Connect with us

ರಾಜ್ಯ

₹15 ಸಾವಿರ ಸಿಗುತ್ತದೆ ಎಂದು ತಲೆ ಬೋಳಿಸಿಕೊಂಡ ಮಹಿಳೆಯರು! Tamil Nadu ನಲ್ಲಿ ಬೆಚ್ಚಿಬೀಳಿಸಿದ ಹೊಸ ವಂಚನೆ

Published

on

ಚೆನ್ನೈ: Government Scheme ಹೆಸರಿನಲ್ಲಿ ಜನರನ್ನು ವಂಚಿಸುವ ಘಟನೆಗಳು ಹೆಚ್ಚಾಗುತ್ತಿರುವ ನಡುವೆಯೇ, ತಮಿಳುನಾಡಿನ Salem ಜಿಲ್ಲೆಯಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಅಚ್ಚರಿ ಮೂಡಿಸಿದೆ. ಅಪರಿಚಿತ ವ್ಯಕ್ತಿಯೊಬ್ಬ ತಾನು ಸರ್ಕಾರಿ ಅಧಿಕಾರಿ ಎಂದು ಪರಿಚಯಿಸಿಕೊಂಡು, ಹೊಸ ಸಾಂಕ್ರಾಮಿಕ ರೋಗದಿಂದ ರಕ್ಷಿಸಿಕೊಳ್ಳಲು ತಲೆ ಬೋಳಿಸಿಕೊಳ್ಳಬೇಕು ಎಂದು ನಂಬಿಸಿ, ಹಾಗೆ ಮಾಡಿದರೆ ಸರ್ಕಾರದಿಂದ ₹15 Thousand ಪ್ರೋತ್ಸಾಹಧನ ಸಿಗುತ್ತದೆ ಎಂದು ಸುಳ್ಳು ಭರವಸೆ ನೀಡಿ ಮೂವರು ಮಹಿಳೆಯರನ್ನು ವಂಚಿಸಿದ್ದಾನೆ.

ಈ ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ಬೆಚ್ಚಿಬಿದ್ದಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಅಧಿಕಾರಿ ಎಂದು ಕರೆ ಮಾಡಿ ವಿಶ್ವಾಸ ಗಳಿಸಿದ ವಂಚಕ

ಮಹಿಳೆಯೊಬ್ಬರಿಗೆ ಕರೆ ಮಾಡಿದ ವಂಚಕ, ಅವರ ಹೆಸರು ಹಾಗೂ ಕುಟುಂಬದ ವಿವರಗಳನ್ನು ಸರಿಯಾಗಿ ಹೇಳಿ ಮೊದಲು ವಿಶ್ವಾಸ ಗಳಿಸಿದ್ದಾನೆ. ಬಳಿಕ ಕೋವಿಡ್-19 ಮಾದರಿಯ ಹೊಸ ಸಾಂಕ್ರಾಮಿಕ ರೋಗವೊಂದು ಕೂದಲಿನ ಮೂಲಕ ಹರಡುತ್ತಿದೆ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ.

ರೋಗದಿಂದ ರಕ್ಷಿಸಿಕೊಳ್ಳಲು ತಲೆ ಬೋಳಿಸಿಕೊಳ್ಳುವುದು ಅಗತ್ಯವಾಗಿದ್ದು, ಕೆಲವು ದೇಶಗಳಲ್ಲಿ ಜನರು ಈಗಾಗಲೇ ಈ ಕ್ರಮ ಅನುಸರಿಸುತ್ತಿದ್ದಾರೆ ಎಂದು ಹೇಳಿ ಮಹಿಳೆಯರನ್ನು ನಂಬಿಸಿದ್ದಾನೆ.

₹15 ಸಾವಿರ, ವಿದ್ಯಾರ್ಥಿನಿಯರಿಗೆ ₹45 ಸಾವಿರ, ಲ್ಯಾಪ್‌ಟಾಪ್ ಆಮಿಷ

ಇಷ್ಟಕ್ಕೆ ನಿಲ್ಲದ ವಂಚಕ, ತಮಿಳುನಾಡು ಸರ್ಕಾರ ವಿಶೇಷ ಯೋಜನೆ ಘೋಷಿಸಿದ್ದು, ತಲೆ ಬೋಳಿಸಿಕೊಂಡ ಮಹಿಳೆಯರಿಗೆ ₹15 ಸಾವಿರ, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿನಿಯರಿಗೆ ₹45 ಸಾವಿರ ಮತ್ತು ಉಚಿತ ಲ್ಯಾಪ್‌ಟಾಪ್, ಪುರುಷರಿಗೆ ₹6 ಸಾವಿರ ನೀಡಲಾಗುತ್ತದೆ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ.

