗದವರು ಮೇಲಿನ ಸಾಮಾನ್ಯ ರಸ್ತೆಯಲ್ಲಿ ಸಂಚರಿಸಬಹುದು. ಟನಲ್‌ ರಸ್ತೆಯಿಂದ ಕನಿಷ್ಠ ಒಂದು ಗಂಟೆ ಸಮಯ ಉಳಿಯಬಹುದು ಎಂದು ಡಿಕೆಶಿ ಹೇಳಿದ್ದಾರೆ.

ನಿದ್ದೆಗೆ ಕಡಿಮೆ ಸಮಯ: ‘ರಾಜಕೀಯವೇ ನನ್ನ ದೊಡ್ಡ ಅಭ್ಯಾಸ’

ತಮ್ಮ ನಿದ್ದೆಯ ಅವಧಿ ಕಳೆದ ಐದಾರು ವರ್ಷಗಳಿಂದ ಬಹಳ ಕಡಿಮೆಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ರಾತ್ರಿ 2 ಗಂಟೆಗೆ ಮಲಗಿ, ಬೆಳಗ್ಗೆ 5.15ಕ್ಕೆ ಎದ್ದು ಎಪಿಎಂಸಿ ಭೇಟಿ ನೀಡಿದ್ದೆ. ಬೆಳಗ್ಗೆ 9.45ರ ವೇಳೆಗೆ ವಾಪಸ್‌ ಬಂದಿದ್ದೆ. ಮೊದಲ ಬಾರಿಗೆ ಮಧ್ಯಾಹ್ನ ದೈಹಿಕವಾಗಿ ವ್ಯತ್ಯಾಸ ಕಂಡುಬಂತು ಎಂದು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕನಿಷ್ಠ ಐದಾರು ಗಂಟೆಗಳ ವಿಶ್ರಾಂತಿಯೂ ಸಿಗುತ್ತಿಲ್ಲ. ಗುರಿ ಮುಟ್ಟಬೇಕು ಎಂಬ ಪ್ರಯತ್ನದಿಂದ ಪ್ರತಿದಿನ ರಾತ್ರಿ 2 ಗಂಟೆಯವರೆಗೂ ಯಾರಾದರೂ ಭೇಟಿಯಾಗುತ್ತಿರುತ್ತಾರೆ. ಹಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ತಮ್ಮ ಕುಟುಂಬ ಸಂಪೂರ್ಣ ಸಹಕಾರ ನೀಡುತ್ತಿದೆ. ಅದೇ ತಮ್ಮ ದೊಡ್ಡ ಶಕ್ತಿ. ಬೇರೆ ಯಾವುದೇ ಅಭ್ಯಾಸವಿಲ್ಲ, ರಾಜಕೀಯವೇ ತಮ್ಮ ದೊಡ್ಡ ಅಭ್ಯಾಸ ಎಂದು ಡಿಕೆಶಿ ಹೇಳಿದ್ದಾರೆ.

ಸರ್ಕಾರದ ಮುಂದೆ ಹಲವು ಸವಾಲುಗಳು

ತಮ್ಮ ಸರ್ಕಾರದ ಕಾಲಾವಧಿ ಕಡಿಮೆ ಇದೆ ಎಂಬ ಅರಿವಿದೆ. ಆದರೆ ಇದು ಡಿಕ್ಟೇಟರ್‌ಶಿಪ್‌ ಸರ್ಕಾರವಲ್ಲ, ಪ್ರಜಾಪ್ರಭುತ್ವದ ಸರ್ಕಾರ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ಸೇರಿದಂತೆ ಹಲವು ಹಂತಗಳಲ್ಲಿ ಸರ್ಕಾರದ ಪ್ರತಿಯೊಂದು ತೀರ್ಮಾನವೂ ಪ್ರಶ್ನೆಗೆ ಒಳಗಾಗುತ್ತದೆ. ಅಧಿಕಾರಿಗಳು ಕೂಡ ಎಲ್ಲ ನಿರ್ಧಾರಗಳನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಯಾರೂ ಅಪಾಯ ತೆಗೆದುಕೊಳ್ಳಲು ಸಿದ್ಧರಿರುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜಕೀಯದಲ್ಲಿ ಮೇಲೇರಲು ಪ್ರಯತ್ನಿಸುವವರ ಕಾಲೆಳೆಯುವುದು ಸಹಜ. ನ್ಯಾಯಾಲಯಕ್ಕೆ ಯಾರಾದರೂ ಹೋಗಿ ತಡೆಯಾಜ್ಞೆ ತಂದರೂ ಯೋಜನೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ಇದೆ. ಶಿವರಾಮ ಕಾರಂತ ಬಡಾವಣೆ ವಿಚಾರವೇ ಇದಕ್ಕೆ ಉದಾಹರಣೆ. ಈ ಎಲ್ಲ ಕಾರಣಗಳಿಂದ ಸಾಕಷ್ಟು ಸವಾಲುಗಳಿವೆ ಎಂದು ಡಿಕೆಶಿ ಹೇಳಿದ್ದಾರೆ.

