Connect with us

ದೇಶ

ಮೈಸೂರಿನಲ್ಲಿ PM Narendra Modi : ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟನೆ

Published

on

ಮೈಸೂರು:PM Narendra Modi ಅವರು ಶನಿವಾರ ಮೈಸೂರಿಗೆ ಭೇಟಿ ನೀಡಿ, ನಗರದ Rama Krishna Ashram ದಲ್ಲಿ ನಿರ್ಮಿಸಲಾದ ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಈ ವೇಳೆ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ಬಿಲ್ವಪತ್ರೆ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನೂ ನೀಡಿದರು.

ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿನ ಮಂಡಕಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರು ಅದ್ದೂರಿ ಸ್ವಾಗತ ಕೋರಿದರು. ನಂತರ ಓವಲ್ ಮೈದಾನಕ್ಕೆ ತೆರಳಿ ಅಲ್ಲಿಂದ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದರು.

ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೂಗುಚ್ಛ ನೀಡಿ ಬರಮಾಡಿಕೊಂಡರು. ಆಶ್ರಮದತ್ತ ಸಾಗುವ ಮಾರ್ಗದುದ್ದಕ್ಕೂ ರಸ್ತೆಯ ಬದಿಯಲ್ಲಿ ನಿಂತಿದ್ದ ಜನರು ಪ್ರಧಾನಿ ಪರ ಘೋಷಣೆಗಳನ್ನು ಕೂಗಿ ಆತ್ಮೀಯ ಸ್ವಾಗತ ಕೋರಿದರು.

ರಾಮಕೃಷ್ಣ ಆಶ್ರಮದಲ್ಲಿ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪೂಜೆ ಸಲ್ಲಿಸಿ, ನೂತನವಾಗಿ ನಿರ್ಮಿಸಲಾದ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಬಳಿಕ ಆಶ್ರಮದ ಆವರಣದಲ್ಲಿ ಬಿಲ್ವಪತ್ರೆ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.

ಸ್ಮಾರಕ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಆಶ್ರಮದೊಳಗೆ ಕೆಲಕಾಲ ಧ್ಯಾನದಲ್ಲಿ ತೊಡಗಿದರು. ಬಳಿಕ ಆಶ್ರಮದ ಸ್ವಾಮೀಜಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಆಶ್ರಮದ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ಮಾಹಿತಿ ಪಡೆದರು.

ಮೈಸೂರಿನ ಈ ಭೇಟಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು, ವಿವೇಕಾನಂದರ ಆದರ್ಶಗಳನ್ನು ಯುವಜನತೆಗೆ ತಲುಪಿಸುವ ನಿಟ್ಟಿನಲ್ಲಿ ನಿರ್ಮಿಸಲಾದ ವಿವೇಕ ಸ್ಮಾರಕ ಪ್ರಮುಖ ಆಕರ್ಷಣೆಯಾಗಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

LPG ದರದಲ್ಲಿ ಬಿಗ್ ಶಾಕ್! 19 ಕೆಜಿ ಕಮರ್ಷಿಯಲ್ ಸಿಲಿಂಡರ್ ₹209 ಅಗ್ಗ; ಹೋಟೆಲ್‌ಗಳಿಗೆ ಸಿಹಿ ಸುದ್ದಿ

Published

on

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ (LPG) ಸಿಲಿಂಡರ್ ಬಳಸುವ ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಟರಿಂಗ್ ಹಾಗೂ ಇತರೆ ವ್ಯಾಪಾರಿಗಳಿಗೆ ಆಗಸ್ಟ್ 1ರಂದು ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ದರವನ್ನು ₹209ರವರೆಗೆ ಇಳಿಕೆ ಮಾಡಿವೆ. ಆದರೆ ಗೃಹಬಳಕೆಯ 14.2 ಕೆಜಿ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ದೆಹಲಿ ಹಾಗೂ ಕೋಲ್ಕತ್ತಾದಲ್ಲಿ ಹೊಸ ದರ ಜಾರಿಯಾಗಿದೆ. ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ದರ ₹202 ಇಳಿಕೆಯಾಗಿದ್ದು, ಜುಲೈನಲ್ಲಿ ₹2,930 ಇದ್ದ ದರ ಈಗ ₹2,728ಕ್ಕೆ ಇಳಿದಿದೆ. ಕೋಲ್ಕತ್ತಾದಲ್ಲಿ ₹209 ಕಡಿತವಾಗಿದ್ದು, ಹೊಸ ದರ ₹2,873 ಆಗಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ LPG ದರದಲ್ಲಿ ಭಾರೀ ಏರಿಕೆ ಕಂಡುಬಂದಿತ್ತು. ಫೆಬ್ರವರಿಯಿಂದ ಜೂನ್‌ವರೆಗೆ 19 ಕೆಜಿ ಸಿಲಿಂಡರ್ ಬೆಲೆ ಸುಮಾರು ₹1,373 ಹೆಚ್ಚಾಗಿ ₹1,740ರಿಂದ ₹3,113ರವರೆಗೆ ಏರಿಕೆಯಾಗಿತ್ತು.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸ್ಥಿರವಾಗುತ್ತಿರುವ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಸತತ ಎರಡನೇ ತಿಂಗಳೂ ವಾಣಿಜ್ಯ LPG ದರವನ್ನು ಇಳಿಕೆ ಮಾಡಿವೆ. ಈ ಕ್ರಮದಿಂದ ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಟರಿಂಗ್ ಉದ್ಯಮ ಸೇರಿದಂತೆ ಕಮರ್ಷಿಯಲ್ ಬಳಕೆದಾರರಿಗೆ ವೆಚ್ಚದ ಹೊರೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ನಿರೀಕ್ಷೆಯಿದೆ.