ಗ್ರಾಮದಲ್ಲಿ ಸೀಮಿತ ಸಂಖ್ಯೆಯ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದ್ದು, ಈ ವಿಷಯವನ್ನು ಸಂಬಂಧಿಕರು ಮತ್ತು ಗ್ರಾಮಸ್ಥರಿಗೂ ತಿಳಿಸಲು ಸೂಚಿಸಿದ್ದಾನೆ.

20 ಮಂದಿ ಸಿದ್ಧತೆ, ಮೂವರು ಮಹಿಳೆಯರು ತಲೆ ಬೋಳಿಸಿಕೊಂಡರು

ಮುಂದಿನ ದಿನ ಮಧ್ಯಾಹ್ನ ಅಧಿಕಾರಿಗಳು ಬಂದು ಹಣ ವಿತರಿಸಲಿದ್ದು, ಅದಕ್ಕೂ ಮುನ್ನ ತಲೆ ಬೋಳಿಸಿಕೊಂಡವರಿಗಷ್ಟೇ ಹಣ ಸಿಗುತ್ತದೆ ಎಂದು ಹೇಳಿದ್ದರಿಂದ ಗ್ರಾಮದಲ್ಲಿ ಸುಮಾರು 20 ಮಂದಿ ತಲೆ ಬೋಳಿಸಿಕೊಳ್ಳಲು ಸಿದ್ಧತೆ ನಡೆಸಿದ್ದರು.

ಅವರಲ್ಲಿ ಮೂವರು ಮಹಿಳೆಯರು ನಿಜವಾಗಿಯೂ ತಲೆ ಬೋಳಿಸಿಕೊಂಡಿದ್ದರು.

ಮೊಬೈಲ್ ಸ್ವಿಚ್ ಆಫ್… ಆಗ ಗೊತ್ತಾಯಿತು ಮೋಸ

ಭರವಸೆ ನೀಡಿದ ಹಣದ ಬಗ್ಗೆ ವಿಚಾರಿಸಲು ಮಹಿಳೆಯರು ಮತ್ತೆ ಕರೆ ಮಾಡಿದಾಗ, ವಂಚಕನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಆಗ ತಾವು ಮೋಸ ಹೋಗಿರುವುದು ಅವರಿಗೆ ತಿಳಿದುಬಂದಿದೆ.

ಈ ವಿಷಯ ತಿಳಿದ ಉಳಿದ ಗ್ರಾಮಸ್ಥರು ತಕ್ಷಣವೇ ತಲೆ ಬೋಳಿಸಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಅಧಿಕಾರಿಗಳ ಎಚ್ಚರಿಕೆ

ಈ ಘಟನೆಯ ನಂತರ ಅಧಿಕಾರಿಗಳು ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗೆ ಸಂಬಂಧಿಸಿದ ಮಾಹಿತಿ ಬಂದರೆ, ಅದನ್ನು ಅಧಿಕೃತ ಸರ್ಕಾರಿ ವೆಬ್‌ಸೈಟ್ ಅಥವಾ ಸಂಬಂಧಿತ ಇಲಾಖೆ ಮೂಲಕವೇ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳ ದೂರವಾಣಿ ಕರೆಗಳು, ಸಾಮಾಜಿಕ ಜಾಲತಾಣಗಳ ಸಂದೇಶಗಳು ಅಥವಾ ವದಂತಿಗಳನ್ನು ನಂಬಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಈ ಘಟನೆ, ಸರ್ಕಾರಿ ಯೋಜನೆಗಳ ಹೆಸರಿನಲ್ಲಿ ನಡೆಯುತ್ತಿರುವ ಹೊಸ ರೀತಿಯ ವಂಚನೆಗಳ ಬಗ್ಗೆ ಸಾರ್ವಜನಿಕರು ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂಬ ಸಂದೇಶವನ್ನು ಮತ್ತೊಮ್ಮೆ ನೆನಪಿಸಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ

Published

on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗೆ ಗಾಯ

ಹಲ್ಲೆಯಲ್ಲಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲು, ಇಬ್ಬರ ಬಂಧನ

ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

ದೇಶ

‘Ghazipur ದ ಹೆಸರನ್ನೇ ಹಾಳು ಮಾಡಿದವರು ಯಾರು?’ ಕಾಂಗ್ರೆಸ್-ಎಸ್‌ಪಿ ವಿರುದ್ಧ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ

Published

on

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ Yogi Adityanath ಅವರು ಗುರುವಾರ Ghazipur ಜಿಲ್ಲೆಗೆ ಭೇಟಿ ನೀಡಿ ₹692 Crores ಮೌಲ್ಯದ 268 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು ಹಾಗೂ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಗಾಜಿಪುರದ ಅಭಿವೃದ್ಧಿ, ರಾಷ್ಟ್ರೀಯ ವೀರರ ಗೌರವ ಹಾಗೂ ಇತಿಹಾಸದ ವಿಷಯಗಳನ್ನು ಪ್ರಸ್ತಾಪಿಸುತ್ತಾ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಗಾಜಿಪುರದ ಗುರುತಿನ ಬಿಕ್ಕಟ್ಟಿಗೆ ಯಾರು ಕಾರಣ?’

ಭಾಷಣದ ಆರಂಭದಲ್ಲೇ ಗಾಜಿಪುರದ ಐತಿಹಾಸಿಕ ಕೊಡುಗೆಯನ್ನು ಸ್ಮರಿಸಿದ ಯೋಗಿ, 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಶೌರ್ಯ ಪ್ರದರ್ಶಿಸಿದ ಮಹಾವೀರ ಚಕ್ರ ಪುರಸ್ಕೃತ ಹುತಾತ್ಮ ರಾಮ್ ಉಗ್ರ ಪಾಂಡೆ, ಖ್ಯಾತ ಹಿಂದಿ ಸಾಹಿತಿ ಕುಬೇರನಾಥ್ ರಾಯ್ ಹಾಗೂ ಲೇಖಕ ಗೋಪಾಲರಾಮ್ ಗಹ್ಮರಿ ಅವರಂತಹ ಮಹನೀಯರನ್ನು ಉಲ್ಲೇಖಿಸಿದರು.

“ಇಷ್ಟೊಂದು ಮಹಾನ್ ವ್ಯಕ್ತಿಗಳನ್ನು ನೀಡಿದ ಗಾಜಿಪುರ ಜಿಲ್ಲೆ ಒಂದು ಕಾಲದಲ್ಲಿ ಗುರುತಿನ ಬಿಕ್ಕಟ್ಟಿಗೆ ಸಿಲುಕಿದ್ದು ಏಕೆ? ಜಿಲ್ಲೆಯ ಹೆಸರು ಕೇಳಿದರೆ ಜನ ಹೆದರುವ ಪರಿಸ್ಥಿತಿ ಏಕೆ ನಿರ್ಮಾಣವಾಯಿತು? ಇದಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದ ಅವರು, ಈ ಸ್ಥಿತಿಗೆ ಹಿಂದಿನ ಸರ್ಕಾರಗಳ ಆಡಳಿತವೇ ಕಾರಣ ಎಂದು ಆರೋಪಿಸಿದರು.

‘ರಾಷ್ಟ್ರೀಯ ವೀರರನ್ನು ಮರೆಮಾಡಿ ಆಕ್ರಮಣಕಾರರನ್ನು ವೈಭವೀಕರಿಸಿದರು’

ಯೋಗಿ ಆದಿತ್ಯನಾಥ್, ಹಿಂದಿನ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಸರ್ಕಾರಗಳು ದೇಶಕ್ಕಾಗಿ ಹೋರಾಡಿದ ರಾಷ್ಟ್ರೀಯ ವೀರರಿಗೆ ತಕ್ಕ ಗೌರವ ನೀಡದೆ, ವಿದೇಶಿ ಆಕ್ರಮಣಕಾರರನ್ನು ವೈಭವೀಕರಿಸಿದವು ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ರಾಷ್ಟ್ರೀಯ ನಾಯಕರು ಹಾಗೂ ದೇಶಭಕ್ತರ ಪರಂಪರೆಯನ್ನು ಗೌರವಿಸುತ್ತಿದೆ ಎಂದು ಅವರು ಹೇಳಿದರು.