ಪ್ರಧಾನಿ ಮೋದಿ ಜತೆಗಿನ ಮಾತುಕತೆ ಬಹಿರಂಗಪಡಿಸುವುದಿಲ್ಲ

ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಕರೆದು ಮಾತನಾಡಿದ್ದರು. ಅದು ಅವರ ಹೃದಯಶ್ರೀಮಂತಿಕೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜನರು, ದೇಶ ಹಾಗೂ ಸ್ವಾಮಿ ವಿವೇಕಾನಂದರ ಬಗ್ಗೆ ಚರ್ಚೆ ನಡೆಸಿದ್ದೇವೆ. ಪ್ರಧಾನಿ ಮತ್ತು ಮುಖ್ಯಮಂತ್ರಿ ನಡುವೆ ನಡೆದ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅದಾನಿ ಭೇಟಿ ಬಗ್ಗೆ ರಾಹುಲ್‌ ಗಾಂಧಿ ಕೇಳಿಲ್ಲ

ಉದ್ಯಮಿ ಗೌತಮ್‌ ಅದಾನಿ ಬಹಳ ದಿನಗಳಿಂದ ಪರಿಚಯವಿರುವವರು. ವಿದ್ಯುತ್‌, ಸಿಮೆಂಟ್‌ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಒಬ್ಬ ಉದ್ಯಮಿಯಾಗಿ ಅದಾನಿ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಂದಾಗ ಬೇಡ ಎಂದು ಹೇಳಲು ಸಾಧ್ಯವಿಲ್ಲ. ರಾಹುಲ್‌ ಗಾಂಧಿಯವರು ಅದಾನಿ ಜತೆಗಿನ ತಮ್ಮ ಭೇಟಿಯ ಬಗ್ಗೆ ಯಾವುದೇ ಪ್ರಶ್ನೆ ಕೇಳಿಲ್ಲ ಎಂದು ತಿಳಿಸಿದ್ದಾರೆ.

‘ಜನರನ್ನು ಗೊಂದಲಕ್ಕೆ ಸಿಲುಕಿಸುವುದಿಲ್ಲ’

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯಶಸ್ವಿಯಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹಲವು ರಾಜ್ಯಗಳಲ್ಲಿ ಯೋಜನೆಗಳನ್ನು ಘೋಷಿಸಿದರೂ ಮುಂದುವರಿಸಲು ಸಾಧ್ಯವಾಗದೆ ನಿಲ್ಲಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯನ್ನೂ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

‘ವಿ ವಿಲ್ ಕನ್ವಿನ್ಸ್ಡ್ ದಿ ಪೀಪಲ್, ವಿ ವಿಲ್ ನಾಟ್ ಕನ್ಫ್ಯೂಸ್ಡ್ ದಿ ಪೀಪಲ್’ ಎಂದು ಹೇಳಿರುವ ಡಿಕೆಶಿ, ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.

‘ಜನರ ಬಗ್ಗೆ ಕಾಳಜಿಯಷ್ಟೇ’

ಪಾರ್ಕ್‌ ಜಾಗ ಬಳಕೆ ಸೇರಿದಂತೆ ಯಾವುದೇ ವಿಚಾರದಲ್ಲಿಯೂ ಸರ್ಕಾರ ಯುಟರ್ನ್‌ ಹೊಡೆದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾಡಿನ ಜನರ ಕುರಿತು ಕಾಳಜಿ ಮತ್ತು ಗೌರವ ಮಾತ್ರ ಸರ್ಕಾರದ ಉದ್ದೇಶ. ಜನರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಅದನ್ನು ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕಸ: ‘ದೊಡ್ಡ ಮಾಫಿಯಾ’

ಬೆಂಗಳೂರು ಕಸ ನಿರ್ವಹಣೆ ವಿಚಾರವೂ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

ಕಳೆದ 15 ವರ್ಷಗಳಿಂದ ಬೆಂಗಳೂರಿನ ಕಸದ ಟೆಂಡರ್‌ ಅಂತಿಮಗೊಳಿಸಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್‌, ಬಿಜೆಪಿ ಅಥವಾ ಜೆಡಿಎಸ್‌ ಸರ್ಕಾರವಿದ್ದರೂ ಈ ಸಮಸ್ಯೆಗೆ ಸಂಪೂರ್ಣ ಪರಿಹಾರ ಸಿಕ್ಕಿರಲಿಲ್ಲ. ಇದು ದೊಡ್ಡ ಮಾಫಿಯಾ ಆಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈಗ ಕಸ ನಿರ್ವಹಣೆಗೆ ಪ್ಯಾಕೇಜ್‌ಗಳನ್ನು ರೂಪಿಸಿ ಟೆಂಡರ್‌ ನೀಡಲಾಗಿದೆ. ನ್ಯಾಯಾಲಯದ ಮಧ್ಯಪ್ರವೇಶ ಸೇರಿದಂತೆ ಹಲವು ವಿಚಾರಗಳು ಇದರಲ್ಲಿವೆ. ಈ ಸಮಸ್ಯೆಯನ್ನು ಒಂದು ಹಂತಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement

Trending