Connect with us

ಬೆಂಗಳೂರು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಸಾಧ್ಯತೆ, ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ

Published

on

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ.

ಜುಲೈ 26ರಂದು ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಆಗಸ್ಟ್ 1 ರಂದು, ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟವು ನೋಟಿಸ್‌ ವಾಪಸ್‌ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಿತ್ತು.

ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆಯೇ ಅಥವಾ ಪ್ರಕರಣವನ್ನು ಸಿಬಿಐಗೆ ವಹಿಸುತ್ತಾರೆಯೇ ಎಂಬುದರ ಕುರಿತು ಕುತೂಹಲಗಳು ಮೂಡಿವೆ.

 ನಡುವೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಯಾವುದೇ ಘರ್ಷಣೆಯಾಗದಂತೆ ನೋಡಿಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಅವರು ಕಾನೂನು ಸಲಹೆಗಾರರ ​​ಅಭಿಪ್ರಾಯವನ್ನೂ ತೆಗೆದುಕೊಂಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸಚಿವರು ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. ಏಕೆಂದರೆ ರಾಜಭವನ ರಾಜಕೀಯ ಆಟವಾಡುವ ಸ್ಥಳವಲ್ಲ. ಆದರೆ, ಬಿಜೆಪಿ ಆ ಪ್ರಯತ್ನವನ್ನು ಮಾಡುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. 163ನೇ ವಿಧಿಯೂ ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಬಹುದು ಎಂದು ಹೇಳುತ್ತದೆ. ಆದರೆ, ಅದನ್ನು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಬಳಸುವಂತಿಲ್ಲ. ರಾಜ್ಯಪಾಲರು ಮಂತ್ರಿಮಂಡಲದ ನೆರವು ಮತ್ತು ಸಲಹೆಯನ್ನು ಮೀರಿ ಹೋಗಬಾರದು ಎಂದು ತಿಳಿಸಿದ್ದಾರೆ.

ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು 50- 50 ಅನುಪಾತವನ್ನು ರದ್ದು ಪಡಿಸಿ ಸೂಕ್ತ ಕ್ರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇವೆರಡೂ ಅಲ್ಲದಿದ್ದರೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆಗಾರಿಕೆಯಾಗಿರುತ್ತದೆ.ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎಂಬುದು ಈಗ ಕೇಳಿ ಬಂದಿರುವ ಆರೋಪವಾಗಿದೆ.

ಅಪರಾಧ

Renukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?

Published

on

ಬೆಂಗಳೂರು: ಚಿತ್ರದುರ್ಗ ಮೂಲದ Renukaswamy Murder Case ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ಪುರಸ್ಕರಿಸಿದ್ದು, ಇದೀಗ ಅವರು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷಿ ನುಡಿಯಲು ಅವಕಾಶ ದೊರೆತಿದೆ.

ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸುಜಾತ ಎಂ. ಸಮಭ್ರಾಣಿ ಅವರು ಮಂಗಳವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.

ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕಾರ

ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.

ಆದರೆ, ದರ್ಶನ್ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ನ್ಯಾಯಾಲಯ ಪರಿಗಣಿಸದೆ, ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಯಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪ್ರಕರಣಕ್ಕೆ ಸಿಗಲಿದೆಯೇ ಮಹತ್ವದ ತಿರುವು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಇದೀಗ ಸರ್ಕಾರದ ಪರ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ. ಪ್ರಕರಣದ ಘಟನೆಗಳು, ಆರೋಪಿಗಳ ಪಾತ್ರ ಹಾಗೂ ಕೃತ್ಯದ ಬಳಿಕ ನಡೆದ ಬೆಳವಣಿಗೆಗಳ ಕುರಿತು ಅವರು ನೀಡಬಹುದಾದ ಮಾಹಿತಿ ತನಿಖೆಗೆ ಪ್ರಮುಖವಾಗುವ ಸಾಧ್ಯತೆಯಿದೆ.

ವಿಶೇಷವಾಗಿ ಕೊಲೆ ನಡೆದ ಸ್ಥಳದಲ್ಲಿನ ಘಟನೆಗಳು ಹಾಗೂ ಬಳಿಕ ಸಾಕ್ಷ್ಯ ನಾಶಕ್ಕೆ ನಡೆದಿತ್ತೆನ್ನಲಾದ ಪ್ರಯತ್ನಗಳ ಕುರಿತು ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಅವರ ಹೇಳಿಕೆಯಲ್ಲಿ ಯಾವೆಲ್ಲ ಪ್ರಮುಖ ಅಂಶಗಳು ಹೊರಬರಲಿವೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

ಬೆಂಗಳೂರು

Kannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!

Published

on

ಬೆಂಗಳೂರು: Kannada Sahitya Parishat ನ ಪ್ರತಿಷ್ಠಿತ **‘ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿ’**ಗೆ 2025 ಹಾಗೂ 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ತಮ್ಮ ಮಾಸಿಕ ಗೌರವ ಸಂಭಾವನೆಯನ್ನು ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಹಿರಿಯ ಸಾಹಿತಿಗಳನ್ನು ಗೌರವಿಸಲು ಬಳಸುವ ಉದ್ದೇಶದಿಂದ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.