ಆದರೆ ಸಾಮಾನ್ಯ ಗ್ರಾಹಕರಿಗೆ ಬಳಸುವ ಗೃಹಬಳಕೆಯ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿರುವುದರಿಂದ ಮನೆ ಬಳಕೆದಾರರಿಗೆ ತಕ್ಷಣದ ಲಾಭ ದೊರೆಯುವುದಿಲ್ಲ. ಮುಂದಿನ ದಿನಗಳಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯ ಬೆಳವಣಿಗೆ ಆಧರಿಸಿ LPG ದರಗಳಲ್ಲಿ ಮತ್ತಷ್ಟು ಬದಲಾವಣೆ ಆಗುವ ಸಾಧ್ಯತೆಯಿದೆ.

Continue Reading

ರಾಜ್ಯ

‘ಮಾತಲ್ಲ, ಕೆಲಸ!’ ಯಶವಂತಪುರದಲ್ಲಿ MLA S.T.SomaShekhar ಮತ್ತೊಂದು ಜನಪರ ಹೆಜ್ಜೆ

Published

on

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್‌ನ ಎನ್.ಪಿ.ಎಸ್. ಶಾಲೆ ಪಕ್ಕದಲ್ಲಿರುವ ಬಿಡಿಎ ಜಾಗವನ್ನು ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್. ಪೇಟೆ ಕೃಷ್ಣ ಅವರ ಸ್ಮರಣಾರ್ಥ ಸಾರ್ವಜನಿಕ ಆಟದ ಮೈದಾನವಾಗಿ ಅಭಿವೃದ್ಧಿಪಡಿಸಲಾಗಿದ್ದು, MLA S.T.SomaShekhar ಲೋಕಾರ್ಪಣೆ ಮಾಡಿದರು.

ಬಳಿಕ ನಡೆದ ಬೃಹತ್ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ MLA S.T.SomaShekhar, ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹರಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಜನರ ಸೇವಕರಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಶಿವನಪಾಳ್ಯ ವಾರ್ಡ್‌ಗೆ ₹12 ಕೋಟಿ ಅನುದಾನ

ಶಿವನಪಾಳ್ಯ ವಾರ್ಡ್‌ನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ₹12 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ತಿಳಿಸಿದರು. ಮೂರು ಪ್ರಮುಖ ರಸ್ತೆಗಳಿಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ವಿದ್ಯುತ್ ಕಂಬಗಳಿಗೆ ಎಲ್‌ಇಡಿ ದೀಪ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಕ್ಷೇತ್ರದ ಎಲ್ಲಾ ವಾರ್ಡ್‌ಗಳಿಗೆ ಎರಡು ದಿನಕ್ಕೊಮ್ಮೆ ಕಾವೇರಿ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ರೈಲ್ವೆ ಸಚಿವ ವಿ. ಸೋಮಣ್ಣಗೆ ಅಭಿನಂದನೆ

ಕ್ಷೇತ್ರದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕರಿಸುತ್ತಿರುವ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಶಾಸಕ ಎಸ್.ಟಿ. ಸೋಮಶೇಖರ್ ಕೃತಜ್ಞತೆ ಸಲ್ಲಿಸಿದರು. ರಾಮೋಹಳ್ಳಿ, ಚಳ್ಳೆಘಟ್ಟ, ದುಬಾಸಿಪಾಳ್ಯ ಕೆಳಸೇತುವೆ, ಕೆಂಗೇರಿ-ಮೈಸೂರು ರಸ್ತೆ ಮೇಲ್ಸೇತುವೆ ಹಾಗೂ ಕೆಂಗೇರಿ ಸಂಪರ್ಕ ಸೇತುವೆಗಳ ಅಗಲೀಕರಣ ಸೇರಿದಂತೆ ಹಲವು ರೈಲ್ವೆ ಯೋಜನೆಗಳಿಗೆ ಸ್ಪಂದಿಸಿರುವುದಾಗಿ ಅವರು ತಿಳಿಸಿದರು.

ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಜನಸ್ಪಂದನ ಕಾರ್ಯಕ್ರಮದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್, ಕಂದಾಯ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಂಬಂಧಿತ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲೇ ಹಲವು ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಸೂಚನೆ ನೀಡಲಾಯಿತು.

