Connect with us

ದೇಶ

ಜೈರಾಮ್ ರಮೇಶ್‌ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”

Published

on

ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?” ಎಂದು ತ್ರಿಸದಸ್ಯ ಪೀಠ ಕಿಡಿಕಾರಿತು.

ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ನ್ಯಾ. ಸೂರ್ಯಕಾಂತ್, ನ್ಯಾ. ಜಾಯ್‌ಮಾಲ್ಯ ಬಾಗ್ಚಿ ಹಾಗೂ ನ್ಯಾ. ಉಜ್ಜಲ್ ಭುಯಾನ್ ಇದ್ದರು. ಪರಿಸರ ಪರವಾನಿಗೆಯನ್ನು ಪೂರ್ವ ಅನ್ವಯವಾಗುವಂತೆ (Retrospective Environmental Clearance) ನೀಡುವ ಕ್ರಮವನ್ನು ಪ್ರಶ್ನಿಸಿ ಜೈರಾಮ್ ರಮೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿ ಸ್ವೀಕರಿಸಲು ನಿರಾಕರಣೆ

ವಿಚಾರಣೆ ವೇಳೆ ಪೀಠ, ಈ ಅರ್ಜಿ ಕೇಂದ್ರ ಸರ್ಕಾರದ ಕುಂದುಕೊರತೆಯನ್ನು ಹೈಲೆಟ್ ಮಾಡುವ ಬದಲು ಸಾರ್ವಜನಿಕ ಗಮನ ಸೆಳೆಯಲು ಸಲ್ಲಿಸಿದಂತಿದೆ ಎಂದು ಅಭಿಪ್ರಾಯಪಟ್ಟಿತು. ನವೆಂಬರ್ 2025ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ (ಫೆ.12) ಸ್ವೀಕರಿಸಲು ನಿರಾಕರಿಸಿತು.

“ದಂಡ ಎದುರಿಸಲು ಸಿದ್ದರಾಗಿ” ಎಚ್ಚರಿಕೆ

“ತೀರ್ಪಿನ ವಿರುದ್ಧ ರಿಟ್ ಅರ್ಜಿ ಯಾಕೆ? ಮರುಪರಿಶೀಲನಾ ಅರ್ಜಿ (Review Petition) ಸಲ್ಲಿಸಬಹುದು ಅಲ್ಲವೇ? ರಿಟ್ ಮೂಲಕ ಮರುಪರಿಶೀಲನೆ ಸಾಧ್ಯವಿಲ್ಲ ಎಂಬುದು ತಿಳಿದಿಲ್ಲವೇ? ದಂಡ ಎದುರಿಸಲು ಸಿದ್ದರಾಗಿ” ಎಂದು ನ್ಯಾ. ಸೂರ್ಯಕಾಂತ್ ಎಚ್ಚರಿಸಿದರು.

ನ್ಯಾಯಾಲಯದ ಎಚ್ಚರಿಕೆಯ ಬಳಿಕ ಜೈರಾಮ್ ರಮೇಶ್ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ವಿನಂತಿಸಿಕೊಂಡರು. ನ್ಯಾಯಪೀಠ ಅದಕ್ಕೆ ಅನುಮತಿ ನೀಡಿ, ಕಾನೂನಿನ ಪ್ರಕಾರ ಲಭ್ಯವಿರುವ ಪರಿಹಾರವನ್ನು ಪಡೆಯುವಂತೆ ಸೂಚಿಸಿತು.


ಪ್ರಕರಣದ ಹಿನ್ನೆಲೆ

ಜೈರಾಮ್ ರಮೇಶ್ ಯಾವುದೇ ಯೋಜನೆ ಆರಂಭವಾದ ನಂತರ ಪರಿಸರ ಪರವಾನಿಗೆ ನೀಡುವ ಕ್ರಮವನ್ನು ಪ್ರಶ್ನಿಸಿದ್ದರು. ಈ ರೀತಿಯ ಅನುಮತಿ ಕಾನೂನುಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ವಾದಿಸಿದ್ದರು.

ಕೇಂದ್ರ ಸರ್ಕಾರದ ನಿಯಮ ಏನು?