60 ವರ್ಷ ಪೂರ್ಣಗೊಳಿಸಿರುವ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ತಲಾ 30 ಸಾವಿರ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2021ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

2025ನೇ ಸಾಲಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಹಿರಿಯ ಸಾಹಿತಿ ಡಾ. ಲತಾ ಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

2026ನೇ ಸಾಲಿಗೆ ಬಾಗಲಕೋಟೆಯ ಹಿರಿಯ ಸಾಹಿತಿ ಡಾ. ಶ್ರೀರಾಮ ಇಟ್ಟಣ್ಣವರ ಹಾಗೂ ಬೆಂಗಳೂರಿನ ಹಿರಿಯ ಲೇಖಕಿ ಡಾ. ಪದ್ಮಿನಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆ ಸಮಿತಿಯಲ್ಲಿ ಯಾರೆಲ್ಲ ಇದ್ದರು?

ಆಗಸ್ಟ್ 25, 2026ರಂದು ಆಡಳಿತಾಧಿಕಾರಿ ಕೆ.ಎ. ದಯಾನಂದ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ, ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ದತ್ತಿ ದಾನಿಗಳಾದ ನಾಡೋಜ ಡಾ. ಮನು ಬಳಿಗಾರ್ ಉಪಸ್ಥಿತರಿದ್ದರು.

ಎರಡು ವರ್ಷಗಳ ಪ್ರಶಸ್ತಿ ಪುರಸ್ಕೃತರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೆಂಗಳೂರು

Nice Company ಖರೀದಿಗೆ ಸಿಎಂ ಯತ್ನ? ಕುಮಾರಸ್ವಾಮಿ ಗಂಭೀರ ಆರೋಪ, ದಾಖಲೆ ಬಿಡುಗಡೆ ಘೋಷಣೆ

Published

on

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ಹಾಲಿ ಮುಖ್ಯಮಂತ್ರಿ ಬೇನಾಮಿ ಕಂಪನಿಗಳ ಮೂಲಕ Nice Company ಯನ್ನು ಖರೀದಿಸಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಲು ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು. ಈ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ವಾರ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ನೈಸ್ ಸಂಸ್ಥೆಯ ಅಕ್ರಮಗಳಲ್ಲಿ ರಾಜ್ಯದ ಹಾಲಿ ಮುಖ್ಯಮಂತ್ರಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ನೈಸ್ ಕಂಪನಿಯನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.

‘ಬೇನಾಮಿ ಕಂಪನಿಗಳ ಮೂಲಕ ವ್ಯವಹಾರ’

ನೈಸ್ ಯೋಜನೆಯನ್ನು ಯಾರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಮತ್ತು ಈ ವ್ಯವಹಾರದಲ್ಲಿ ಬೇನಾಮಿ ಕಂಪನಿಗಳ ಮೂಲಕ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಮಾಹಿತಿ ತಮ್ಮ ಬಳಿ ಇದೆ ಎಂದು ಕುಮಾರಸ್ವಾಮಿ ಹೇಳಿದರು.

ನೈಸ್ ಯೋಜನೆಗೂ ಮುಖ್ಯಮಂತ್ರಿಗೂ ಇರುವ ಸಂಬಂಧವೇನು? ನೈಸ್ ಸಂಸ್ಥೆಯೊಂದಿಗೆ ಯಾವುದೇ ಒಡಂಬಡಿಕೆ ಇದೆಯೇ? ಕಂಪನಿಯ ಮಾಲೀಕರೊಂದಿಗೆ ಯಾವ ರೀತಿಯ ಸಂಬಂಧ ಮತ್ತು ವ್ಯವಹಾರಗಳಿವೆ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ತಮ್ಮ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕುಮಾರಸ್ವಾಮಿ ಪುನರುಚ್ಚರಿಸಿದರು. ತಮ್ಮ ಬಳಿ ಯಾವುದೇ ಬೇನಾಮಿ ಆಸ್ತಿ ಇದ್ದರೆ ಅದನ್ನು ಬಹಿರಂಗಪಡಿಸುವಂತೆ ಅವರು ಸವಾಲು ಹಾಕಿದರು.

‘ಮುಂದಿನ ವಾರ ದಾಖಲೆ ಬಿಡುಗಡೆ’

ನೈಸ್ ಯೋಜನೆಗೆ ಸಂಬಂಧಿಸಿದಂತೆ ತಾವು ಕೇವಲ ರಾಜಕೀಯ ಆರೋಪ ಮಾಡುತ್ತಿಲ್ಲ. ತಮ್ಮ ಬಳಿ ದಾಖಲೆಗಳಿದ್ದು, ಮುಂದಿನ ವಾರ ಅವುಗಳನ್ನು ಜನರ ಮುಂದಿಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನೈಸ್ ಯೋಜನೆಯಲ್ಲಿ ರೈತರ ಭೂಮಿ, ಒಪ್ಪಂದದ ನಿಯಮಗಳು ಹಾಗೂ ಸಂಸ್ಥೆಯ ವ್ಯವಹಾರಗಳ ಕುರಿತು ಈಗಾಗಲೇ ಜೆಡಿಎಸ್ ಸರ್ಕಾರದ ಗಮನ ಸೆಳೆದಿರುವ ಬೆನ್ನಲ್ಲೇ ಕುಮಾರಸ್ವಾಮಿ ಅವರ ಹೊಸ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ.

ಆದರೆ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕ್ರಿಯೆ ಈ ವರದಿ ವೇಳೆಗೆ ಲಭ್ಯವಾಗಿಲ್ಲ. ಮುಂದಿನ ವಾರ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ಕುತೂಹಲ ಮೂಡಿಸಿದೆ.

Continue Reading

Trending