ಕುಟುಂಬದಿಂದ ಅಭಿನಂದನೆ

ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ಧರ್ಮಪತ್ನಿ ಶ್ರೀಮತಿ ಇಂದಿರಾ, ಐದು ವರ್ಷಗಳ ನಂತರವೂ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಕೆಲಸ ಮಾಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ಹಾಗೂ ಕೆಂಗೇರಿ ಹೋಬಳಿಯ ನಾಗರಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಿವನಪಾಳ್ಯ ವಾರ್ಡ್ ಸಂಭಾವ್ಯ ಅಭ್ಯರ್ಥಿ ಸವಿತಾ ಜಿ. ಮಹೇಶ್, ವಾರ್ಡ್ ಅಧ್ಯಕ್ಷ ಕೆ.ವೈ. ಕೃಷ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading

ಕ್ರೀಡೆ

CWG 2026: Jasmine Lamboria ಯಾ ಚಿನ್ನ; ಭಾರತಕ್ಕೆ ಸತತ 2ನೇ ಗೋಲ್ಡ್

Published

on

ನವದೆಹಲಿ: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಬಾಕ್ಸರ್ Jasmine Lamboria ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ 57 ಕೆಜಿ ವಿಭಾಗದ ಬಾಕ್ಸಿಂಗ್ ಫೈನಲ್ ಪಂದ್ಯದಲ್ಲಿ ಉತ್ತರ ಐರ್ಲೆಂಡ್‌ನ ಮೈಕೆಲಾ ವಾಲ್ಷ್ ಅವರನ್ನು 5-0 ಅಂತರದಿಂದ ಮಣಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ಇದಕ್ಕೂ ಕೆಲವೇ ನಿಮಿಷಗಳ ಮೊದಲು 54 ಕೆಜಿ ವಿಭಾಗದಲ್ಲಿ ಪ್ರೀತಿ ಪನ್ವಾರ್ ಚಿನ್ನ ಗೆದ್ದಿದ್ದರು. ಹೀಗಾಗಿ ಭಾರತ ಬಾಕ್ಸಿಂಗ್‌ನಲ್ಲಿ ಸತತ ಎರಡು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.

ಭಾರತದ ಪದಕ ಬೇಟೆಗೆ ಮತ್ತಷ್ಟು ಬಲ

ಜಾಸ್ಮಿನ್ ಲಂಬೋರಿಯಾ ಅವರ ಚಿನ್ನದೊಂದಿಗೆ ಭಾರತದ ಚಿನ್ನದ ಪದಕಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಪದಕಗಳ ಪಟ್ಟಿಯಲ್ಲಿ ಭಾರತ 6ನೇ ಸ್ಥಾನಕ್ಕೆ ಏರಿದೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಬಾಕ್ಸರ್‌ಗಳ ಅದ್ಭುತ ಪ್ರದರ್ಶನಕ್ಕೆ ಈ ಗೆಲುವು ಮತ್ತೊಂದು ಗರಿ ಮೂಡಿಸಿದೆ.

ಎರಡನೇ ಕಾಮನ್‌ವೆಲ್ತ್ ಪದಕ

ಜಾಸ್ಮಿನ್ ಲಂಬೋರಿಯಾ ಅವರಿಗೆ ಇದು ಎರಡನೇ ಕಾಮನ್‌ವೆಲ್ತ್ ಗೇಮ್ಸ್ ಪದಕವಾಗಿದೆ. 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ಲೈಟ್‌ವೇಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಈಗ ಚಿನ್ನ ಗೆಲ್ಲುವ ಮೂಲಕ ತಮ್ಮ ಸಾಧನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಮಿಂಚಿದ್ದ ಜಾಸ್ಮಿನ್

2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾಸ್ಮಿನ್, ಫೈನಲ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪೋಲೆಂಡ್‌ನ ಜೂಲಿಯಾ ಸ್ಜೆರೆಮೆಟಾ ಅವರನ್ನು ಸೋಲಿಸಿ ವಿಶ್ವದ ಗಮನ ಸೆಳೆದಿದ್ದರು.

ಕ್ರೀಡಾ ಪರಂಪರೆಯ ಕುಟುಂಬ

ಜಾಸ್ಮಿನ್ ಅವರ ತಂದೆ ಜೈವೀರ್ ಲಂಬೋರಿಯಾ ಗೃಹರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮುತ್ತಜ್ಜ ಹವಾ ಸಿಂಗ್ ಭಾರತದ ಹೆಸರಾಂತ ಹೆವಿವೇಯ್ಟ್ ಬಾಕ್ಸರ್ ಆಗಿದ್ದು, ಎರಡು ಏಷ್ಯನ್ ಗೇಮ್ಸ್ ಚಿನ್ನದ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದರು. ಆ ಕ್ರೀಡಾ ಪರಂಪರೆಯನ್ನು ಜಾಸ್ಮಿನ್ ಇದೀಗ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

Continue Reading

Trending