Connect with us

ಚುನಾವಣೆ

Trump Assassination Attempt | 48 ಗಂಟೆಯ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಟ್ರಂಪ್‌

Published

on

ವಾಷಿಂಗ್ಟನ್‌: ಶೂಟೌಟ್‌ ನಡೆದ ಎರಡು ದಿನದ ಬಳಿಕ ಮೊದಲ ಬಾರಿಗೆ ಡೊನಾಲ್ಡ್‌ ಟ್ರಂಪ್‌ (Donald Trump) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೋಮವಾರ ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಟ್ರಂಪ್‌ ಭಾಗವಹಿಸಿದರು. ಗುಂಡೇಟಿನಿಂದ ಬಲ ಕಿವಿಗೆ ಗಾಯವಾಗಿದ್ದು ಬ್ಯಾಂಡೇಜ್‌ ಹಾಕಲಾಗಿದೆ. ಟ್ರಂಪ್‌ ಬರುತ್ತಿದ್ದಂತೆ ರಿಪಬ್ಲಿಕನ್‌ ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದರು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ (Republican Party) ಅಭ್ಯರ್ಥಿಯಾಗಿ ಡೊನಾಲ್ಡ್ ಟ್ರಂಪ್ ಅವರನ್ನು ಆಯ್ಕೆ ಮಾಡಲಾಯಿತು. ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಧಾರವನ್ನು ಘೋಷಿಸಲಾಯಿತು. 

2016 ರ ಚುನಾವಣೆಯಲ್ಲಿ ಟ್ರಂಪ್‌ ಅವರು ಹಿಲರಿ ಕ್ಲಿಂಟನ್‌ ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಆದರೆ 2020ರ ಚುನಾವಣೆಯಲ್ಲಿ ಜೋ ಬೈಡನ್‌ ಮುಂದೆ ಟ್ರಂಪ್‌ ಸೋತಿದ್ದರು. ಈಗ ಎರಡನೇ ಬಾರಿ ಜೋ ಬೈಡನ್‌ ಅವರನ್ನು 78 ವರ್ಷದ ಟ್ರಂಪ್‌ ಎದುರಿಸಲಿದ್ದಾರೆ.

ರಿಪಬ್ಲಿಕನ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಜೆಡಿ ವ್ಯಾನ್ಸ್ ಅವರನ್ನು ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ. ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ವ್ಯಾನ್ಸ್, ಭಾರತೀಯ ಸಂಜಾತೆಯಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರಾಜ್ಯದ ಬಟ್ಲರ್‌ ಟೌನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹಿರಂಗ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಥಾಮಸ್ ಕ್ರುಕ್ಸ್ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ಗುಂಡು ಟ್ರಂಪ್ ಬಲ ಕಿವಿಯನ್ನು ಸೀಳಿ, ಕಾರ್ಯಕರ್ತನ ಎದೆಗೆ ನುಗ್ಗಿದೆ. ತಕ್ಷಣವೇ ಟ್ರಂಪ್ ಕೆಳಗೆ ಕೂತು ತಪ್ಪಿಸಿಕೊಂಡಿದ್ದಾರೆ.

ಅರೆಕ್ಷಣದಲ್ಲೇ ಭದ್ರತಾ ಪಡೆಗಳು ಟ್ರಂಪ್ ಸುತ್ತುವರಿದು ರಕ್ಷಣೆ ನೀಡಿವೆ. ಕ್ಷಣಾರ್ಧದಲ್ಲೇ ಅಣತಿ ದೂರದ ಉತ್ಪಾದನಾ ಘಟಕದ ಛಾವಣಿಯ ಮೇಲೆ ಕೂತು ಗುಂಡು ಹಾರಿಸಿದ ಹಂತಕನನ್ನು ಅಮೆರಿಕ ಸ್ನಿಪ್ಪರ್‌ಗಳು ಹೊಡೆದುರುಳಿಸಿವೆ. ಹಂತಕನನ್ನು ಬೆಥೆಲ್ ಪಾರ್ಕ್ನ 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಎಫ್‌ಬಿಐ ಗುರುತಿಸಿದೆ. ಘಟನೆ ಬಳಿಕ ಸಾವರಿಸಿಕೊಂಡ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಸರಣಿ ಟ್ವೀಟ್ ಮಾಡಿ, ನನ್ನ ಬಲಕಿವಿಯ ಮೇಲ್ಭಾಗದಲ್ಲಿ ಗಾಯವಾಗಿದೆ. ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳು ಎಂದಿದ್ದರು.

