Connect with us

ಬೆಂಗಳೂರು

ತಂದೆ ಹೆಸರಲ್ಲಿ ಸ್ವಂತ ಖರ್ಚಿನಲ್ಲಿ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ನಟ ಜಿಮ್ ರವಿ

Published

on

ಕೋಲಾರ ಮೂಲದ ಎ.ಕೆ‌.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಸಂಪಾದಿಸಿದ್ದಾರೆ.

ಆದರೆ, ತಾವು ಮಾಡುವ ಸಾಮಾಜಿಕ ಕೆಲಸಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಪ್ರಚಾರ ಬಯಸಿದವರಲ್ಲ.‌ ಅವರೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ನೇಹಿತರ ಒತ್ತಾಯಕ್ಕೆ ಮಣಿದ ರವಿ ಅವರು ಈ ಕಾರ್ಯ ಇತರರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು

‌ಕೋಲಾರದಿಂದ ಬೆಂಗಳೂರಿಗೆ ಬಂದು ಟೌನ್ ಹಾಲ್​ನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿದ ವಿಷಯದೊಂದಿಗೆ ಮಾತು ಆರಂಭಿಸಿದ ಜಿಮ್ ರವಿ, ”ನಮ್ಮದು ಮಧ್ಯಮವರ್ಗ ಕುಟುಂಬ‌‌. ಪ್ರತಿದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ನನ್ನ ತಾಯಿ ನನಗೆ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ‌ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ‌ಪರವಾಗಿಲ್ಲ, ಕಷ್ಟದಲ್ಲಿರುವವರ ಜೊತೆಗಿರು. ಹಿರಿಯರೆದುರು ಕೈಕಟ್ಟಿ ನಿಲ್ಲೆಂದು ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗೆ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋದರು. ಅಮ್ಮನ ನಿಧನದ ಕೆಲ ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹಾಗಾಗಿ, ನನ್ನನ್ನು ಕಾಶಿ‌ಯಾತ್ರೆಗೆ ಕರೆದುಕೊಂಡು ಹೋಗು ಎಂದರು. ನನ್ನ ಹತ್ತಿರ ಆಗ ಹಣವಿರಲಿಲ್ಲ. ಅಪ್ಪನಿಗೆ ಏರುದನಿಯಲ್ಲಿ ಈಗ ಅದೆಲ್ಲ ಆಗಲ್ಲ ಎಂದುಬಿಟ್ಟೆ”.

ನಮ್ಮ ಯೋಜನೆ ಒಂದಾದರೆ, ವಿಧಿ ಮತ್ತೊಂದು: ”ಅದಾದ ಕೆಲ ತಿಂಗಳ ಬಳಿಕ ಮತ್ತೆ ಕೇಳಿದರು. ಆಗ ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಸಮಾಧಾನಪಡಿದೆ.‌ ಕೆಲ ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೆಟ್ ಬುಕ್ ಮಾಡಿದೆ.‌ ಆ ವಿಷಯವನ್ನು ಅಪ್ಪನಿಗೆ ಫೋನ್ ಮಾಡಿ ತಿಳಿಸಿದೆ. ಅವರು ಖುಷಿಯಾಗುತ್ತಾರೆ‌. ಆದರೆ ವಿಧಿ ಬೇರೆಯದ್ದಾಗಿತ್ತು,

ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ: ”ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡ್ತು. ಅದೇ ದಿನ ನಾನು ನಿರ್ಧಾರ ಮಾಡಿದೆ. ನಮ್ಮ ಅಪ್ಪನ ಆಸೆ ಈಡೇರಿಸಲು, ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲ ಅಶಕ್ತರಿಗೆ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ನಿರ್ಧರಿಸಿದೆ” ಎಂದು ತಿಳಿಸಿದರು.

ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಈವರೆಗೂ ಅದಕ್ಕೋಸ್ಕರ ಹುಂಡಿ ಇಟ್ಟು ಹಣ ಕೂಡಿಸುತ್ತಿದ್ದೆ. ಯಾವುದೇ ದುಂದು ವೆಚ್ವ‌‌ ಮಾಡದೇ ಹತ್ತು, ಇಪ್ಪತ್ತು ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಸಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿದ್ದು, ಅವರ ಜೊತೆ 101 ಜನರ ತಂಡ ಜುಲೈ 2ರಂದು ಪಯಣ ಬೆಳೆಸುತ್ತಿದ್ದೇವೆ” ಎಂದು ತಿಳಿಸಿದರು.

ಅವರ ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತಿದ್ದೇವೆ‌. ಜುಲೈ 2ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಕೈಗೊಳ್ಳಲಿದ್ದೇವೆ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು 3 ದಿನಗಳ ಯಾತ್ರೆ. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ‌. ನಮ್ಮ ಜೊತೆ ವೈದ್ಯರು ಹಾಗೂ ಸ್ವಯಂ ಸೇವಕರಿರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ನನಗೆ ಈ ವಿಚಾರ‌ ಪ್ರಚಾರ ಮಾಡುವ ಉದ್ದೇಶವಿರಲಿಲ್ಲ. ಸ್ನೇಹಿತರೋರ್ವರು, ನೀವು ಈ ವಿಷಯ ಜನರಿಗೆ ತಿಳಿಸಿ, ಅದು ಎಷ್ಟೋ ಜನರಿಗೆ ಆದರ್ಶವಾಗಬಹುದು ಎಂದರು. ಹಾಗಾಗಿ, ನಿಮ್ಮ ಮುಂದೆ ಈ ವಿಷಯ ತಿಳಿಸಿದ್ದೇನೆ. ದೇವರು ಅನುಕೂಲ ಮಾಡಿಕೊಟ್ಟರೆ ಮುಂದೆಯೂ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜ್ಯ

KRS ಡ್ಯಾಂಗೆ ಭಾರೀ ಶಾಕ್‌! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.

ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.

ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.

110 ಅಡಿ ದಾಟಿದ KRS ನೀರಿನ ಮಟ್ಟ

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.

ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.

Continue Reading

ದೇಶ

KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ

Published

on

By

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?

KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

73 ಸಾವಿರ ಉದ್ಯೋಗ ಭರವಸೆ ಏನಾಯಿತು?

ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

Continue Reading

Trending