Connect with us

ದೇಶ

UK PM Starmer to Join Modi for Strategic Talks, Global Fintech Fest in Mumbai

Published

on

Mumbai: United Kingdom Prime Minister Keir Starmer arrived in Mumbai on Wednesday as part of his official India visit. He is scheduled to meet Indian Prime Minister Narendra Modi and also participate in the 6th Global Fintech Festival.

Starmer landed in Mumbai along with a high-level UK trade delegation and was received at the Chhatrapati Shivaji Maharaj International Airport by Maharashtra CM Devendra Fadnavis, Deputy CMs Eknath Shinde and Ajit Pawar, and Governor Ramesh Bais.

As part of Thursday’s agenda, PM Modi and PM Starmer will hold bilateral talks to review progress under the India–UK Vision 2035 roadmap. Discussions will focus on trade, investment, technology, defense, climate action, healthcare, education, and people-to-people ties.

Starmer will also attend the CEO Forum and speak at the Global Fintech Festival, showcasing the growing importance of India–UK collaboration in innovation and digital finance.

ದೇಶ

ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ

Published

on

ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಭಾವುಕ ವಿದಾಯ ನೀಡಲಾಯಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದಿಂದ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು 1997ರಲ್ಲೇ ನಿಧನರಾಗಿದ್ದರು. ಅವರ ಏಕೈಕ ಪುತ್ರ ಮುರಳಿ ಕೃಷ್ಣ ಕೂಡ 2026ರ ಜನವರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕುಟುಂಬದಲ್ಲಿ ಪುರುಷ ವಾರಸುದಾರರಿಲ್ಲದ ಕಾರಣ, ಜಾನಕಿ ಅವರ ಮೊಮ್ಮಗಳು ಅಪ್ಸರಾ ಕುಟುಂಬದ ಪರವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಅಜ್ಜಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಭಾವುಕ ಕ್ಷಣ ಕಂಡು ಸ್ಥಳದಲ್ಲಿದ್ದ ಅಭಿಮಾನಿಗಳು ಕಣ್ಣೀರಿಟ್ಟರು.

1956ರಲ್ಲಿ ರಾಮಪ್ರಸಾದ್ ಅವರನ್ನು ವಿವಾಹವಾಗಿದ್ದ ಎಸ್. ಜಾನಕಿ, ತಮ್ಮ ಪತಿಯನ್ನು ಪ್ರೀತಿಯಿಂದ ‘ರಾಮು’ ಎಂದು ಕರೆಯುತ್ತಿದ್ದರು. ಜಾನಕಿ ಅವರ ಸಂಗೀತ ಪಯಣದಲ್ಲಿ ರಾಮಪ್ರಸಾದ್ ಸದಾ ಬೆಂಬಲವಾಗಿ ನಿಂತಿದ್ದು, ಅವರ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದರು ಎಂದು ಕುಟುಂಬದವರು ನೆನಪಿಸಿಕೊಂಡರು.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಸಾವಿರಾರು ಅಮರ ಗೀತೆಗಳಿಗೆ ಧ್ವನಿಯಾಗಿದ್ದ ಎಸ್. ಜಾನಕಿ, 2017ರ ಅಕ್ಟೋಬರ್ 28ರಂದು ಮೈಸೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಾಯನಕ್ಕೆ ವಿದಾಯ ಹೇಳಿದ್ದರು. ಮಲಯಾಳಂ ಚಿತ್ರದ ‘ಅಮ್ಮ ಪೂವಿನುಂ’ ಜೋಗುಳ ಗೀತೆ ಅವರ ಗಾಯನ ಬದುಕಿನ ಕೊನೆಯ ದಾಖಲಾದ ಹಾಡಾಗಿ ಉಳಿದಿದೆ.

ಗಾನಕೋಗಿಲೆ ಎಸ್. ಜಾನಕಿ ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಮಧುರ ಕಂಠ, ಅಮರ ಗೀತೆಗಳು ಮತ್ತು ಅಪಾರ ಸಂಗೀತ ಸೇವೆ ಭಾರತೀಯ ಸಂಗೀತ ಲೋಕದಲ್ಲಿ ಸದಾಕಾಲ ಜೀವಂತವಾಗಿರಲಿವೆ.

Continue Reading

ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ

Published

on

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಹಾಗೂ ಪ್ರತ್ಯೇಕತಾವಾದಿಗಳನ್ನು ವೈಭವೀಕರಿಸುವ ವಿಷಯಗಳನ್ನು ಒಳಗೊಂಡಿದೆ ಎನ್ನಲಾದ ‘Legends and Personalities of Jammu and Kashmir’ ಪುಸ್ತಕದ ಪ್ರಕಟಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ ವಿಂಗ್ (CIK) ಮೂವರು ಪ್ರಕಾಶಕರನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಪುಸ್ತಕದಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕೆಲವು ಉಗ್ರರು ಮತ್ತು ಪ್ರತ್ಯೇಕತಾವಾದಿ ನಾಯಕರನ್ನು ಜಮ್ಮು-ಕಾಶ್ಮೀರದ ಪ್ರಮುಖ ವ್ಯಕ್ತಿಗಳಂತೆ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಪ್ರಕಾಶಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬಂಧಿತರಲ್ಲಿ ಇಬ್ಬರು ದೆಹಲಿ ಮೂಲದವರಾಗಿದ್ದು, ಮತ್ತೊಬ್ಬರು ಜಮ್ಮುವಿನ ನಿವಾಸಿಯಾಗಿದ್ದಾರೆ. ಈ ಹಿಂದೆ ದೆಹಲಿ ಮತ್ತು ಜಮ್ಮುವಿನ ವಿವಿಧ ಪ್ರಕಾಶನ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ತನಿಖೆ ವೇಳೆ ಡಿಜಿಟಲ್ ಸಾಕ್ಷ್ಯಗಳನ್ನು ಅಳಿಸಲು ಯತ್ನಿಸಿದ ಆರೋಪವೂ ಕೇಳಿಬಂದಿದ್ದು, ತನಿಖಾ ತಂಡ ಡೇಟಾವನ್ನು ಮರುಪಡೆದಿದೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆಯ ಭಾಗವಾಗಿ ಪುಸ್ತಕದ ಲೇಖಕರೊಬ್ಬರನ್ನು ರಾಜಸ್ಥಾನದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತೊಬ್ಬ ಲೇಖಕರಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಪುಸ್ತಕದ ಪ್ರಕಟಣೆಗೆ ಸಂಬಂಧಿಸಿದ ಅನುಮೋದನೆ ಪ್ರಕ್ರಿಯೆಯಲ್ಲಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪಾತ್ರದ ಕುರಿತೂ ತನಿಖೆ ನಡೆಯುತ್ತಿದೆ. ಈಗಾಗಲೇ ಒಬ್ಬ ಪ್ರಾಂಶುಪಾಲರು ಸೇರಿದಂತೆ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪುಸ್ತಕದ ಪ್ರಕಟಣೆ, ಮುದ್ರಣ ಹಾಗೂ ಪ್ರಚಾರಕ್ಕೆ ಸಂಬಂಧಿಸಿದವರ ವಿರುದ್ಧ ಯುಎಪಿಎ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಬೆಂಗಳೂರು

Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ

Published

on

ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.

ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.

Continue Reading

Trending