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

ಚುನಾವಣೆ

Rajasthan ದಲ್ಲಿ ಬಿಜೆಪಿಯ ದರ್ಬಾರ್! 4 ಮಹಾನಗರ ಪಾಲಿಕೆಗಳಲ್ಲಿ ಬಹುಮತ; ಕಾಂಗ್ರೆಸ್‌ಗೆ ಶಾಕ್

Published

on

ಜೈಪುರ: ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಪ್ರದರ್ಶನ ನೀಡಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 10 ಮಹಾನಗರ ಪಾಲಿಕೆಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ.

ರಾಜ್ಯ ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ಎಣಿಕೆ ನಡೆದ 10,244 ವಾರ್ಡ್‌ಗಳ ಪೈಕಿ 10,235 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಒಟ್ಟು 4,179 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ 3,613 ವಾರ್ಡ್‌ಗಳಲ್ಲಿ ಜಯಗಳಿಸಿದೆ.

ಜೈಪುರ, ಉದಯಪುರ, ಕೋಟಾ ಮತ್ತು ಭಿಲ್ವಾರಾ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಬಿಕಾನೇರ್ ಮಹಾನಗರ ಪಾಲಿಕೆಯಲ್ಲಿ ಬಹುಮತ ಗಳಿಸಿದೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಪ್ರಭಾವಿ ಕ್ಷೇತ್ರವೆಂದು ಪರಿಗಣಿಸಲಾಗುವ ಝಾಲಾವಾಡ್ ನಗರ ಪರಿಷತ್ತಿನಲ್ಲಿಯೂ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ.

ಪಕ್ಷೇತರರಿಗೂ ಭರ್ಜರಿ ಬೆಂಬಲ

ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಕೂಡ ಗಮನಾರ್ಹ ಶಕ್ತಿ ಪ್ರದರ್ಶಿಸಿದ್ದಾರೆ. ಒಟ್ಟು 2,273 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ವಿಶೇಷವಾಗಿ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರ ತವರು ಕ್ಷೇತ್ರವಾದ ಭರತ್‌ಪುರ ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ವಾರ್ಡ್‌ಗಳ ಪೈಕಿ 36ರಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದು ಗಮನ ಸೆಳೆದಿದ್ದಾರೆ.

ಇನ್ನು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ 63, ಆಮ್ ಆದ್ಮಿ ಪಕ್ಷ 42, ಸಿಪಿಐ(ಎಂ) 38, ಬಿಎಸ್‌ಪಿ 19 ಹಾಗೂ ಭಾರತ ಆದಿವಾಸಿ ಪಾರ್ಟಿ 8 ವಾರ್ಡ್‌ಗಳಲ್ಲಿ ಗೆಲುವು ದಾಖಲಿಸಿವೆ.

‘ಜನರ ನಂಬಿಕೆಯ ಗೆಲುವು’ ಎಂದ ಸಿಎಂ

ಫಲಿತಾಂಶದ ಬಳಿಕ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲಿನ ಜನರ ನಂಬಿಕೆಗೆ ಸಾಕ್ಷಿ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ, ಬಿಜೆಪಿ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ವಾರ್ಡ್‌ಗಳ ಪುನರ್ವಿಂಗಡಣೆ ಹಾಗೂ ಆಡಳಿತ ಯಂತ್ರ ಮತ್ತು ಪೊಲೀಸರ ದುರುಪಯೋಗದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಗೆ ಮೋದಿ ಅಭಿನಂದನೆ

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಈ ಜನಾದೇಶವು **‘ಡಬಲ್ ಎಂಜಿನ್ ಸರ್ಕಾರದ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀತಿಗಳಿಗೆ ಜನರ ಬೆಂಬಲ’**ವನ್ನು ತೋರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಗೆಲುವು ಸಾಧಿಸಿದ ಅಭ್ಯರ್ಥಿಗಳು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿರುವ ಮೋದಿ, ಈ ಜನಾದೇಶವು ರಾಜಸ್ಥಾನವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶವು ಮುಂಬರುವ ರಾಜ್ಯ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಗೂ ಈ ಫಲಿತಾಂಶ ಮಹತ್ವದ್ದಾಗಿದೆ.