ಮಹಾರಾಜ ಸುಹೇಲ್ ದೇವ್ ಉದಾಹರಣೆ

ಸುಮಾರು ಸಾವಿರ ವರ್ಷಗಳ ಹಿಂದೆ ಭಾರತಕ್ಕೆ ಬಂದ ಆಕ್ರಮಣಕಾರ ಸಾಲಾರ್ ಮಸೂದ್ ವಿರುದ್ಧ ಹೋರಾಡಿ ಜಯ ಸಾಧಿಸಿದ ಮಹಾರಾಜ ಸುಹೇಲ್ ದೇವ್ ಅವರನ್ನು ಸ್ಮರಿಸಿದ ಯೋಗಿ, “ಕಾಂಗ್ರೆಸ್ ಮತ್ತು ಎಸ್‌ಪಿ ಸರ್ಕಾರಗಳು ಸುಹೇಲ್ ದೇವ್ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಿಲ್ಲ. ಆದರೆ ಆಕ್ರಮಣಕಾರ ಸಾಲಾರ್ ಮಸೂದ್ ಹೆಸರಿನಲ್ಲಿ ಮೇಳಗಳನ್ನು ಆಯೋಜಿಸುತ್ತಿದ್ದವು” ಎಂದು ಟೀಕಿಸಿದರು.

‘ಸಾಲಾರ್ ಮಸೂದ್ ಮೇಳಕ್ಕೆ ಬ್ರೇಕ್’

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಲಾರ್ ಮಸೂದ್ ಹೆಸರಿನ ಮೇಳವನ್ನು ನಿಲ್ಲಿಸಲಾಗಿದೆ ಎಂದು ಯೋಗಿ ಹೇಳಿದರು.

“ಇದೀಗ ಬಹ್ರೈಚ್‌ನಲ್ಲಿ ನಡೆಯುವ ಮೇಳ ಮಹಾರಾಜ ಸುಹೇಲ್ ದೇವ್ ಅವರ ನೆನಪಿನಲ್ಲೇ ನಡೆಯುತ್ತಿದೆ. ಅಲ್ಲದೆ ಅವರ ಭವ್ಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸಲಾಗಿದೆ. ಬಹ್ರೈಚ್‌ನಲ್ಲಿ ಅವರ ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಹಾಗೂ ಅಜಂಘಡದಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ” ಎಂದು ಸರ್ಕಾರದ ಸಾಧನೆಗಳನ್ನು ವಿವರಿಸಿದರು.

₹692 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಗಾಜಿಪುರ ಭೇಟಿಯ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 268 ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳ ಒಟ್ಟು ಮೌಲ್ಯ ₹692 ಕೋಟಿ ಆಗಿದ್ದು, ರಸ್ತೆ, ಮೂಲಸೌಕರ್ಯ, ಕುಡಿಯುವ ನೀರು, ಶಿಕ್ಷಣ ಹಾಗೂ ಸಾರ್ವಜನಿಕ ಸೇವೆಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾಮಗಾರಿಗಳು ಇದರಲ್ಲಿ ಸೇರಿವೆ.

ರಾಜಕೀಯ ಕಾವು ಹೆಚ್ಚಿಸಿದ ಭಾಷಣ

ಯೋಗಿಯ ಈ ಭಾಷಣ ಉತ್ತರ ಪ್ರದೇಶ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜೊತೆಗೆ ಇತಿಹಾಸ, ರಾಷ್ಟ್ರೀಯತೆ ಮತ್ತು ಹಿಂದಿನ ಸರ್ಕಾರಗಳ ಆಡಳಿತವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ವಿರುದ್ಧ ಅವರು ಮಾಡಿದ ಟೀಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

Continue Reading

ಬೆಂಗಳೂರು

Bengaluru ಬಳಿಕ ಬೀದರ್‌ನಲ್ಲೂ COVID ಸೋಂಕು ದೃಢ; ಆರೋಗ್ಯ ಇಲಾಖೆ ಹೈ ಅಲರ್ಟ್, ವದಂತಿಗಳಿಗೆ ಬ್ರೇಕ್