  • 2006ರಲ್ಲಿ ಯೋಜನೆ ಆರಂಭಿಸುವ ಮೊದಲು ಪರಿಸರ ಪರವಾನಿಗೆ ಕಡ್ಡಾಯಗೊಳಿಸಲಾಗಿತ್ತು.
  • 2017 ಮತ್ತು 2021ರ ಅಧಿಸೂಚನೆಗಳ ಮೂಲಕ ಕೆಲವು ಯೋಜನೆಗಳಿಗೆ ಷರತ್ತುಬದ್ದ ಪೂರ್ವಾನ್ವಯ ಅನುಮತಿ ಅವಕಾಶ ನೀಡಲಾಗಿತ್ತು.
  • ಮೇ 2025ರಲ್ಲಿ ಈ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
  • ಆದರೆ ನವೆಂಬರ್ 2025ರಲ್ಲಿ CREDAI ಅರ್ಜಿಯ ವಿಚಾರಣೆ ವೇಳೆ ಹಿಂದಿನ ತೀರ್ಪಿನಲ್ಲಿ ಸಡಿಲಿಕೆ ನೀಡಲಾಗಿತ್ತು.

ಈ ಮರುಪರಿಶೀಲಿತ ತೀರ್ಪನ್ನೇ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Liver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ

Published

on

By

ಬೆಂಗಳೂರು: ಯಕೃತ್ತಿನಲ್ಲಿ ಕಂಡುಬರುವ ಗಂಟು, ಗೆಡ್ಡೆ ಹಾಗೂ ಅಸಹಜ ಬೆಳವಣಿಗೆಗಳಿಗೆ ಸಮನ್ವಯದ ತಪಾಸಣೆ, ನಿಖರ ರೋಗನಿರ್ಣಯ ಮತ್ತು ಸಮಗ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಫೋರ್ಟಿಸ್ ಹೆಲ್ತ್‌ಕೇರ್ ಜಾಲದ ಭಾಗವಾಗಿರುವ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಲಾಗಿದೆ.

ರೋಗಿಗಳು ವಿವಿಧ ವೈದ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಒಂದೇ ರೀತಿಯ ಪರೀಕ್ಷೆಗಳನ್ನು ಪುನರಾವರ್ತಿಸುವ ಅಗತ್ಯವನ್ನು ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ. ಯಕೃತ್ತಿನ ತಜ್ಞರು, ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ತಜ್ಞರು, ಜಠರ-ಕರುಳಿನ ತಜ್ಞರು, ರೇಡಿಯಾಲಜಿಸ್ಟ್‌ಗಳು, ಕ್ಯಾನ್ಸರ್ ತಜ್ಞರು, ರೋಗಶಾಸ್ತ್ರ ತಜ್ಞರು ಹಾಗೂ ಪೌಷ್ಟಿಕ ಆಹಾರ ತಜ್ಞರು ಒಂದೇ ತಂಡವಾಗಿ ರೋಗಿಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ವೈದ್ಯಕೀಯ ಜಠರರೋಗ ಶಾಸ್ತ್ರ, ಹೆಪಟಾಲಜಿ ಮತ್ತು ಸುಧಾರಿತ ಎಂಡೋಸ್ಕೋಪಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಲಹೆಗಾರ ಡಾ. ಆದರ್ಶ್ ಸಿ.ಕೆ. ಮಾತನಾಡಿ, ನಿಯಮಿತ ತಪಾಸಣೆ ವೇಳೆ ಯಕೃತ್ತಿನ ಗೆಡ್ಡೆಗಳು ಮತ್ತು ದ್ರವ ತುಂಬಿದ ಚೀಲಗಳು ಆಕಸ್ಮಿಕವಾಗಿ ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ. ಇವುಗಳಲ್ಲಿ ಅನೇಕವು ಅಪಾಯಕಾರಿಯಲ್ಲದಿದ್ದರೂ, ಕೆಲವು ಯಕೃತ್ತಿನ ಕಾಯಿಲೆ ಅಥವಾ ಆರಂಭಿಕ ಹಂತದ ಕ್ಯಾನ್ಸರ್‌ನ ಸೂಚನೆಯಾಗಿರಬಹುದು. ಹೀಗಾಗಿ ಯಾವ ಗೆಡ್ಡೆಗೆ ಚಿಕಿತ್ಸೆ ಬೇಕು ಮತ್ತು ಯಾವುದನ್ನು ಮೇಲ್ವಿಚಾರಣೆ ಮಾಡಿದರೆ ಸಾಕು ಎಂಬುದನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ ಎಂದು ಹೇಳಿದ್ದಾರೆ.

ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಹೇಶ್ ಗೋಪಸೆಟ್ಟಿ, ಚಿಕಿತ್ಸೆಯ ನಿರ್ಧಾರವು ಗೆಡ್ಡೆಯ ಗಾತ್ರ ಮತ್ತು ಸ್ಥಳಕ್ಕೆ ಮಾತ್ರ ಸೀಮಿತವಾಗಿರದೆ ಯಕೃತ್ತಿನ ಕಾರ್ಯಕ್ಷಮತೆ ಹಾಗೂ ರೋಗಿಯ ಒಟ್ಟಾರೆ ಆರೋಗ್ಯವನ್ನೂ ಆಧರಿಸಿರಬೇಕು ಎಂದು ತಿಳಿಸಿದ್ದಾರೆ. ಸಮಗ್ರ ಮೌಲ್ಯಮಾಪನದಿಂದ ಸೂಕ್ತ ಚಿಕಿತ್ಸೆಯನ್ನು ಆಯ್ಕೆ ಮಾಡುವುದರ ಜೊತೆಗೆ, ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಯನ್ನು ತಪ್ಪಿಸಬಹುದು ಎಂದಿದ್ದಾರೆ.

ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಗಲಿ ಮಾತನಾಡಿ, ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಿರುವುದು ರೋಗಿ ಕೇಂದ್ರಿತ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದ ಆರೋಗ್ಯ ಸೇವೆ ಒದಗಿಸುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಪರಿಣತಿಯನ್ನು ಒಂದೇ ವ್ಯವಸ್ಥೆಯಲ್ಲಿ ಒದಗಿಸುವ ಮೂಲಕ ಚಿಕಿತ್ಸಾ ಫಲಿತಾಂಶ ಮತ್ತು ರೋಗಿಗಳ ಅನುಭವ ಸುಧಾರಿಸುವುದು ಕ್ಲಿನಿಕ್‌ನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಯಕೃತ್ತಿನ ಚೀಲಗಳು, ರಕ್ತನಾಳದ ಗೆಡ್ಡೆಗಳು, ಫೋಕಲ್ ನೊಡ್ಯುಲರ್ ಹೈಪರ್‌ಪ್ಲಾಸಿಯಾ, ಯಕೃತ್ತಿನ ಕ್ಯಾನ್ಸರ್, ದೇಹದ ಇತರ ಭಾಗಗಳಿಂದ ಯಕೃತ್ತಿಗೆ ಹರಡಿದ ಕ್ಯಾನ್ಸರ್ ಹಾಗೂ ಸಂಕೀರ್ಣ ಯಕೃತ್ತಿನ ಗೆಡ್ಡೆಗಳಿಗೆ ಇಲ್ಲಿ ಸಮಗ್ರ ಮೌಲ್ಯಮಾಪನ ಮತ್ತು ಚಿಕಿತ್ಸಾ ಸಲಹೆ ದೊರೆಯಲಿದೆ. ರೋಗನಿರ್ಣಯದ ನಿಖರತೆ ಹೆಚ್ಚಿಸುವುದು ಮತ್ತು ಚಿಕಿತ್ಸೆಯಲ್ಲಿನ ವಿಳಂಬ ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಗುರಿಯಾಗಿದೆ.

Continue Reading

ದೇಶ

Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್

Published

on

By

ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.

ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.

ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು

ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.

ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿದ ಅಧಿಕಾರಿಗಳು

ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.

ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು

ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.

ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

ರಾಜ್ಯ

Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ

Published

on

By

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಫಲವತ್ತಾದ ಜಮೀನು ಕೈಗಾರಿಕೆಗೆ?

ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.

ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?

ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ

Continue Reading

Trending