Continue Reading

ಬೆಂಗಳೂರು

Voter List ಯಲ್ಲಿ ಒಂದೇ ಹೆಸರು ಎರಡು ಕಡೆ ಇದೆಯಾ? ಕ್ರಿಮಿನಲ್ ಕೇಸ್‌ ಬಗ್ಗೆ BBMP ಆಯುಕ್ತರ ಎಚ್ಚರಿಕೆ

Published

on

ಬೆಂಗಳೂರು: Voter List ಯಲ್ಲಿ ಒಬ್ಬರ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ನಮೂನೆ-6 ಮತ್ತು 8 ಅರ್ಜಿಗಳ ಮರುಪರಿಶೀಲನೆ

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುತ್ತಿರುವ ನಮೂನೆ-6 ಮತ್ತು ನಮೂನೆ-8 ಅರ್ಜಿಗಳನ್ನು ಕಟ್ಟುನಿಟ್ಟಾಗಿ ಮರುಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಅರ್ಹತೆ ಹೊಂದಿರುವ ಪ್ರಕರಣಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದ ಮತದಾರರು ಹಾಗೂ ತಾಂತ್ರಿಕ ವ್ಯತ್ಯಾಸಗಳು ಕಂಡುಬಂದಿರುವ ಪ್ರಕರಣಗಳಿಗೆ ಚುನಾವಣಾ ಆಯೋಗದ ನಿಯಮಾವಳಿಗಳಂತೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗುತ್ತಿದೆ. ಸಂಬಂಧಪಟ್ಟ ಮತದಾರರು ನಿಗದಿತ ಪ್ರಕ್ರಿಯೆಯಂತೆ ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

237 AEROಗಳ ನೇಮಕ

ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಒಟ್ಟು 237 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು (AERO) ನೇಮಕ ಮಾಡಲಾಗಿದೆ. ಅವರಿಗೆ ಅಗತ್ಯ ತರಬೇತಿಯನ್ನೂ ನೀಡಲಾಗಿದೆ ಎಂದು ಕೆ.ಎನ್. ರಮೇಶ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾರ್ಡ್ ಕಚೇರಿಗಳಲ್ಲಿ ಪ್ರತಿದಿನ ಸುಮಾರು 50ರಿಂದ 60 ಪ್ರಕರಣಗಳ ವಿಚಾರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಸಂಬಂಧಪಟ್ಟವರಿಗೆ ಕನಿಷ್ಠ ಏಳು ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಮೊದಲ ನೋಟಿಸ್‌ನಲ್ಲಿ ನೀಡಿರುವ ದಿನಾಂಕದಂದು ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದವರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗುವುದು. ಅಂತಹವರಿಗೆ ಎರಡನೇ ನೋಟಿಸ್ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯರು, ವಿಶೇಷಚೇತನರಿಗೆ ಮನೆ ಬಾಗಿಲಲ್ಲೇ ಪರಿಶೀಲನೆ

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಯಾವುದೇ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

ಆಸ್ಪತ್ರೆಗೆ ದಾಖಲಾಗಿರುವವರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಅವರಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.

ಬೂತ್ ಮಟ್ಟದ ಅಧಿಕಾರಿ (BLO) ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿ (AERO) ಖುದ್ದಾಗಿ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಆಯುಕ್ತ ಕೆ.ಎನ್. ರಮೇಶ್ ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸುವುದರ ಜೊತೆಗೆ, ಒಂದೇ ವ್ಯಕ್ತಿಯ ಹೆಸರು ಹಲವು ಕಡೆ ದಾಖಲಾಗಿರುವಂತಹ ದೋಷಗಳನ್ನು ಪತ್ತೆಹಚ್ಚಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

Continue Reading

ದೇಶ

ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ

Published

on

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ಘೋಷಣೆ ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.

ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್‌ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.

ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ

ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

Trending