Published

on

ಬೀದರ್: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ (COVID-19) ಕುರಿತು ಆತಂಕ ಮೂಡಿಸುವ ಬೆಳವಣಿಗೆ ನಡೆದಿದೆ. ಬೆಂಗಳೂರು ಬಳಿಕ ಇದೀಗ ಬೀದರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ HIGH ALERT ಘೋಷಿಸಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವು ಆತಂಕಕಾರಿ ಸಂದೇಶಗಳಿಗೆ ಯಾವುದೇ ಅಧಿಕೃತ ಆಧಾರವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅನಾರೋಗ್ಯ ಹಿನ್ನೆಲೆ ಪರೀಕ್ಷೆ

ಮಹಿಳೆಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಅವರ ಮಾದರಿಯನ್ನು (ಸ್ಯಾಂಪಲ್) ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಂಕು ದೃಢವಾದ ತಕ್ಷಣ ಅವರನ್ನು ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BRIMS) ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್

ಪ್ರಕರಣ ಬೆಳಕಿಗೆ ಬಂದ ತಕ್ಷಣ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರಂಭಿಸಿದೆ. ಸೋಂಕಿತೆಯ ಸಂಪರ್ಕಕ್ಕೆ ಬಂದವರ ಪತ್ತೆ, ಆರೋಗ್ಯ ತಪಾಸಣೆ ಹಾಗೂ ಅಗತ್ಯ ಮೇಲ್ವಿಚಾರಣೆಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯ ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿಗೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದ್ದು, ಸೋಂಕಿನ ಹರಡುವಿಕೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ವೈರಲ್ ಸುದ್ದಿಗಳಿಗೆ ಸ್ಪಷ್ಟನೆ

ಈ ಬೆಳವಣಿಗೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಂದು ಆತಂಕಕಾರಿ ಸಂದೇಶ ವೈರಲ್ ಆಗಿದೆ. ಆದರೆ, ಆ ವೈರಲ್ ಮಾಹಿತಿಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಆಧಾರರಹಿತ ಸುದ್ದಿಗಳನ್ನು ಹಂಚಿಕೊಳ್ಳುವುದರಿಂದ ಸಾರ್ವಜನಿಕರಲ್ಲಿ ಅನಗತ್ಯ ಭಯ ಮತ್ತು ಗೊಂದಲ ಉಂಟಾಗುತ್ತದೆ. ಆದ್ದರಿಂದ ಅಧಿಕೃತ ಮಾಹಿತಿಯನ್ನು ಮಾತ್ರ ನಂಬುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸರ್ಕಾರದ ಅಧಿಕೃತ ಮಾಹಿತಿ ಮಾತ್ರ ನಂಬಿ

ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಗಂಭೀರ ಪರಿಸ್ಥಿತಿ ಉಂಟಾದರೆ ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪರಿಶೀಲಿತ ಸಂದೇಶಗಳನ್ನು ನಂಬಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಪಾಲಿಸುವಂತೆ ಸಲಹೆ

ಆರೋಗ್ಯ ಇಲಾಖೆ ಜನರಿಗೆ ಕೆಲವು ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸೂಚಿಸಿದೆ:

  • ಅಗತ್ಯವಿದ್ದಲ್ಲಿ ಮಾಸ್ಕ್ ಧರಿಸಿ.
  • ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ.
  • ಆರೋಗ್ಯ ಸಮಸ್ಯೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
  • ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳಿ.
  • ವದಂತಿಗಳನ್ನು ನಂಬದೆ ಸರ್ಕಾರದ ಅಧಿಕೃತ ಪ್ರಕಟಣೆಗಳನ್ನು ಮಾತ್ರ ಅನುಸರಿಸಿ.

ಪ್ರಸ್ತುತ ಆತಂಕಪಡುವ ಪರಿಸ್ಥಿತಿ ಇಲ್ಲದಿದ್ದರೂ, ಸಾರ್ವಜನಿಕರು ಎಚ್ಚರಿಕೆಯಿಂದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸುವುದು ಉತ್ತಮ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Continue Reading

Trending